ಮಂಡ್ಯ | ಕುಲಾಂತರಿ ಆಹಾರ ತಿರಸ್ಕರಿಸಲು ಆಗ್ರಹಿಸಿ ಮಳವಳ್ಳಿಯಲ್ಲಿ ರೈತರ ಪ್ರತಿಭಟನೆ

Date:

ಇತ್ತೀಚಿಗೆ ಸುಪ್ರೀಂ ಕೋರ್ಟ್ ಆದೇಶವೊಂದನ್ನು ಹೊರಡಿಸಿದ್ದು, ಅದು ಕುಲಾಂತರಿ ಆಹಾರವನ್ನು ಮಾರುಕಟ್ಟೆಗೆ ಬಿಡುವ ಬಹುರಾಷ್ಟ್ರೀಯ ಕಂಪನಿಗಳ ಹುನ್ನಾರಕ್ಕೆ ದಾರಿಯನ್ನು ಸುಳಿವು ಮಾಡಿಕೊಟ್ಟಿದೆ. ಈ ವ್ಯವಸ್ಥೆ ನಮ್ಮ ಒಕ್ಕೂಟದ ಹವಾಮಾನಕ್ಕೆ ಒಗ್ಗುವ, ವೈಪರೀತ್ಯಗಳಿಗೆ ಹೊಂದಿಕೊಳ್ಳುವ ಗುಣದ ಸಾವಯವ ಕೃಷಿ ಪದ್ಧತಿಗೆ ವಿರುದ್ಧವಾಗಿದೆ. ಇದನ್ನು ನಾವು ಒಗ್ಗಟ್ಟಾಗಿ ತಡೆಯಲೇ ಬೇಕು ಎಂದು ಸಾವಯವ ಕೃಷಿಕರ ಸಂಘದ ಮಳವಳ್ಳಿ ಅಧ್ಯಕ್ಷ ಎಂ ಎನ್ ಮಹೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದರು.

ಅವರು ಕುಲಾಂತರಿ ಕಾನೂನುಗಳಿಂದ ಆಗುವ ದುಷ್ಪರಿಣಾಮದ ಬಗ್ಗೆ ತಿಳಿಸಲು ಸೆ. 26ರ ಗುರುವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ತುಮಕೂರು ಜಿಲ್ಲೆ ದೊಡ್ಡ ಹೊಸೂರು ಗ್ರಾಮದ ಗಾಂಧೀಜಿ ಸಹಜ ಬೇಸಾಯ ಆಶ್ರಮದಲ್ಲಿ ನಾಲ್ಕು ದಿನಗಳ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ನಮ್ಮ ತಳಿಗಳು, ನಮ್ಮ ಪದ್ಧತಿ ನಾಶವಾಗುವ ಪರಿಸ್ಥಿತಿ ತಲೆ ದೊರಿದೆ. ಕುಲಾಂತರಿ ತಳಿಯ ಆಹಾರಗಳನ್ನು ತಿರಸ್ಕರಿಸಿ ಹೋರಾಟ ಮಾಡುವ ಸಲುವಾಗಿ ಮಂಡ್ಯ ಜಿಲ್ಲೆಯ ವತಿಯಿಂದ ಇದೇ ತಿಂಗಳ 29ನೇ ತಾರೀಕು ಭಾನುವಾರ ಸತ್ಯಾಗ್ರಹ ಆಯೋಜಿಸಲಾಗಿದೆ. ಈ ಒಂದು ಕಾನೂನು ರೈತರಿಗೆ ಮರಣ ಶಾಸನವಾಗಿರುವುದರಿಂದ ತೀವ್ರ ಪ್ರತಿಭಟನೆ ಮಾಡುವ ಮೂಲಕ ಈ ಕಾನೂನನ್ನು ರದ್ದುಗೊಳಿಸುವ ಮಹತ್ಕಾರ್ಯಕ್ಕೆ ರೈತರು ಕೈಜೋಡಿಸುವಂತೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳವಳ್ಳಿ ತಾಲೂಕು ಪಂಚಾಯಿತಿ ಆವರಣದಿಂದ ಮೆರವಣಿಗೆ ಮೂಲಕ ಹೊರಟು ಅನಂತರಾಮ ಸುತ್ತಿನ ಬಳಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದರು. ನಂತರ ತಾಲೂಕು ಕಚೇರಿಗೆ ತೆರಳಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಸಂಪೂರ್ಣ ಸಾವಯವ ಕೃಷಿಕ ಮುಖಂಡರುಗಳಾದ ನಂಜೇಗೌಡ್ರು ಬಿ ಎಂ ಭಾರತಿ ಕಾಲೇಜು ಕಾರ್ಯದರ್ಶಿ, ಚಿಕ್ಕಣ್ಣ ಕಾರ್ಯದರ್ಶಿ, ಗಜೇಂದ್ರ ಖಜಾಂಚಿ, ಡಾ. ಕಪನಿಗೌಡ್ರು, ಶಿವಕುಮಾರ್ ವಡ್ಡರಹಳ್ಳಿ, ನಾಗರಾಜ್ ಹಂಚಿಪುರ, ನಿತೀಶ್ ದುಗ್ಗನಹಳ್ಳಿ , ಕೇಶವಮೂರ್ತಿ, ಶಿವಕುಮಾರ್ ಜೆಸಿಬಿ, ಬೂದ್ನೂರ್ ಬೊಮ್ಮಯ್ಯ ಮಂಡ್ಯ, ಕುಮಾರ್ ನಂದೀಪುರ, ಅಶೋಕ್ ಕ್ಯಾತ್ನಳ್ಳಿ, ದಯಾಶಂಕರ್ ಪುರಸಭೆ ಮಾಜಿ ಅಧ್ಯಕ್ಷರು ರೈತ ಮಹಿಳೆಯರಾದ ಶ್ರೀಮತಿ ಶಾಂತ ಕೃಷ್ಣ ಮೈಸೂರು, ಶ್ರೀಮತಿ ತನುಜ, ಶ್ರೀಮತಿ ಸಿಂಧು ಸಂಘದ ಸದಸ್ಯರುಗಳು ಮತ್ತು ರೈತ ಮುಖಂಡರುಗಳು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...