ರಾಜಪ್ಪ ದಳವಾಯಿಯವರು ಸಾಂಸ್ಕೃತಿಕ ಶ್ರಮಜೀವಿ: ಬರಗೂರು ರಾಮಚಂದ್ರಪ್ಪ

Date:

ಅಧ್ಯಾಪಕ ಡಾ.ರಾಜಪ್ಪ ದಳವಾಯಿ ಅವರು ಅಂದು-ಇಂದುಗಳ ಬಂಧು, ಸಾಂಸ್ಕೃತಿಕ ಶ್ರಮಜೀವಿ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಬಣ್ಣಿಸಿದರು.

ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಆವರಣದ ಡಾ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಡಾ.ರಾಜಪ್ಪ ದಳವಾಯಿಯವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ವಿದ್ಯಾರ್ಥಿಗಳಿಂದ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

“ನಾನು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷನಾಗಿದ್ದ ಅವಧಿಯಲ್ಲಿ 125 ಪುಸ್ತಕಗಳನ್ನು ಏಕಕಾಲಕ್ಕೆ ಮುದ್ರಿಸಿ ಬಿಡುಗಡೆಗೊಳಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದೆ. ಆ ಸಮಯದಲ್ಲಿ ಹಗಲು, ರಾತ್ರಿ ಎನ್ನದೆ ಒಪ್ಪಿಕೊಂಡ ಕೆಲಸವನ್ನು ನಿರಂತರವಾಗಿ ನಿರ್ವಹಿಸಿದರು. ಎಷ್ಟೋ ಸಂದರ್ಭದಲ್ಲಿ ಪ್ರಿಂಟಿಂಗ್ ಪ್ರೆಸ್‌ನಲ್ಲಿ ರಾತ್ರಿಯವರೆಗೆ ಕೆಲಸ ಮಾಡಿ, ಪೇಪರ್ ಮೇಲೆ ಮಲಗಿ, ಬೆಳಿಗ್ಗೆ ಮತ್ತೆ ಎದ್ದು ಪ್ರೂಫ್ ರೀಡಿಂಗ್ ಕೆಲಸವನ್ನು ನಿರ್ವಹಿಸಿ ಯೋಜನೆ ಯಶಸ್ಸಾಗಲು ಕಾರಣರಾದರು” ಎಂದು ನೆನಪಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಪ್ಪ ದಳವಾಯಿಯವರಿಗೆ ಸಿಗಬೇಕಾದ ಸ್ಥಾನಮಾನಗಳು ಸಿಗಲಿಲ್ಲ. ಅವರದು ನಿರಂತರವಾಗಿ ಅಲೆಮಾರಿತನವಾಗಿತ್ತು. ಬಹಳ ಸಂದರ್ಭಗಳಲ್ಲಿ ರಾಜಪ್ಪ ದಳವಾಯಿಯವರು ತಮ್ಮ ಕೆಲಸಕ್ಕಿಂತ ಬೇರೆಯವರ ಕೆಲಸಗಳಿಗೆ ಒತ್ತು ಕೊಟ್ಟು ನನ್ನ ಬಳಿ ಬರುತ್ತಿದ್ದರು” ಎಂದರು.

“ನನಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೀಳ್ಕೊಡುಗೆಯನ್ನೇ ಮಾಡಲಿಲ್ಲ. ಆದರೆ ರಾಜಪ್ಪ ದಳವಾಯಿ ಅವರಿಗೆ ಬೀಳ್ಕೊಡುಗೆ ನೀಡಿರುವುದು ನನಗೆ ಸಂತಸ ತಂದಿದೆ. ಇಂತಹ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿರುವುದಕ್ಕೆ ಕನ್ನಡ ಅಧ್ಯಯನ ಕೇಂದ್ರಕ್ಕೆ ಅಭಿನಂದನೆ” ಎಂದರು.

“ರಾಜಪ್ಪ ದಳವಾಯಿಯವರು ಪುರಾಣ ಮತ್ತು ಐತಿಹಾಸಿಕ ವಿಷಯಗಳನ್ನು ಸಮಕಾಲೀನಗೊಳಿಸುವ ಮಾದರಿಯಲ್ಲಿ ನಾಟಕ ಕೃತಿಗಳನ್ನು ರಚಿಸಿದ್ದಾರೆ. ಅವರ ಕುಲಂ, ಸುಯೋಧನ, ಒಂದು ಬೊಗಸೆ ನೀರು, ಪ್ರೀತಿಯ ಹುಡುಕುತ್ತಾ, ಮುಖ್ಯಮಂತ್ರಿ ಅರಸು ನಾಟಕಗಳು ಇದಕ್ಕೆ ಉದಾಹರಣೆಗಳು” ಎಂದರು.

