ರಭಸವಾಗಿ ಹರಿಯುತ್ತಿದ್ದ ನದಿಗೆ ಗಂಡನನ್ನು ತಳ್ಳಿದ ಹೆಂಡತಿ? ಸೇತುವೆ ಮೇಲೆ ಹೈಡ್ರಾಮಾ

Date:

ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಗಂಡ ತಾತಪ್ಪನನ್ನು ಕೃಷ್ಣಾ ನದಿಗೆ ತಳ್ಳಿರುವ ಆರೋಪದ ಘಟನೆ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ.

ನದಿಗೆ ಬಿದ್ದ ಯುವಕನ ಕಿರುಚಾಟ ಕೇಳಿ ಅಕ್ಕ-ಪಕ್ಕದ ಜಮೀನಿನವರು ಓಡೋಡಿ ಬಂದಿದ್ದಾರೆ. ಬ್ಯಾರೇಜ್ ಮಾರ್ಗವಾಗಿ ಹೊರಟಿದ್ದ ವಾಹನ ಸವಾರರು ಹಾಗೂ ಕೆಬಿಜೆಎನ್‌ಎಲ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾಗಿ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಯುವಕನನ್ನು ರಕ್ಷಿಸಿದ್ದಾರೆ.

ಏಪ್ರಿಲ್‌ 10ರಂದು ಮೂರು ತಿಂಗಳ ಹಿಂದೆಯಷ್ಟೇ ಗದ್ದೆಮ್ಮ ಮತ್ತ ತಾತಪ್ಪ ಮದುವೆಯಾಗಿದ್ದು, ಈ ನವ ದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್ ಮೇಲೆ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳಲು ನಿರ್ಧರಿಸಿದೆ. ಮೊದಲು ಪತ್ನಿಯ ಫೋಟೋ ತೆಗೆದ ಪತಿ ಬಳಿಕ ತನ್ನ ಫೋಟೋ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಈ ವೇಳೆ ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ ಸಮೀಪದಿಂದ ಫೋಟೊ ಕ್ಲಿಕ್ಕಿಸುವ ನೆಪದಲ್ಲಿ ಪತಿಯನ್ನು ನದಿಗೆ ತಳ್ಳಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾತಪ್ಪನಿಗೆ ಈಜು ಬಂದಿದ್ದರಿಂದ ಹೇಗೋ ಪ್ರಯಾಸಪಟ್ಟು ಈಜಿಕೊಂಡು ಹೋಗಿ ಕಲ್ಲು ಬಂಡೆಯ ಮೇಲೆ ಕುಳಿತು ರಕ್ಷಣೆಗಾಗಿ ಕೂಗಿದ್ದಾರೆ. ಇದೇ ವೇಳೆ “ಕಾಪಾಡಿ ಬ್ರೋ, ಅವಳನ್ನು ಹಿಡಿರಿ ಬ್ರೋ, ಯಾರಿಗಾದ್ರೂ ಫೋನ್ ಮಾಡಿ ಬ್ರೋ ಅಂತ ಜೋರಾಗಿ ಕಿರುಚಿದ್ದಾನೆ” ಎಂದು ವಿಡಿಯೋದಲ್ಲಿ ಸೆರೆಯಾಗಿದೆ. ದಾರಿಹೋಕರು ಇದನ್ನು ಗಮನಿಸಿ ಸ್ಥಳೀಯರಿಂದ ಹಗ್ಗ ತರಿಸಿ ಪ್ರಯಾಸಪಟ್ಟು ರಕ್ಷಣೆ ಮಾಡಿದ್ದಾರೆ.

ನದಿಯಿಂದ ಪಾರಾಗಿ ಬಂದ ಪತಿ, ನನ್ನ ಪತ್ನಿಯೇ ಕೆಳಕ್ಕೆ ತಳ್ಳಿದ್ದಳು ಎಂದು ಆರೋಪಿಸಿದ್ದಾನೆ. ಆದರೆ ಆಕೆ ಗಂಡನೇ ಕಾಲು ಜಾರಿ ಬಿದ್ದಿದ್ದಾನೆ ಎಂದು ಮಹಿಳೆ ವಾದಿಸಿದ್ದಾಳೆ. ಇವರಿಬ್ಬರ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...