ಚಿಕ್ಕಬಳ್ಳಾಪುರ | ಆ.27ರಂದು ರಾಜಭವನ ಚಲೋ

Date:

ಸ್ವಚ್ಛ, ನಿಷ್ಕಳಂಕ ರಾಜಕಾರಣಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.27ರಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ನೇತೃತ್ವದಲ್ಲಿ ರಾಜಭವನ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಕೆ.ಎಂ.ಕೃಷ್ಣಮೂರ್ತಿ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಒಳ್ಳೆಯವರೇ. ಆದರೆ, ಅವರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದಾರೆ. ಇಕ್ಕಟ್ಟಿಗೆ ಸಿಲುಕಿಸಿ ಅವರಿಂದ ಈ ರೀತಿಯ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಖಾಸಗಿ ವ್ಯಕ್ತಿ ದೂರು ನೀಡಿದ 24 ಗಂಟೆಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಸಲಾಗಿದೆ. ರಾಜ್ಯಪಾಲರು ಇದನ್ನು ತಡೆಯಬಹುದಿತ್ತು. ಆದರೆ, ಕೇಂದ್ರದ ತಾಳಕ್ಕೆ ಕುಣಿಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ತನಿಖಾ ಸಂಸ್ಥೆಗಳ ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತುಪಡಿಸಿರುವ ಕುಮಾರಸ್ವಾಮಿ(ಗಣಿ ಹಗರಣ), ಶಶಿಕಲಾ ಜೊಲ್ಲೆ(ಮೊಟ್ಟೆ ಹಗರಣ), ಜನಾರ್ಧನ ರೆಡ್ಡಿ(ಅಧಿಕ ಆಸ್ತಿ ಗಳಿಕೆ), ಮುರುಗೇಶ್‌ ನಿರಾಣಿ(ಭ್ರಷ್ಟಾಚಾರ) ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ ಅನುಮತಿ ಕೋರಿ ಮನವಿ ಸಲ್ಲಿಸಿ ವರ್ಷಗಳಾಗಿದ್ದರೂ, ರಾಜ್ಯಪಾಲರು ಇದುವರೆಗೆ ಅನುಮತಿ ನೀಡಿಲ್ಲ. ಇದು ಅವರ ಪಕ್ಷಪಾತೀಯ ನಡೆ ಎಂದು ಆಕ್ರೋಶಗೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Congress2

ಜನಾರ್ಧನ ರೆಡ್ಡಿ ಅವರಿಗೆ ಬಳ್ಳಾರಿಗೆ ಹೋಗಲು ಅವಕಾಶವೇ ಇಲ್ಲ. ಹಗರಣಗಳಲ್ಲಿ ತಪ್ಪಿತಸ್ಥರಾಗಿರುವ ಜೊಲ್ಲೆ, ನಿರಾಣಿ, ಜನಾರ್ಧನ ರೆಡ್ಡಿ ಇಂತಹವರೆಲ್ಲಾ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ ವಿಚಾರ ಎಂದು ಟೀಕಿಸಿದರು.

ಆರ್.‌ಅಶೋಕ್‌ ಅವರು ಕೈಗಾರಿಕೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ. ಇಂದು ಎಷ್ಟು ಆಸ್ತಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಒಂದು ಮನೆ ಸಹ ಇಲ್ಲ. ಅವರ ಧರ್ಮಪತ್ನಿಯವರನ್ನು ಇದುವರೆಗೆ ನಾವ್ಯಾರೂ ನೋಡಿಯೇ ಇಲ್ಲ. ಅಂತಹವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಪಾರ್ವತಮ್ಮ ಅವರು ಅಣ್ಣನಿಂದ ಬಳುವಳಿಯಾಗಿ ಬಂದ ಜಾಗಕ್ಕೆ ಪರ್ಯಾಯವಾಗಿ ನಿವೇಶನ ಪಡೆದಿದ್ದಾರೆ. ಅದರಲ್ಲಿ ಯಾವುದೇ ತಪ್ಪೇನಿದೆ ಎಂದು ವಿಪಕ್ಷಗಳನ್ನು ಪ್ರಶ್ನಿಸಿದರು.