ಕರ್ನಾಟಕ ಲೇಖಕಿಯ ಸಂಘದ ಅಧ್ಯಕ್ಷೆ ಮತ್ತು ಕವಿ, ನಾಟಕಕಾರ್ತಿ ಡಾ ಎಚ್ ಎಲ್ ಪುಷ್ಪ ಮಾತನಾಡಿ, “ಕನ್ನಡದ ಮಹತ್ವದ ನಾಟಕಕಾರರ ಸಾಲಿನಲ್ಲಿ ರಾಜಪ್ಪ ದಳವಾಯಿ ಅವರಿಗೆ ಸ್ಥಾನವಿದೆ. ಅವರು ಸಂಘಟನೆಯಲ್ಲಿ ತೊಡಗಿಕೊಂಡೇ ಮಹತ್ವದ ನಾಟಕಗಳನ್ನು ರಚಿಸಿದ್ದಾರೆ. ಅವುಗಳು ಯಶಸ್ವಿ ನಾಟಕಗಳು” ಎಂದರು.

“ಬಂಡಾಯ ಸಂಘಟನೆಯ ಒಡನಾಡಿಯಾಗಿ ನಾನು ಅವರೊಂದಿಗೆ ಕಾಲ ಕಳೆದಿದ್ದೇನೆ. ಪಂಪನ ಕುರಿತ ನಾಟಕಗಳ ರಚನಾ ಶಿಬಿರದಲ್ಲಿ ನಾವಿಬ್ಬರೂ ಒಟ್ಟಿಗೆ ನಾಟಕ ರಚಿಸಿದೆವು. ಅನಂತರ ಕೂಡ ರಾಜಪ್ಪ ದಳವಾಯಿಯವರು ನಾಟಕ ರಚನೆಯನ್ನು ಗಂಭೀರವಾಗಿ ಪರಿಗಣಿಸಿದರು. ಅವರದು ವಿಶಿಷ್ಟ ವ್ಯಕ್ತಿತ್ವ ಮತ್ತು ಮನೋಧರ್ಮ. ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಕೊಂಡೇ ಸಂಘಟನೆಯಲ್ಲಿ ಸಕ್ರಿಯರಾಗಿರುವುದು ಮಹತ್ವದ ಸಂಗತಿ” ಎಂದರು.

ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಡೊಮಿನಿಕ್ ಮಾತನಾಡಿ, “ವಿದ್ಯಾರ್ಥಿಗಳೊಡನೆ ಸಹಜವಾಗಿ ಬೆರೆಯುವ ಮತ್ತು ಅವರ ಬದುಕನ್ನು ಕಟ್ಟಿಕೊಡುವಲ್ಲಿ ರಾಜಪ್ಪ ದಳವಾಯಿ ಅವರ ಪಾತ್ರ ಬಹುದೊಡ್ಡದು” ಎಂದರು.

ರಾಜಪ್ಪ ದಳವಾಯಿಯವರ ಪತ್ನಿ ಮಂಜುಳಾ ಬಿ ಸಿ ಮಾತಾಡಿ, “ನಮ್ಮಿಬ್ಬರ ಬದುಕಿನಲ್ಲಿ ಪರಸ್ಪರ ಗೌರವಿಸಿಕೊಂಡು ಬಂದಿದ್ದೇವೆ. ಅವರು ಮಾಡುವ ಕೆಲಸಕ್ಕೆ ನಾನು, ನನ್ನ ಕೆಲಸಕ್ಕೆ ಅವರು ಎಂದಿಗೂ ಅಡ್ಡಗಾಲು ಹಾಕಿಲ್ಲ” ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ರಾಜಪ್ಪ ದಳವಾಯಿ ಅವರು, “ನಾನು ಇಂದು ಏನಾಗಿದ್ದೇನೆಯೋ ಅದರಲ್ಲಿ ವಿದ್ಯಾರ್ಥಿಗಳು ಮತ್ತು ನನ್ನ ಒಡನಾಡಿಗಳ ಪಾತ್ರ ಮಹತ್ವವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ, ಒಡನಾಡಿಯಿಂದಲೂ ನಾನು ಬಹಳಷ್ಟು ಕಲಿತಿದ್ದೇನೆ” ಎಂದರು.

