ರಾಯಚೂರು | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಕಡಿತ; ಟಿಯುಸಿಐ ಖಂಡನೆ

Date:

ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಡಿತ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಡಿತದ ನಿರ್ಧಾರವನ್ನು ಹಿಂಪಡೆದು, ಸಹಾಯಧನವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು ಟಿಯುಸಿಐ ಒತ್ತಾಯಿಸಿದೆ.

ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಟಿಯುಸಿಐ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವವನ್ನು ಅಯಾ ತರಗತಿಗಳಿಗೆ ಅನುಗುಣವಾಗಿ 5,000 ರೂ.ನಿಂದ  60 ಸಾವಿರದವರೆಗೆ ನೀಡಲಾಗುತ್ತಿತ್ತು. ಪಿಹೆಚ್ ಡಿ, ಎಂಫಿಲ್‌ಗೂ ಕೂಡ ಸಹಾಯಧನ ದೊರೆಯುತ್ತಿತ್ತು. ಆದರೆ, ಕಾರ್ಮಿಕ ಇಲಾಖೆಯು ಅಕ್ಟೋಬರ್ 30ರಂದು ಹೊಸ ಆದೇಶ ಹೊರಡಿಸಿದ್ದು, ಆದೇಶದಂತೆ 1,100 ರೂ.ನಿಂದ 11 ಸಾವಿರ ರೂ.ಗೆ ಕಡಿತ ಮಾಡಲಾಗಿದೆ. ಇದು ಕಾರ್ಮಿಕ ವಿರೋಧಿ ನಡೆಯಲಾಗಿದೆ. ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ” ಎಂದು ಆರೋಪಿಸಿದ್ದಾರೆ.

“ಕಟ್ಟಡ, ಕಾರ್ಮಿಕ ಇಲಾಖೆಗೆ ಸಂಗ್ರಹವಾಗುವ ಸೆಸ್ ಹಣ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಪ್ರಸ್ತುತ ಮೂಲಗಳ ಪ್ರಕಾರ 10,263 ಕೋಟಿ ರೂ.ಗೂ ಹೆಚ್ಚು ಮೊತ್ತ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಲ್ಲಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಇದರಿಂದ ಅನೇಕ ಸೌಲಭ್ಯ ನೀಡುತ್ತಿದ್ದು, ಪ್ರತಿ ವರ್ಷ 6,700 ಕೋಟಿ ರೂ.ಗೂ ಹೆಚ್ಚು ಮೊತ್ತ ಉಳಿಯಲಿದೆ. ಇಷ್ಟಾದರೂ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನದ ಮೊತ್ತ ಕಡಿಮೆ ಮಾಡಿರುವುದು ಖಂಡನೀಯ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಮಾಜಿಕ ನ್ಯಾಯ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಬದ್ಧ ಎಂದು ತಮ್ಮ ಭಾಷಣಗಳಲ್ಲಿ ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಕಡಿತಗೊಳಿಸಿರುವುದು ಕಳವಳಕಾರಿ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಘಟನೆಯ ಹಕ್ಕೊತ್ತಾಯಗಳು

1) ಕಲಿಕಾ ಭಾಗ್ಯ ಯೋಜನೆಯಡಿ ಸಹಾಯಧನ ಕಡಿತಗೊಳಿಸುವ ಆದೇಶ ಹಿಂಪಡೆದು ಈ ಹಿಂದಿ ನಂತೆಯೇ ಹಣ ನೀಡಬೇಕು.
2) ಹಿಂದೆ ನೀಡುತ್ತಿದ್ದಂತೆ 1ರಿಂದ 4ನೇ ತರಗತಿಗೆ 5,000 ರೂ. ಹಾಗೂ 5ರಿಂದ 8ನೇ ತರಗತಿಗೆ 8,000 ರೂ. ನೀಡಬೇಕು.
3) ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ 15,000 ರೂ ನೀಡಬೇಕು. ಪದವಿಗೆ 25,000 ರೂ., ಬಿ.ಟೆಕ್‌ಗೆ 50,000 ರೂ., ನರ್ಸಿಂಗ್ ಪ್ಯಾರಾ ಮೆಡಿಕಲ್‌ಗೆ 40,000 ರೂ., ಬಿ.ಎಡ್‌ಗೆ 35,000 ರೂ., ಎಲ್‌ಎಲ್‌ಬಿಗೆ 30,000 ರೂ., ಪಿಎಚ್‌ಡಿಗೆ 25,000 ರೂ. ನೀಡಬೇಕು.
4) ಕಟ್ಟಡ ಕಾರ್ಮಿಕರಲ್ಲದವರು ಕಾರ್ಮಿಕರ ಗುರುತಿನ ಚೀಟಿ ಪಡೆದಿದ್ದನ್ನು ಪತ್ತೆ ಹಚ್ಚಿ ನಕಲಿ ಕಾರ್ಡು ಪಡೆದವರ ಮೇಲೆ ಕ್ರಮ ಕೈಗೊಳ್ಳಬೇಕು.
5) ಕಟ್ಟಡ ಕಾರ್ಮಿಕರು ನೋಂದಣಿ ಮಾಡುವಾಗ ವೇತನ ಚೀಟಿ, ಹಾಜರಾತಿ ಪಟ್ಟಿ ಕಡ್ಡಾಯವಾಗಿ ಸಲ್ಲಿಸಬೇಕು ಎಂಬ ನಿಯಮ ರದ್ದುಪಡಿಸಬೇಕು.

ಪ್ರತಿಭಟನೆಯಲ್ಲಿ ಜಿ. ಅಮರೇಶ್, ಆರ್ ಹುಚ್ ರೆಡ್ಡಿ , ಅಜೀಜ್ ಜಾಗೀರ್ದಾರ್, ಸೈಯದ್ ಅಬ್ಬಾಸ್ ಅಲಿ, ನಿರಂಜನ್, ಶಿವಯ್ಯ ,ಲಕ್ಷ್ಮಣ, ಆನಂದ, ನಬೀಸಾಬ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...