ರಾಯಚೂರು | ಎಸ್‌ಸಿ/ಎಸ್‌ಟಿ ಮಾರ್ಗಸೂಚಿ ಉಲ್ಲಂಘನೆ – ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ

Date:

ಯರಮರಸ್ ಹತ್ತಿರ ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿಗೆ ಕೆಕೆಆರ್‌ಡಿಬಿ ಮಂಡಳಿಯ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ 28.95 ಕೋಟಿ ರೂ. ಅನುದಾನ ನೀಡಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ(ಎಸ್‌ಸಿ/ಎಸ್‌ಟಿ)ದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಕೂಡಲೇ ಇದರಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಾಜುಪಟ್ಟಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, “2020-21ನೇ ಸಾಲಿನಲ್ಲಿ ಕೆಕೆಆರ್‌ಡಿಬಿ ಮಂಡಳಿಯಿಂದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ 22.75 ಕೋಟಿ ರೂ. ಅನುದಾನವನ್ನು 2021 ಜನವರಿ 7ರಂದು ವಿಮಾನ ನಿಲ್ದಾಣದ ಕಾಮಗಾರಿಗೆ ನೀಡಿದೆ. 2022-23 ನೇ ಸಾಲಿನಲ್ಲಿ 6.22 ಕೋಟಿ ರೂ. ಅನುದಾನವನ್ನು ನೀಡಲಾಗಿದೆ. ಒಟ್ಟು 28.96 ಕೋಟಿ ರೂ. ಅನುದಾನವನ್ನು ನೀಡಲಾಗಿದೆ” ಎಂದರು.

ಎಸ್‌ಸಿಪಿ, ಟಿಎಸ್‌ಪಿ ಅನುದಾನ ನೀಡಿದ ಕುರಿತು 2023 ಜನವರಿ 28ರಂದು ಸಮಾಜ ಕಲ್ಯಾಣ ಇಲಾಖೆಯ ಎಸ್‌ಸಿಪಿ, ಟಿಎಸ್‌ಪಿ ಕೋಶಕ್ಕೆ ದೂರು ನೀಡಿದೆ. ಈ ಕುರಿತು ಇದೇ ಆಗಸ್ಟ್‌ 10ರಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ತನಿಖೆಗೆ ಆದೇಶಿಸಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಮಾನ ನಿಲ್ದಾಣದ ಕಾಮಗಾರಿಗೆ ಇನ್ನು 23 ಎಕರೆ 24 ಗುಂಟೆ ಜಮೀನು ಭೂ ಸ್ವಾಧೀನ ಪ್ರಕ್ರಿಯೆ ನಡೆಯದೇ ನೆನೆಗುದಿಗೆ ಬಿದ್ದಿದೆ. 2022 ನವೆಂಬರ್‌ನಲ್ಲಿ ಭೂ ಸ್ವಾಧೀನ ಮತ್ತು ಪುನರ್ವಸತಿಗಾಗಿ 13 ಕೋಟಿ ರೂ. ಅನುದಾನ ನೀಡಿದೆ. ಭೂ ಸ್ವಾಧೀನ ಮಾಡಲು ಜಿಲ್ಲಾಡಳಿತ ಮೌನವಹಿಸಿದೆ. ಭೂ ಸ್ವಾಧೀನ ಪ್ರಕ್ರಿಯೆ ಇದ್ದರೂ ತರಾತುರಿಯಲ್ಲಿ 2023 ಫೆಬ್ರವರಿ 16ರಂದು ಲೋಕೋಪಯೋಗಿ ಇಲಾಖೆಯಿಂದ 143 ಕೋಟಿ ರೂ.ನ ಟೆಂಡರ್ ಕರೆದು ಕೇವಲ 8 ದಿನಗಳ ಕಾಲಾವಕಾಶ ನೀಡಲಾಗಿತ್ತು. ಲೋಕೊಪಯೋಗಿ ಇಲಾಖೆಯು 14 ಕೋಟಿ ರೂ. ಕಾಮಗಾರಿ ಟೆಂಡರ್‌ನಲ್ಲಿ 16 ದಿನಗಳ ಕಾಲಾವಕಾಶ ನೀಡಿದ್ದು, ಅಕ್ರಮಕ್ಕೆ ಸಾಕ್ಷಿಯಾಗಿದೆ” ಎಂದರು.

