ರಾಯಚೂರು | ಕಲ್ಲಿದ್ದಲು ಕಳ್ಳತನ; ಗುತ್ತಿಗೆದಾರ ಮತ್ತು ರೈಲ್ವೇ ಸ್ಟೇಷನ್ ಮಾಸ್ಟರ್ ವಿರುದ್ಧ ಎಫ್‌ಐಆರ್

Date:

ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲನ್ನು ಅಕ್ರಮವಾಗಿ ಸಾಗಾಟ ಮಾಡಿದ್ದ ಪ್ರಕರಣದಲ್ಲಿ ರಾಯಚೂರಿನ ಯರಮರಸ್‌ ರೈಲೈ ನಿಲ್ದಾಣದ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರ ಶ್ರೀನಿವಾಸುಲು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕಲ್ಲಿದ್ದಲು ಕಳ್ಳತನವಾಗಿರುವ ಬಗ್ಗೆ ಯರಮರಸ್ ವಿದ್ಯುತ್ ಉತ್ಪಾದನಾ ಘಟಕದ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ಅವರು ರಾಯಚೂರು ಗ್ರಾಮೀಣ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ಕುರಿತು ಕೆಪಿಟಿಸಿಎಲ್‌ ತನಿಖಾ ಸಮಿತಿ ತನಿಖೆ ನಡೆಸಿದ್ದು, ಕಳ್ಳತನ ಬಯಲಿಗೆ ಬಂದಿದೆ.

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡಬೇಕಿದ್ದ ಕಲ್ಲಿದ್ದಲನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಅನಧಿಕೃತ ಜಾಗಕ್ಕೆ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಅಕ್ರಮದಲ್ಲಿ ಸ್ಟೇಷನ್ ಮಾಸ್ಟರ್ ಮತ್ತು ಗುತ್ತಿಗೆದಾರರ ಕೈವಾಡ ಇರುವುದು ಕಂಡುಬಂದಿದ್ದು, ಇಬ್ಬರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀನಿವಾಸುಲು ಅವರು ರಾಘವೇಂದ್ರ ಎಂಟರ್ ಪ್ರೈಸಸ್ ಹೆಸರಿನಲ್ಲಿ ರೈಲ್ವೆ ವ್ಯಾಗನ್ ಸ್ಬಚ್ಛಗೊಳಿಸುವ ಗುತ್ತಿಗೆ ಪಡೆದಿದ್ದರು. ಅವರು ಕಳೆದ ವಾರ (ನವೆಂಬರ್ 19, 20) ಐದು ಲಕ್ಷ ಮೌಲ್ಯದ 120 ಮೆಟ್ರಿಕ್ ಟನ್ ಕಚ್ಚಾ ಕಲ್ಲಿದ್ದಲು ಕಳ್ಳತನ ಮಾಡಿ, ಯರಮರಸ್ ರೈಲು ನಿಲ್ದಾಣದ ಹೊರ ಭಾಗದಲ್ಲಿ ಶೇಖರಿಸಿದ್ದರು ಎಂದು ಆರೋಪಿಸಲಾಗಿದೆ.

ವ್ಯಾಗನ್‌ನಲ್ಲಿ ಬರುವ ಕಲ್ಲಿದ್ದಲನ್ನು ವಿದ್ಯುತ್‌ ಘಟಕಗಳ ಪ್ರಾಂಗಣದಲ್ಲಿ ಸಂಪೂರ್ಣವಾಗಿ ಸುರಿಯಬೇಕು. ವ್ಯಾಗನ್ ಖಾಲಿಯಾದ ಬಳಿಕ ರೈಲು ಹಿಂದಿರುಗಲು ಹಸಿರು ನಿಶಾನೆ ನೀಡಬೇಕು. ಆದರೆ, ವ್ಯಾಗನ್‌ಗಳಲ್ಲಿ ದೊಡ್ಡ ಪ್ರಮಾಣದ ಕಲ್ಲಿದ್ದಲನ್ನು ಉಳಿಸಿಕೊಂಡು, ರೈಲನ್ನು ವಾಪಸ್ ಕಳುಹಿಸಲಾಗಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...