ರಾಯಚೂರು | ಅಕ್ಟೋಬರ್‌ 4ರಂದು ವಿಧಾನಸೌಧಕ್ಕೆ ಮುತ್ತಿಗೆ: ರಾಜ್ಯ ರೈತ ಸಂಘ

Date:

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ರಾಯಚೂರು ಜಿಲ್ಲೆಯ ಕೆಲ ತಾಲೂಕುಗಳನ್ನು ಮಾತ್ರ ಬರಗಾಲ ಪ್ರದೇಶಗಳೆಂದು ಘೋಷಣೆ ಮಾಡಿದೆ. ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವುದು, ಎಲ್ಲಾ ಬೆಳೆಗಳ ಸರ್ವೆ ಮಾಡುವುದು, ರೈತರ ಸಾಲಮನ್ನಾ ಸೇರಿದಂತೆ ರೈತರ ಇತರೆ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಅಕ್ಟೋಬರ್‌ 4ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಬಸವರಾಜ ನಾಯಕ ತಿಳಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಇರುವ ಪರಿಣಾಮ, ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ನಷ್ಟ ಅನುಭವಿಸಿದ್ದಾರೆ. ಸರ್ಕಾರ ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಿದೆ. ಕೆಲ ತಾಲೂಕುಗಳನ್ನು ಪರಿಗಣಿಸಿದ್ದಾರೆ. ಇನ್ನೂ ಕೆಲ ತಾಲೂಕುಗಳನ್ನು ಬರ ಪ್ರದೇಶಗಳೆಂದು ಪರಿಗಣಿಸಬೇಕಾಗಿದೆ. ಬರಗಾಲಕ್ಕೆ ಕೇವಲ ಹತ್ತಿ ಮತ್ತು ತೊಗರಿ ಬೆಳೆ ಪರಿಗಣಿಸುತ್ತಿದ್ದು, ಭತ್ತ ಬೆಳೆಯು ನಾಶವಾಗಿದ್ದರಿಂದ ಭತ್ತವನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕು” ಎಂದು ಮನವಿ ಮಾಡಿದರು.

“ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದು, ಸಾಲ ಮರು ಪಾವತಿ ಮಾಡಲು ಕಷ್ಟರವಾಗಿದೆ. ಹಾಗಾಗಿ ರೈತರು ಬ್ಯಾಂಕ್‌ನಲ್ಲಿ ಪಡೆದ ಸಾಲ ಮರುಪಾವತಿಯನ್ನು ಸರ್ಕಾರ ಮುಂದೂಡಬೇಕಾಗಿದೆ. ಟ್ರಾಕ್ಟರ್ ಸಾಲ ಕಂತು ಬಾಕಿ ಇದ್ದು, ಇದನ್ನೂ ಕೂಡ ಮುಂದೂಡಬೇಕು. ಬರಗಾಲ ಘೋಷಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಂಡದಿಂದ ಶೀಘ್ರವೇ ಪರಿಶೀಲನೆ ಮಾಡಿ ರೈತರಿಗೆ ನೆರವಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯ ಎನ್‌ಆರ್‌ಬಿಸಿ ಬಲದಂಡೆ ಟಿಎಲ್‌ಬಿಸಿ ಎಡದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಶಾಶ್ವತವಾಗಿ ಪರಿಹಾರ ಕಂಡು ಕೊಳ್ಳಬೇಕು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಿಸುವಂತೆ ರೈತರ ಆಗ್ರಹ

ಹಾಸನ ಜಿಲ್ಲೆಯ ಅರಸಿಕೆರೆಯಿಂದ ನಾಳೆ ಬೆಂಗಳೂರುವರೆಗೆ ಪಾದಯಾತ್ರೆ ನಡೆಯಲಿದೆ. ಜಿಲ್ಲೆಯಿಂದ ಸುಮಾರು 1,000 ಅಧಿಕ ಮಂದಿ ರೈತರು ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ರಾಜಾಸಾಬ್, ಹುಲಿಗೆಯ್ಯ, ವೀರೇಶ ನಾಯಕ ಸೇರಿದಂತೆ ಇತರರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ ರಾಯಚೂರು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...