ಚಿಕ್ಕಬಳ್ಳಾಪುರ | ಭೂಮಿ ಕೊಡಲು ನಾವು ಸಿದ್ಧ : ಭಕ್ತರಹಳ್ಳಿ ಪ್ರತೀಶ್

Date:

ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಮಾಡಲು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಸಾಮೂಹಿಕವಾಗಿ ಸ್ವಾಗತಿಸಲಿದೆ. ನಾವು ಭೂಮಿ ಕೊಡಲು ಸಿದ್ಧ. ಯಾವುದೇ ಕಾರಣಕ್ಕೂ ಕೈಗಾರಿಕೆ ಸ್ಥಾಪನೆ ಮಾಡುವ ಸಂಕಲ್ಪದಿಂದ ಹಿಂದೆ ಸರಿಯಬಾರದು ಎಂದು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಸಾಮೂಹಿಕ ನಾಯಕತ್ವ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಸರಕಾರಕ್ಕೆ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ಅವರು, ರೈತರನ್ನು ದಿಕ್ಕು ತಪ್ಪಿಸುತ್ತಿರುವ ಕೆಲವು ಮುಖಂಡರ ನಡೆಯನ್ನಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಅವರು ಖಂಡಿಸಿದ್ದಾರೆ. ನಮ್ಮ ಮುಂದೆ ಒಂದು ಹೇಳುತ್ತೀರಿ? ರೈತರ ಮುಂದೆ ಹೋಗಿ ಮತ್ತೊಂದು ಹೇಳುತ್ತೀರಿ? ನಿಮ್ಮ ಮಾತಿಗೆ ಬೆಲೆ ನೀಡಿಯೇ ರೈತರೊಂದಿಗೆ ಸಮಾಲೋಚನಾ ಸಭೆ ಏರ್ಪಡಿಸಿ ಪಾರದರ್ಶಕತೆ ಮೆರೆಯಲಾಗಿದೆ. ಹೀಗಿದ್ದೂ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ. ಹಸಿರು ಶಾಲು ಹಾಕಿಕೊಂಡವರು ಮಾತ್ರ ರೈತರಲ್ಲ. ಶಾಲು ಹಾಕಿಕೊಳ್ಳದೇ ಇರುವ ರೈತರೂ ಸಾಕಷ್ಟು ಇದ್ದಾರೆ ಎಂದು ಹೇಳಿದ್ದಾರೆ. ಇದರಲ್ಲಿ ಏನೂ ತಪ್ಪಿಲ್ಲ ಎಂದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕೈಗಾರಿಕಾಭಿವೃದ್ಧಿಯಾಗಿ ಸ್ಥಳೀಯರಿಗೆ ಇದ್ದಲ್ಲಿಯೇ ಉದ್ಯೋಗ ನೀಡುತ್ತಿದ್ದಾರೆ. ಶಿಡ್ಲಘಟ್ಟ ತಾಲೂಕಿನಲ್ಲಿ ಮಾತ್ರ ಕೊರತೆಯಿತ್ತು. ಇದನ್ನು ಮನಗಂಡ ಶಾಸಕ ಬಿ.ಎನ್.ರವಿಕುಮಾರ್,ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಜಂಗಮಕೋಟೆ ಭಾಗದಲ್ಲಿ ಕೈಗಾರಿಕೆ ತರಲು ಶ್ರಮಿಸಿದ್ದಾರೆ. ಇದಾದಲ್ಲಿ ಸ್ಥಳೀಯರಿಗೆ ಉದ್ಯೋಗ ದೊರೆತು, ಹೊಸಕೋಟೆ, ಕೋಲಾರ, ದೊಡ್ಡಬಳ್ಳಾಪುರದತ್ತ ಕೆಲಸ ಹುಡುಕಿಕೊಂಡು ಹೋಗುವುದು ತಪ್ಪಲಿದೆ.ಮೇಲಾಗಿ ಭೂಮಿಕೊಡುವ ರೈತರಿಗೆ ಒಳ್ಳೆಯ ಬೆಲೆ ದೊರೆಯಲಿದೆ. ಇದನ್ನು ಅರ್ಥಮಾಡಿಕೊಳ್ಳದ ಕೆಲವರು ರಿಯಲ್ ಎಸ್ಟೇಟ್‌ನವರಿಗೆ, ಲೇಔಟ್ ಮಾಡುವವರಿಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಮಿ ಕೊಡಲು ತಕರಾರು ಮಾಡದೆ, ಸರಕಾರಕ್ಕೆ ತಕರಾರು ಮಾಡುತ್ತಿರುವುದು ಸರಿಯಲ್ಲ ಎಂದು ಬೇಸರಿಸಿದರು.
ಜಿಲ್ಲಾಧ್ಯಕ್ಷ ಮುನಿಕೆಂಪಣ್ಣ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದರಲ್ಲಿ ಎಳ್ಳಷ್ಟೂ ಸುಳ್ಳಿಲ್ಲ. ಯಾವ ರೈತರೂ ಕೆಲಸ ಮಾಡುವಾಗ ಹಸಿರು ಶಾಲು ಹಾಕಿಕೊಂಡು ಮಾಡುವುದಿಲ್ಲ.ಹೋದಲ್ಲಿ ಬಂದಲ್ಲಿ ಶಾಲು ಹಾಕಿಕೊಂಡೇ ಇರುವುದಿಲ್ಲ.ಕೆಲಸ ಮಾಡದವರು ಹೀಗೆ ಮಾಡಬಹುದು ಅಷ್ಟೇ ಎಂದು ಹೇಳಿದ ಅವರು, ಕೈಗಾರಿಕೆ ಸ್ಥಾಪನೆ ಮಾಡುವ ವಿಚಾರದಲ್ಲಿ ಇವರಷ್ಟು ಪಾರದರ್ಶಕವಾಗಿ ನಡೆದುಕೊಂಡ ಮತ್ತೊಬ್ಬ ಜನನಾಯಕರನ್ನು ನಾವು ಕಂಡಿಲ್ಲ ಎಂದು ಸಚಿವರನ್ನು ಪ್ರಶಂಶಿಸಿದರು.

