ದೊಡ್ಡಬಳ್ಳಾಪುರ | ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ; ಗಾಯಿತ್ರಿ

Date:

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಬೆಂಗಳೂರು ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಮಾತನಾಡಿ, ಜಿಲ್ಲೆಯಲ್ಲಿ ಈಗ ಅಂತರ್ಜಲ ಕಡಿಮೆಯಾಗಿ 1600 ಅಡಿ ಆಳ ಹೋದರು ಬೋರ್‌ವೆಲ್‌ ನಲ್ಲಿ ನೀರು ಸಿಗುತ್ತಿಲ್ಲ. ಆದ್ದರಿಂದ ಮಳೆ ನೀರನ್ನು ಕೃಷಿ ಹೊಂಡದ ಮೂಲಕ ಹಾಗು ವಿವಿಧ ಕ್ರಮಗಳ ಮೂಲಕ ನೀರನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ನೀರಿನ ಮಿತ ಬಳಕೆ, ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳು ಮತ್ತು ನೀರಿನ ಮರು ಪೂರೈಕೆ ವಿಧಾನಗಳನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಿ. ಇದರಿಂದ ನೀರಿನ ಅಭಾವ ಸೃಷ್ಟಿ ಕಡಿಮೆಯಾಗಲಿದೆ ಎಂದು ರೈತರಿಗೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೊಡ್ಡಬಳ್ಳಾಪುರದ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ ಬಿ.ಜಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೀರಿನ ಅಭಾವ ಕಾಡುತ್ತಿದೆ. ಲಭ್ಯವಿರುವ ನೀರಿನಲ್ಲಿ ಶೇ.70 ರಷ್ಟು ಕೃಷಿಗೆ ಬಳಕೆ ಮಾಡಲಾಗುತ್ತಿದೆ. ಹಾಗಾಗಿ ಮಳೆ ನೀರನ್ನು ಚೆನ್ನಾಗಿ ಶೇಖರಣೆ ಮಾಡಿ ಕೃಷಿಗೆ ಪರಿಮಾಮಕಾರಿಯಾಗಿ ನೂತನ ತಂತ್ರಜ್ಞಾನವಾದ sensor ಸ್ವಯಂಚಾಲಿತ ನೀರಾವರಿ ಮೂಲಕ ಭೂಮಿಗೆ ಎಷ್ಟು ನೀರು ಬೇಕೋ ಅಷ್ಟು ನೀರು ಕೊಟ್ಟು ನೀರಿನ ನಿರ್ವಹಣೆ ಮಾಡಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕ್ರಮ ನಿರ್ವಹಣಾ ಘಟಕದ ನಿಷಿತ, ಕೃಷಿ ತಜ್ಞೆ ದೀಪ್ತಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಆರ್.ಕೆ. ಶಾಲಾದ ಸಹಾಯಕ ಕೃಷಿ ನಿರ್ದೇಶಕಿ ಸುಮಂಗಲ, ಕೃಷಿ ಅಧಿಕಾರಿ ನವೀನ್ ಮತ್ತು ಕಸ್ತೂರಯ್ಯ, ಜೈನ್ ನೀರಾವರಿ ಸಂಸ್ಥೆಯ ತೋಷಿತ್ ರೈ, ಫೈಲೋ ಸಂಸ್ಥೆಯ ಅನಿಲ್, ತಾಲ್ಲೂಕಿನ ಸಿಬ್ಬಂಧಿಗಳು ಹಾಗೂ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...