“ಪ್ರತಿ ತಿಂಗಳು ನನಗೆ ಸಂಬಳ ಬಂದಾಗ ನಾನು ಈ ತಿಂಗಳು ನನ್ನ ವಿದ್ಯಾರ್ಥಿಗಳಿಗೆ ಎಷ್ಟು ಪ್ರಮಾಣದಲ್ಲಿ ಪರಿಣಾಮಕಾರಿಯಾಗಿ ಬೋಧಿಸಿದ್ದೇನೆಂದು ಯೋಚಿಸುತ್ತೇನೆ. ನಾನು ಬೋಧಿಸುವ ವೇಳೆ ವಿದ್ಯಾರ್ಥಿ ನನ್ನ ಮಾತುಗಳನ್ನು ಕೇಳಿ ಬೇರೆಡೆ ಮುಖ ತಿರುಗಿಸಿದರೆ ನಾನು ಅವನಿಗೆ ನ್ಯಾಯ ಒದಗಿಸಿಲ್ಲವೆಂದು ಅರ್ಥವಾಗಬೇಕು. ಈ ಹಿನ್ನೆಲೆಯಲ್ಲಿ ಪ್ರತಿ ತರಗತಿಗಳಲ್ಲೂ ಬೋಧಿಸುವ ಯತ್ನವನ್ನು ನಾನು ಮಾಡಿದ್ದೇನೆ” ಎಂದರು.

“ನನ್ನ ಅಲೆಮಾರಿತನಕ್ಕೆ ಕಾರಣ ಸ್ವಲ್ಪ ಸಂಬಳ ಹೆಚ್ಚಾದರೆ ಇನ್ನೂ ನಾಲ್ಕು ಜನಕ್ಕೆ ನೆರವು ನೀಡಬಹುದು ಎಂಬ ಉದ್ದೇಶವಾಗಿತ್ತು. ಅದೇ ಕಾರಣಕ್ಕೆ ತಾತ್ಕಾಲಿಕ ಉಪನ್ಯಾಸಕನಿಂದ ಖಾಯಂ ಅಧ್ಯಾಪಕನಾದ ನಂತರ ಕೂಡ ರಾಜ್ಯದ ಬೇರೆಬೇರೆ ವಿಶ್ವವಿದ್ಯಾಲಯಗಳಲ್ಲಿ ಕೆಲಸ ಮಾಡಿದೆ” ಎಂದರು.

ಬೆಂಗಳೂರು, ಶಿವಮೊಗ್ಗ, ಮೈಸೂರು, ಕಲಬುರಗಿ, ಬೆಳಗಾವಿ, ಮಂಡ್ಯ, ದಾವಣಗೆರೆ ಮೊದಲಾದ ಜಿಲ್ಲೆಗಳಿಂದ ರಾಜಪ್ಪ ದಳವಾಯಿಯವರ ಶಿಷ್ಯರು ಮತ್ತು ಸ್ನೇಹಿತರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮತದಾರರು ಬಿಜೆಪಿಯ ಸುಳ್ಳು ಭರವಸೆಗಳಿಗೆ ತಕ್ಕ ಉತ್ತರ ನೀಡಲಿದ್ದಾರೆ: ಚ್.ಎಫ್. ಜಕ್ಕಪ್ಪ

ಕಾರ್ಯಕ್ರಮದಲ್ಲಿ ಡಾ ಕೆ ಸಿ ಶಿವಾರೆಡ್ಡಿ, ಡಾ. ಬಿ ಗಂಗಾಧರ್, ಡಾ. ಸಿ ಪಿ ನಾಗರಾಜ್, ಡಾ. ಚಿತ್ತಯ್ಯ ಪೂಜಾರ್, ಡಾ. ಹೊನ್ನು ಸಿದ್ಧಾರ್ಥ, ಭಕ್ತರಹಳ್ಳಿ ಕಾಮರಾಜ್, ಬೆಳಗಾವಿ ವಿಶ್ವವಿದ್ಯಾಲಯ ಕುಲಪತಿ ಡಾ. ತ್ಯಾಗರಾಜ್, ಡಾ. ಎಂ ಜಿ ಹೆಗಡೆ, ನಟ ಸಂಪತ್ ಮೈತ್ರೇಯ, ಪತ್ರಕರ್ತ ದಿಲಾವರ್ ರಾಮದುರ್ಗ, ಕಲಾವಿದ ಕೃಷ್ಣಾ ರಾಯಚೂರು, ರಂಗಾಯಣದ ಮಾಜಿ ನಿರ್ದೇಶಕ ಜನಾರ್ದನ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...