“ವಿಮಾನ ನಿಲ್ದಾಣದ ಕಾಮಗಾರಿಯನ್ನು ಕೆಎಂವಿ ಪ್ರೊಜೆಕ್ಟ್ ಲಿಮಿಟೆಡ್ ಕಂಪನಿಗೆ ನೀಡಲಾಗಿದೆ. ಶೇ.4.99ರಷ್ಟು ಹೆಚ್ಚುವರಿ ಲಾಭಾಂಶಕ್ಕೆ ಟೆಂಡರ್ ಗುತ್ತಿಗೆ ನೀಡಿ ಅಕ್ರಮ ಎಸಗಿದೆ” ಎಂದು ದೂರಿದರು.

“ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಆರ್ಥಿಕ ಇಲಾಖೆಯ ಸುತ್ತೋಲೆಯಂತೆ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಅಂದಾಜು ಮೊತ್ತದ ಮೇಲೆ ಶೇ.5ಕ್ಕಿಂತ ಹೆಚ್ಚಿನ ಲಾಭಾಂಶವುಳ್ಳ ಟೆಂಡರ್ ಯಾವುದೇ ಕಾರಣಕ್ಕೂ ಅಂಗೀಕರಸತಕ್ಕದ್ದಲ್ಲವೆಂದು ತಿಳಿಸಿದೆ. ಅಂಗೀಕರಿಸಲು ಕಾರಣ ನೀಡಿ ಉನ್ನತ ಪ್ರಾಧಿಕಾರ ಅನುಮೋದನೆ ಪಡೆದು ಅಂಗೀಕರಿಸಬೇಕು. ಇಲ್ಲಿಯೂ ಅಕ್ರಮಕ್ಕೆ ದಾರಿ ಮಾಡಿಕೊಟ್ಟಿದೆ” ಎಂದು ಆರೋಪಿಸಿದರು.

“ವಿಮಾನ ನಿಲ್ದಾಣದ ಕಾಮಗಾರಿ ಆರಂಭಕ್ಕೂ ಮುಂಚೆ ಟೆಂಡರ್ ನಿಯಮಗಳ ಪ್ರಕಾರ ಸ್ಥಳದಲ್ಲಿ ಕಾಂಕ್ರಿಟ್ ಬ್ಯಾಚ್ ಮಿಕ್ಸ್ ಪ್ಲಾಂಟ್, ಹಾಟ್ ಮಿಕ್ಸ್ ಪ್ಲ್ಯಾಂಟ್ ಅಳವಡಿಸಬೇಕು. ಈ ಮೊದಲು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಿಯಿಂದ ಸಿಎಫ್‌ಒ ಪ್ರಮಾಣ ಪತ್ರ ಪಡೆಯಬೇಕು. ಆದರೇ ಪ್ರಮಾಣ ಪತ್ರ ಪಡೆದಿಲ್ಲದಿರುವುದು ನಿಯಮ ಬಾಹಿರವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 84.82 ಕೋಟಿ ವೆಚ್ಚದ ಕುಡಿಯುವ ನೀರು ಯೋಜನೆಗೆ ಶೀಘ್ರ ಚಾಲನೆ: ಶಾಸಕ ಪ್ರಭು ಚವ್ಹಾಣ 

“ಈ ಅಕ್ರಮಗಳಲ್ಲಿ ಭಾಗಿಯಾದ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್, ಅಧೀಕ್ಷಕ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್ ವಿರುದ್ಧ ಕೆಟಿಪಿಪಿ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಿಗೆ ದೂರು ನೀಡಲಾಗುವುದು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಕೀಲರುಗಳಾದ ಚಂದ್ರಶೇಖರ, ಅಯ್ಯಪ್ಪ, ಹಾಗೂ ಜಗದೀಶ, ನಾಗರಾಜ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...