ಓದುಗರ ಪತ್ರ | ಪಿಎಚ್‌ಡಿ ಸಂಶೋಧನಾರ್ಥಿಗಳ ಫೆಲೋಶಿಪ್ ಹೆಚ್ಚಿಸಿ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಸಮಾನತೆ ಬಗ್ಗೆ ಮಾತಾಡ್ತಾರೆ. ಇದಕ್ಕಾಗಿ, ಈ ಬಾರಿ ಅಲ್ಪಸಂಖ್ಯಾತರ ಮತಗಳು ಒಕ್ಕೊರಲಿನಿಂದ ಕಾಂಗ್ರೆಸ್‌ಗೆ ಬಂದವು. ಅನೇಕ ಯೋಜನೆಗಳನ್ನು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಶೈಕ್ಷಣಿಕ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಆದರೆ, ಕೋಮುವಾದಿ ಬಿಜೆಪಿ ಅಧಿಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಎಂಫಿಲ್, ಪಿಎಚ್‌ಡಿ ಸಂಶೋಧನಾರ್ಥಿಗಳ ಫೆಲೋಶಿಪ್ ಅನ್ನು 25 ಸಾವಿರದಿಂದ 10 ಸಾವಿರಕ್ಕೆ ಕಡಿತಗೊಳಿಸಿತು. ಅನೇಕ ಯೋಜನೆಗಳನ್ನು ರದ್ದು ಮಾಡಿತು.

ಇವಾಗ, ಮತ್ತೆ ಕಾಂಗ್ರೆಸ್ ಸರ್ಕಾರ ಬಂದಿದೆ. ಆದರೆ, ಈಗಲೂ ಬಿಜೆಪಿ ಮೋಟುಕುಗೊಳಿಸಿದ್ದ ರೀತಿಯಲ್ಲಿಯೇ ಯೋಜನೆಗಳು ಮುಂದುವರೆದಿವೆ. ರಾಜ್ಯದಲ್ಲಿ ಹೆಚ್ಚೆಂದರೆ 50ರಿಂದ 80 ಮಂದಿ ಅಲ್ಪಸಂಖ್ಯಾತ ಸಮುದಾಯದ ಸಂಶೋಧನಾರ್ಥಿಗಳು ಇರಬಹುದು. ಆದರೆ, ಅವರಿಗೆ ಜೆಆರ್‌ಎಫ್‌ ಮಾದರಿಯಲ್ಲಿ ಫೆಲೋಶಿಪ್ ಕೊಡ್ತಾ ಇದ್ದಿವಿ ಅಂತ ಜಾಹೀರಾತು ನೀಡಿರುವ ಸರ್ಕಾರ, ಮತ್ತೆ ಬಿಜೆಪಿ ಕಡಿತಗೊಳಿಸಿದ್ದಂತೆ ಕೇವಲ 10 ಸಾವಿರ ರೂ. ಫೆಲೋಶಿಪ್‌ ನೀಡುವುದಾಗಿ ಹೇಳಿದೆ. ಫೆಲೋಶಿಪ್‌ ಬಗ್ಗೆ ಅಧಿಕಾರಿಗಳಿಗೂ ಸರಿಯಾದ ಮಾಹಿತಿ ಇಲ್ಲ. ಕೆಲವರು 25,000 ರೂ. ಎಂದರೆ, ಇನ್ನೂ ಕೆಲವರು 10,000 ರೂ. ಎನ್ನುತ್ತಿದ್ದಾರೆ. ನೋಟಿಫಿಕೇಶನ್‌ನಲ್ಲಿ ಫೆಲೋಶಿಪ್ ಮೊತ್ತ ಎಷ್ಟು ಎಂದು ಸರಿಯಾಗಿ ತಿಳಿಸಲಾಗಿಲ್ಲ.

ಅಲ್ಪಸಂಖ್ಯಾತ ವರ್ಗದ ಮಕ್ಕಳು ಐಎಎಲ್‌, ಐಪಿಎಸ್‌, ಐಎಫ್‌ಎಸ್‌ – ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಅಗತ್ಯವಿರುವ ತರಬೇತಿಗಾಗಿ ಎಂಟ್ರೆನ್ಸ್ ಪರೀಕ್ಷೆಯಲ್ಲಿ ಪಡೆದ ರ್ಯಾಂಕ್ ಮೇಲೆ ದೆಹಲಿ, ಹೈದ್ರಾಬಾದ್, ಬೆಂಗಳೂರು, ಧಾರವಾಡ ಮುಂತಾದ ಪ್ರದೇಶಗಳ ಉನ್ನತ ಕೋಚಿಂಗ್ ಸೆಂಟರ್‌ಗಳಿಗೆ ಕಳುಹಿಸಿಕೊಡಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಇವಾಗ ಬೆಂಗಳೂರಿನ ಹಜ್ ಭವನದಲ್ಲಿ ರೂಂ ಗಳು ಕಾಲಿ ಇವೆಯಂತೆ ಅದಕ್ಕಾಗಿ ಇಲ್ಲಿಯೇ ಕೋಚಿಂಗ್ ಕೊಡ್ತಾರಂತೆ! ಇದು ಮೂರ್ಖತನ ಅಲ್ಲವೇ? ಇಲ್ಲಿ ಕೋಚಿಂಗ್ ನೀಡುವುದನ್ನೂ ಒಂದು ಆಯ್ಕೆಯನ್ನಾಗಿ ಮಾಡಬೇಕೇ ಹೊರತು, ದೆಹಲಿ, ಹೈದ್ರಾಬಾದ್ ಕೋಚಿಂಗ್ ಸೆಂಟರ್‌ಗಳಿಗೆ ಕಳುಹಿಸುವುದನ್ನೇ ನಿಲ್ಲಿಸುವುದು ಸರಿಯಲ್ಲ. ಇದು ಅಲ್ಪಸಂಖ್ಯಾತ ವರ್ಗದ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ಆಕಾಂಕ್ಷಿಗಳ ಕನಸ್ಸನ್ನು ನುಚ್ಚುನೂರು ಮಾಡುತ್ತದೆ.

ಅಲ್ಪಸಂಖ್ಯಾತ ವಿಧ್ಯಾರ್ಥಿಗಳು ಉನ್ನತ ಸ್ಥಾನಗಳನ್ನು ಪಡೆಯಬಾರದು, ಪಂಚರ್ ಹಾಕೋಕೆ ಹೋಗಬೇಕು ಅನ್ನೋದು ಇವರ ಆಲೋಚನೆಯಾಗಿದೆಯೇ? ಅಲ್ಪಸಂಖ್ಯಾತ ವರ್ಗದ ಮತಗಳನ್ನು ಪಡೆದವರು, ಅವರ ಶೈಕ್ಷಣಿಕ ವಿಷಯ ಬಂದಾಗ ಜಾಣ ಮೌನಕ್ಕೆ ಜಾರುತ್ತಾರೆ. ಕೂಡಲೇ ಜೆಆರ್‌ಎಫ್‌ ಮಾದರಿಯಲ್ಲಿ 30,000 ರೂ. ಫೆಲೋಶಿಪ್‌ ನಿಗದಿ ಮಾಡಬೇಕು.

– ಎಂ.ಕೆ ಸಾಹೇಬ್, ಕೊಪ್ಪಳ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...