ಸಿಂಧನೂರು | ಲಾರಿ-ಹಾಲಿನ್‌ ಟ್ಯಾಂಕ್‌ ಮುಖಾಮುಖಿ ಡಿಕ್ಕಿ : ಓರ್ವ ಸಾವು, ಹಲವರಿಗೆ ಗಾಯ

Date:

ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಹೆಚ್.ಪಿ.ಕಂಪನಿ ಸಮೀಪ ಲಾರಿ ಮತ್ತು ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ ಸಾವನ್ನಪ್ಪಿದ್ದು, ಹಾಲಿನ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ.

ಗೊಬ್ಬರ ತುಂಬಿದ ಲಾರಿಯ ಚಾಲಕ ರಾಯಚೂರಿನ ಸಿಯಾತಲಾಬ್‌ನ ನಿವಾಸಿ ಶೇಖ್ ಅಬ್ದುಲ್ಲಾ (23) ಮೃತ ಚಾಲಕ. ಆರೋಗ್ಯ ಹಾಲಿನ ಟ್ಯಾಂಕರ್ ಚಾಲಕ ಶ್ರೀಕಾಂತ ಎನ್ನುವವನ ಸ್ಥಿತಿ ಗಂಭೀರವಾಗಿದ್ದು, ಇಷಾಕ್ ಹಾಗೂ ರಾಜಾಸಾಬ್ ಎನ್ನುವವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಗೊಬ್ಬರ ತುಂಬಿದ ಲಾರಿ ಸಿಂಧನೂರು ಕಡೆಯಿಂದ ಕಾರಟಗಿ ಕಡೆಗೆ ಹೊರಟಿದ್ದು, ಹಾಲಿನ ಟ್ಯಾಂಕರ್ ಕಾರಟಗಿಯಿಂದ ಸಿಂಧನೂರಿನ ಕಡೆಗೆ ಬರುವಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ಬೈಕ್, ಲಾರಿಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಆಂಜನೇಯ, ವಿರೂಪಾಕ್ಷಿ ಮತ್ತು ಕರಿಬಸ್ಸಪ್ಪ ಎನ್ನುವವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ತೀವ್ರತೆಗೆ ಲಾರಿ, ಆರೋಗ್ಯ ಹಾಲಿನ ಟ್ಯಾಂಕ್ ಮತ್ತು ಬೈಕ್ ನಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನಲೆ ಕೆಲ ಕಾಲ ಸಂಚಾರಿ ಸಮಸ್ಯೆ ಎದುರಾಯಿತು.

ಇದನ್ನೂ ಓದಿ : ಬೀದರ | ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ : 105 ಸಿಲಿಂಡರ್ ವಶಕ್ಕೆ, ನಾಲ್ವರ ಬಂಧನ

ಡಿವೈಎಸ್ಪಿ ಚಂದ್ರಶೇಖರ, ಗ್ರಾಮೀಣ ಸಿಪಿಐ ವಿನಾಯಕ, ಪಿಎಸ್‌ಐ ಮೌನೇಶ ಅವರು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...

ರಾಯಚೂರು | ಕೆಲಸ ಮಾಡದೇ ಕೂಲಿ ಪಾವತಿ ಆರೋಪ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಕೂಸ್ ಒತ್ತಾಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಅಕ್ರಮ,...