ಜಂಗಮಕೋಟೆಯಲ್ಲಿ ಮೊನ್ನೆ ನಡೆದ ರೈತರ ಅಭಿಪ್ರಾಯ ಸಂಗ್ರಹದಲ್ಲಿ ಭಾಗಿಯಾಗಿದ್ದ ಶೇ.80ರಷ್ಟು ಮಂದಿ ಭೂಮಿ ಕೊಡಲು ಒಪ್ಪಿದ್ದಾರೆ. ಇದನ್ನು ಮನಗಂಡ ಕೆಲವರು ಗ್ರಾಮೀಣ ಪ್ರದೇಶಗಳಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದ್ದಾರೆ. ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಭೂಮಿಕೊಡಲು ಒಪ್ಪಿರುವ ಮಾಹಿತಿಯನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಬಾರದು. ಕಾನೂನು ಕೈಗೆತ್ತಿಕೊಂಡು ರೈತರಿಗೆ ತೊಂದರೆ ಕೊಡುವ ಯಾರೇ ಆಗಿರಲಿ ಅವರಿಗೆ ಕಾನೂನು ಪ್ರಕಾರವೇ ಬುದ್ಧಿ ಕಲಿಸಿ ಎಂದು ಸಚಿವರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ |‌ ಜಾತಿ ಜನಗಣತಿ: ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಿ; ಕೈವಾರ ಮಂಜುನಾಥ್

ವೇದಿಕೆಯಲ್ಲಿ ರೈತಸಂಘದ ಮುಖಂಡರಾದ ಆಂಜಿನಪ್ಪ, ಕದಿರಪ್ಪ, ಬಾಬೂಸಾಬ್, ನಾರಾಯಣಸ್ವಾಮಿ, ಚಿನ್ನಕೃಷ್ಣಪ್ಪ ಮತ್ತತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...