ಬೀದರ್ | ವಿವಿಧ ಬೇಡಿಕೆ ಈಡೇರಿಕೆಗೆ ರೈತ ಸಂಘ ಆಗ್ರಹ

Date:

ರಾಜ್ಯ ಸರ್ಕಾರ ಬೀದರ ಜಿಲ್ಲೆಯನ್ನು ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರಿಗೆ ಬರ ಪರಿಹಾರ
ಕೊಡುವಲ್ಲಿ ತಾರತಮ್ಯ ಎಸಗುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಮಂಗಳವಾರ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಸಲ್ಲಿಸಿದರು.

“ಸತತವಾಗಿ ರಾಜ್ಯದ ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಿಲುಕುತ್ತಿದ್ದಾರೆ. ಇದು ಅತ್ಯಂತ ಗಂಭೀರವಾದ ವಿಷಯ. ಆದರೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಅನುದಾನ ಬಿಡುಗಡೆಯಾದರೂ ಎಲ್ಲ ರೈತರಿಗೆ ಪರಿಹಾರ ಹಣ ಜಮೆ ಮಾಡದೇ ತಾರತಮ್ಯ ಮಾಡಲಾಗುತ್ತಿದೆ. ಇದು ಬರಗಾಲದಿಂದ ತತ್ತರಿಸಿದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳೆದ ವರ್ಷಗಿಂತ ಶೇ.70% ರಷ್ಟು ಬೆಲೆ ಏರಿಸಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೂಡಲೇ ಸರ್ಕಾರ ಎಲ್ಲ ರೈತರಿಗೂ ಶೇ.75% ರಿಯಾಯಿತಿ ದರದಲ್ಲಿ ಬೀಜ ವಿತರಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ 15 ದಿನಗಳ ಒಳಗಾಗಿ ಹಣ ಪಾವತಿಸುವ ನಿಯಮವಿದೆ. ಅದನ್ನು ಮೀರಿದರೆ ರೈತರಿಗೆ ಸರ್ಕಾರದ ನಿಯಮದಂತೆ 14% ಬಡ್ಡಿ ಸಹಿತ ಹಣವನ್ನು ಪಾವತಿಸಬೇಕು. ಆದರೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ನಿಗದಿತ ಸಮಯಕ್ಕೆ ಹಣ ಪಾವತಿಸದೆ ಅನ್ಯಾಯ ಮಾಡಲಾಗುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ರೈತರಿಗೆ ನ್ಯಾಯ ಒದಗಿಸಬೇಕು. ಜಿಲ್ಲೆಯ ಎಲ್ಲ ಶಾಸಕ, ಸಚಿವರು ಜಿಲ್ಲೆಯ ರೈತರ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಕಬ್ಬಿನ ಬಾಕಿ ಉಳಿದ ಹಣ ಹಾಗೂ ಬರ ಪರಿಹಾರ, ಬೆಳೆ ವಿಮೆ ಹಣ ಕೊಡಿಸಲು ಮುತುರ್ಜಿ ವಹಿಸಬೇಕು” ಎಂದರು.

“ಸರ್ಕಾರಿ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‌ಗಳಿಂದ ಸಾಲ ಪಡೆದ ರೈತರಿಗೆ ಸಾಲ ಮರುಪಾವತಿ ನೋಟಿಸ್‌ ನೀಡುವುದು. ಸಾಲ ವಸೂಲಿಗೆ ಬ್ಯಾಂಕ್‌ ಅಧಿಕಾರಿಗಳು ರೈತರ ಮನೆಗೆ ಬಂದು ಕಿರುಕುಳ ಕೊಡುವುದು ತಪ್ಪಿಸಬೇಕು. ಕಾಡು ಪ್ರಾಣಿಗಳಿಂದ ಹಾಳಾದ ಬೆಳೆಗಳಿಗೆ ಸೂಕ್ತ ವೈಜ್ಞಾನಿಕ ಪರಿಹಾರ ನೀಡಬೇಕು. ಬರ ಪರಿಹಾರಕ್ಕಾಗಿ ರೈತರು ಪ್ರತಿನಿತ್ಯ ತಹಸೀಲ್ ಹಾಗೂ ಕೃಷಿ ಕಚೇರಿಗಳಿಗೆ ಅಲೆದಾಟ ನಡೆಸುವುದು ತಪ್ಪಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಹಾರದ ಸಂದಾಯವಾಗದ ರೈತರನ್ನು ಗುರುತಿಸಿ ಪರಿಹಾರ ಧನ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ನೀತಿಯಂತೆ ಐಪಿ ಸೆಟ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲೆಯ ರೈತರ ಎಲ್ಲ ಬೇಡಿಕೆಗಳನ್ನು ಕೂಡಲೇ ಈಡೇರಿಸಲು ಮುಂದಾಗಬೇಕು. ಇಲ್ಲದಿದ್ದರೆ ಉಗ್ರ ಹೊರಾಟ ರೂಪಿಸಲಾಗುವುದು. ಅದಕ್ಕೆ ಸರಕಾರ ಹಾಗೂ ಜಿಲ್ಲಾಡಳಿತವೇ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಆದೇಶ ಪಾಲಿಸದ ಕಲ್ಯಾಣ ಮಂಡಳಿ; ಹೈಕೋರ್ಟ್‌ ಅಸಮಾಧಾನ

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಖಾಸೀಂ ಅಲಿ, ವಿಠ್ಠಲರಾವ ಮೇತ್ರೆ, ನಾಗೇಂದ್ರಪ್ಪ  ತರನಳ್ಳಿ, ವಿಠ್ಠಲ ರೆಡ್ಡಿ , ಬಸವರಾಜ ಅಷ್ಟೂರ್ , ರುದ್ರಯ್ಯಾ ಸ್ವಾಮಿ, ಸಂತೋಷ ಗುದುಗೆ , ಗುಂಡೆರಾವ್ ಕುಲಕರ್ಣಿ, ಮುಖಮೊದ್ದೀನ್ ಪಟೆಲ್, ಕರಬಸಪ್ಪ ಹುಡುಗಿ, ಭವರಾವ ನೆಲವಾಡೆ , ಪರಮೇಶ್ವರ ಗೌರ, ಶಿವರಾಜ ಜಲ್ದೆ , ವಿನೋದ ಚಿಂತಾಮಣಿ ಸೇರಿದಂತೆ ಇತತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...