ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸಚಿವರಿಗೆ ರಾಜ್ಯ ಸಚಿವ ಮನವಿ

Date:

ರಾಯಚೂರು ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ರಾಜ್ಯ ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್ ಬೋಸರಾಜು ಅವರು ಮನವಿ ಸಲ್ಲಿಸಿದರು.

ವಿಶಾಖಪಟ್ಟಣಂದಿಂದ ಮೆಹಬೂಬ್‍ನಗರದವರೆಗೆ ಸಂಚರಿಸುವ ಎಕ್ಸ್ಪ್ರೆಸ್ ರೈಲನ್ನು ರಾಯಚೂರು ನಗರದವರೆಗೆ ವಿಸ್ತರಣೆ ಮಾಡಬೇಕು. ರಾಯಚೂರಿನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಿನಿ ವಿಧಾನಸೌಧದಿಂದ ನಗರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಾದ ಯಕ್ಲಾಸಪುರ ರಸ್ತೆಯನ್ನು ಹಾದು ಹೋಗಿರುವ ರೈಲ್ವೆ ಸಂಪರ್ಕದ ಅಂಡರ್ ಪಾಸ್ ಬ್ರಿಡ್ಜ್ ಚಿಕ್ಕದಾಗಿದ್ದು ದ್ವಿಚಕ್ರ ವಾಹನಗಳು ಹೊರತುಪಡಿಸಿ, ಬೇರೆ ಯಾವ ವಾಹನಗಳು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಕಾರಣ ಈ ಸೇತುವೆಯನ್ನು ದೊಡ್ಡದಾಗಿ ನಿರ್ಮಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ರಾಯಚೂರು ನಿಲ್ದಾಣದಲ್ಲಿ ಎಕ್ಸಲೇಟರ್ ಅಳವಡಿಸಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರಾಯಚೂರು | ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಸಮಸ್ಯೆ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಸನಗೌಡ ಬಾದರ್ಲಿ

ಈ ವೇಳೆ ಕರ್ನಾಟಕ ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿ.ಬಿ ಜಯಚಂದ್ರ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...