ರಾಯಚೂರು | ತುಂಗಭದ್ರ ಎಡದಂಡೆ ಕಾಲುವೆ ಕೆಳ ಭಾಗಕ್ಕೆ ನೀರು ಹರಿಸಲು ರೈತ ಸಂಘ ಆಗ್ರಹ

Date:

  • ರೈತರು ತಾಳ್ಮೆ ಕಳೆದುಕೊಂಡರೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೆ ಉಳಿಗಾಲವಿಲ್ಲ.
  • ಈ ಭಾಗದ ರೈತರಿಗೆ ಬೇಕಾದ ನೀರು ಒದಗಿಸುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

ತುಂಗಭದ್ರ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ಹರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲಿಸಿ ಸಿರವಾರ ಪಟ್ಟಣದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್‌ ಘೋಷಿಸಿದ ವ್ಯಾಪಾರಸ್ಥರು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ರೈತರ ಪ್ರತಿಭಟನೆ ಕರೆ ಹಿನ್ನಲೆಯಲ್ಲಿ ಬೆಳಿಗ್ಗೆಯಿಂದಲೇ ಸಿರವಾರ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವ್ಯಾಪಾರಸ್ಥರು ರೈತರ ಹೋರಾಟಕ್ಕೆ ಬೆಂಬಲಿಸಿದರು. ಪಟ್ಟಣದ ನೀರಾವರಿ ಇಲಾಖೆ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ ರೈತರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕ ಗಂಗಾಧರ ನಾಯಕ ಮಾತನಾಡಿ, “ರೈತರು ತಾಳ್ಮೆ ಕಳೆದುಕೊಂಡರೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೆ ಉಳಿಗಾಲ ಇರುವುದಿಲ್ಲ. ಸಿರವಾರ ತಾಲೂಕಿನಲ್ಲಿ ರೈತರು ಪ್ರತಿ ವರ್ಷ ತುಂಗಭದ್ರ ಕಾಲುವೆ ನೀರಿಗಾಗಿ ಹೋರಾಟ ನಡೆಸುತ್ತಲೇ ಇದ್ದಾರೆ. ನಾವುಗಳ ಹೋರಾಟ ಮಾಡಿದರೂ ನೀರು ಪಡೆಯದ ದೌರ್ಭಾಗ್ಯ ನಮ್ಮದಾಗಿದೆ, ನಾವು ಕೇಳುತ್ತಿರುವುದು ನಮ್ಮ ಪಾಲಿನ ನೀರಾಗಿದೆ. ಅದನ್ನು ನಾವು ಹೋರಾಟದ ಮೂಲಕವೇ ಪಡೆಯುವುದು ವಿಪರ್ಯಸವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮಾತನಾಡಿ, “ಈ ಭಾಗದ ರೈತರಿಗೆ ಬೇಕಾದ ನೀರು ಒದಗಿಸುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ. ನೀರಾವರಿ ಇಲಾಖೆ ಎನ್ನುವುದು ರೈತರಿಗಾಗಿ ಕೆಲಸ ಮಾಡಬೇಕು ಬದಲಿಗೆ ಬೇಕಾಬಿಟ್ಟಿಯಾಗಿ ಕೆಲಸ ಮಾಡಬಾರದು, ಇನ್ನು ಈ ಭಾಗದ ಜನ ಪ್ರತಿನಿಧಿಗಳು ಮೇಲ್ಭಾಗದಲ್ಲಿ ಜರುಗುತ್ತಿರುವ ಅಕ್ರಮ ನೀರಾವರಿಯ ಬಗ್ಗೆ ದ್ವನಿ ಎತ್ತಬೇಕು, ಅಂದಾಗ ಮಾತ್ರ ನಮ್ಮ ರೈತರಿಗೆ ನೀರು ಸಿಗಲು ಸಾಧ್ಯ. ಇಲ್ಲವಾದಲ್ಲಿ ನಮ್ಮ ರೈತರು ಮಳೆಯನ್ನು ನಂಬಿಕೊಂಡು ಬೆಳೆಗಳನ್ನು ಬೆಳೆಯಬೇಕಾದಿತು. ಕೃಷಿ ಕೆಲಸ ತೊರೆದು ಬೇರೆ ಕೆಲಸಕ್ಕೆ ಹೋಗಬೇಕಾದ ಪರಿಸ್ಥಿರಿ ಬರುತ್ತದೆ, ಅನ್ನದಾತನಿಗೆ ಕೆಲಸವಿಲ್ಲ ಎಂದಾದರೆ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಹೊಟ್ಟೆಗೆ ಅನ್ನ ಸಿಗುವುದಿಲ್ಲ ಎನ್ನುವುದು ಅರಿತುಕೊಳ್ಳಬೇಕು” ಎಂದು ಕಿಡಿಕಾರಿದರು.

