ಚಿಕ್ಕಬಳ್ಳಾಪುರ | ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಿ; ರೈತ ಸಂಘ ಮನವಿ

Date:

ಜಿಲ್ಲೆಯ ರೈತಾಪಿಗಳು ಮಹಿಳಾ ಸಂಘಗಳೇ ಮೊದಲಾಗಿ ನಾಗರೀಕರಿಗೆ ಕಿರುಸಾಲ ನೀಡುತ್ತಾ ಅವರನ್ನು ಬಡ್ಡಿಯ ಸುಳಿಗೆ ತಳ್ಳುವ ಮೈಕ್ರೋ ಫೈನಾನ್ಸ್ಗಳ ಹಾವಳಿಗೆ ತಿಲಾಂಜಲಿ ಇಡಲು ಜಿಲ್ಲಾಡಳಿತ, ರಾಜ್ಯ ಸರಕಾರ, ರಾಜ್ಯಪಾಲರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಡಾ.ಭಾಸ್ಕರ್ ಮೂಲಕ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ನಗರದ ಜಿಲ್ಲಾಡಳಿತ ಭವನದ ಎದುರು ಸೋಮವಾರ ಮೈಕ್ರೋ ಫೈನಾನ್ಸ್ ಹಾವಳಿ ವಿರುದ್ಧ ಕ್ರಮವಹಿಸಬೇಕು,ರಾಜ್ಯಪಾಲರು ರಾಜ್ಯ ಸರಕಾರ ಕಳಿಸಿದ ಸುಗೀವಾಜ್ಞೆಗೆ ಅಂಕಿತ ಹಾಕಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತೀಶ್, ಕೇಂದ್ರ ಸರಕಾರ ಶೇ೪೮ ರಷ್ಟು ಸಾಲವಿತರಣೆಗೆ ಕಡಿವಾಣ ಹಾಕಿದೆ.ಇದನ್ನು ಮನಗಂಡಿರುವ ರಾಜ್ಯ ಸರಕಾರ ಮೈಕ್ರೋಪೈನಾನ್ಸ್ ಹಾವಳಿ ತಡೆಯಲು ಸುಗ್ರೀವಾಜ್ಞೆಯ ಕರಡನ್ನು ಅನುಮೋಧನೆಗೆ ರಾಜ್ಯಪಾಲರಿಗೆ ಕಳಿಸಿಕೊಟ್ಟಿದೆ. ಅಂಕಿತ ಹಾಕಬೇಕಾದ ರಾಜ್ಯಪಾಲರು ಈಗಿರುವ ಕಾನೂನುಗಳನ್ನೇ ಇನ್ನಷ್ಟು ಬಿಗಿಮಾಡಿ ಸಂತ್ರಸ್ಥರಿಗೆ ನೆರವಾಗಬೇಕು. ಈಬಿಲ್ಲನ್ನು ಮತ್ತೊಮ್ಮೆ ಸಂಪುಟದಲ್ಲಿಟ್ಟು ಚರ್ಚೆ ಮಾಡಿ ಕಳಿಸಿಕೊಡಿ ಎಂದು ಸುಗ್ರೀವಾಜ್ಞೆಯ ಕಡರನ್ನು ಹಿಂದಿರುಗಿಸಿದ್ದಾರೆ. ಇದರಿಂದಾಗಿ ರೈತರ ಆತ್ಮಹತ್ಯೆಗಳು ಮತ್ತಷ್ಟು ಹೆಚ್ಚಾಗಲಿದ್ದು, ಸರಕಾರ ಕೂಡ ಇದನ್ನು ಮರುಪರಿಶೀಲಿಸಿ ರೈತರ ಪರವಾದ ಕಾನೂನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೌರಿಬಿದನೂರು ತಾಲೂಕು ಅಧ್ಯಕ್ಷ ಲೋಕೇಶ್‌ಗೌಡ, ಮಾತನಾಡಿ ರಾಜ್ಯದಲಿ ಮೈಕ್ರೋ ಫೈನಾನ್ಸ್ ಹಾವಳಿ ಮಿತಿಮೀರಿದೆ. ಸಾಲ ನೀಡುವಾಗ ನಯವಾಗಿ ವರ್ತಿಸುವ ಕಂಪನಿಗಳು ಸಾಲ ಪಡೆದಾದ ಮೇಲೆ ರೌಡಿಗಳ ಹಾಗೆ ವರ್ತಿಸುತ್ತಾರೆ. ಸಾಲದ ಕಂತು ಪಡೆಯಲು ಬೆಳ್ಳಂಬೆಳಿಗ್ಗೆ ಮನೆಗೆ ಬರುವ ವಸೂಲಿಗಾರರು ಕಂತು ಕಟ್ಟುವವರೆಗೆ ಮನೆಬಿಟ್ಟು ಹೋಗುವುದೇ ಇಲ್ಲ.ಸಣ್ಣ ಪುಟ್ಟ ಲೇವಾದೇವಿಗಾರರೂ ಕೂಡ ಇದೇ ಹಾದಿ ತುಳಿದಿರುವುದು ರೈತರು ,ಬಡ ಕೂಲಿ ಕಾರ್ಮಿಕರನ್ನು ಚಿಂತೆಗೀಡುಮಾಡುವAತೆ ಮಾಡಿದೆ. ರಾಜ್ಯ ಪಾಲರು ಸರಕಾರದ ಸುಗ್ರೀವಾಜ್ಞೆಯ ಬಿಲ್ಲಿಗೆ ಸಹಿಹಾಕಿ ರೈತರ ಹಿತಕಾಪಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಚಿಂತಾಮಣಿ ತಾಲೂಕು ಅಧ್ಯಕ್ಷ ಕದಿರೇಗೌಡ,ಕಾರ್ಯದರ್ಶೀ ಆಂಜಿನಪ್ಪ,ರಾಜ್ಯ ಮುಖಂಡ ಬೆಳ್ಳೂಟಿ ಮುನಿಕೆಂಪಣ್ಣ, ಜಿ.ವಿ.ರಘುನಾಥರೆಡ್ಡಿ,ಜಿಲ್ಲಾ ಗೌರವಾಧ್ಯಕ್ಷ ವೆಂಕಟರಾಮಯ್ಯ , ರಾಜಣ್ಣ,ಬಿ.ಮುನಿಯಪ್ಪ. ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ಬಿ.ಮುನೇಗೌಡ ಕಾರ್ಯದರ್ಶಿ ನವೀನ್ ಆಚಾರ್ಯ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...