ಕಾಂಗ್ರೇಸ್ ಮುಖಂಡ ಚುಕ್ಕಿ ಸೂಗಪ್ಪ ಸಾಹುಕಾರ ಮಾತನಾಡಿ, “ತುಂಗಭದ್ರ ಎಡದಂಡೆ ಕಾಲುವೆಗೆ ನೀರು ಬಾರದೇ ರೈತರು ಕಂಗಾಲಾಗಿದ್ದಾರೆ. ಇದರ ಬಗ್ಗೆ ಅಧಿಕಾರಿಗಳಿಗೆ ಕೇಳಿದರೆ ಮೇಲ್ಭಾಗದಲ್ಲಿ ನೀರು ಸರಿಯಾಗಿ ನಿರ್ವಹಣೆಯಾಗುತ್ತಿಲ್ಲ ಎಂದು ಸಬೂಬು ಕೊಡುತ್ತಾರೆ. ರೈತರು ಸುಮ್ಮನಿದ್ದಾರೆ ಎಂದರೆ ಅವರ ಕೈಯಲ್ಲಿ ಏನು ಮಾಡಲು ಸಾಧ್ಯವಿಲ್ಲ ಎನ್ನುವುದು ಅರ್ಥವಲ್ಲ, ಬದಲಿಗೆ ರೈತರು ತಾಳ್ಮೆಯಿಂದ ಇದ್ದಾರೆ. ಸಮಪರ್ಕವಾಗಿ ನೀರು ಹರಿಸದೇ ಹೋದಲ್ಲಿ ಮೇಲ್ಭಾಗದಲ್ಲಿ ಎಲ್ಲಾ ರೈತರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ಗ್ರಾಮಗಳ ಸಮಗ್ರ ಅಭಿವೃದ್ಧಿ ಒತ್ತಾಯಿಸಿ ಪ್ರತಿಭಟನೆ

ಪ್ರತಿಭಟನೆಯಲ್ಲಿ ಸಿರವಾರ ತಾಲೂಕಿನ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ರೈತಪರ ಸಂಘಟನೆ ಮುಖಂಡರು ಹಾಗೂ ಕನ್ನಡಪರ ಹಾಗೂ ದಲಿತಪರ ಸಂಘಟನೆ ಮುಖಂಡರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಿದರು.

ಬಿಗಿ ಪೋಲಿಸ್ ಬಂದೋಬಸ್ತ್ : ರೈತರು ಹಮ್ಮಿಕೊಂಡಿರುವ ಹೋರಾಟದಲ್ಲಿ ಯಾವುದೆ ಅಹಿತಕರ ಘಟನೆ ಜರುಗದಂತೆ ಸಿರವಾರ ಸಿಪಿಐ ಶಶಿಕಾಂತ್.ಎ, ಸಿರವಾರ ಪಿ.ಎಸ್.ಐ ಗುರುಚಂದ್ರ ಯಾದವ್ ನೇತೃತ್ವದಲ್ಲಿ ಪಟ್ಟಣದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಒದಗಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...