40 ವರ್ಷಗಳ ಕಾಲ ನಿಷ್ಕಳಂಕ ರಾಜಕಾರಣ ಮಾಡುತ್ತಿರುವ ಸಿದ್ದರಾಮಯ್ಯ ಅವರನ್ನು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ಪಕ್ಷ ಉರುಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲೆಸೆದರು.

ದಲಿತ ಮುಖಂಡ, ಜಿಪಂ ಮಾಜಿ ಸದಸ್ಯ ರಾಜೀಕಾಂತ್‌ ಮಾತನಾಡಿ, ರಾಜ್ಯಪಾಲರನ್ನು ದಲಿತ ಎಂದು ಹೇಳಲಾಗುತ್ತಿದೆ. ಅವರು ಎಂದಿಗೂ ದಲಿತರ ಪರ ಧ್ವನಿ ಎತ್ತಿರುವುದನ್ನು ಕಂಡಿಲ್ಲ. ಸಂವಿಧಾನ ಕಾಪಾಡಬೇಕಿರುವ ವ್ಯಕ್ತಿಗಳು, ಸಂವಿಧಾನದ ಸಿದ್ಧಾಂತಗಳನ್ನು ಗಾಳಿಗೆ ತೂರುತ್ತಿದ್ದಾರೆ. ಪ್ರಸ್ತುತ ಸಂವಿಧಾನ ಅಪಾಯದಲ್ಲಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೇ ಸಂವಿಧಾನಕ್ಕೆ ಅಪಾಯ ಬಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.

ಸಿದ್ದರಾಮಯ್ಯ ಅವರು 14 ಬಾರಿ ರಾಜ್ಯದ ಹಣಕಾಸು ಮಂತ್ರಿಯಾಗಿದ್ದವರು. ಅಂತವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಖಂಡನೀಯ. ರಾಜ್ಯಪಾಲರು ರಾಜ್ಯವನ್ನು ದಿವಾಳಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಇವರು ದಲಿತ ರಾಜ್ಯಪಾಲ ಅಲ್ಲ. ಬಲಿತ ರಾಜ್ಯಪಾಲ ಎಂದು ತಿವಿದರು.

ಹಿಂದುಳಿತ ವರ್ಗಗಳ ಒಕ್ಕೂಟದ ಸುಧಾ ವೆಂಕಟೇಶ್ ಮಾತನಾಡಿ, ಇಂದು ಸಂವಿಧಾನದ ಕಗ್ಗೊಲೆ ನಡೆಯುತ್ತಿದೆ. ಶೋಷಿತ ಸಮುದಾಯದವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿರುವುದನ್ನು ಇವರಿಂದ ಸಹಿಸಲಾಗುತ್ತಿಲ್ಲ. ಆ ಕಾರಣಕ್ಕೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಸುಳ್ಳನ್ನು ಸತ್ಯವೆಂದು ಬಿಂಬಿಸಲು ಹೊರಟಿರುವ ವಿಪಕ್ಷ ನಾಯಕರಿಗೆ ಆ.27ರ ರಾಜಭವನ ಚಲೋ ಮೂಲಕ ತಕ್ಕ ಉತ್ತರ ನೀಡುತ್ತೇವೆ ಎಂದು ಸಿಡಿದೆದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಪಟ್ರೇನಹಳ್ಳಿ ಕೃಷ್ಣ, ರಾಮಕೃಷ್ಣಪ್ಪ, ಗೌರಿಬಿದನೂರು ಲಿಂಗಣ್ಣ, ದೇವೇಂದ್ರ, ಲಕ್ಷ್ಮಣ ಸೇರಿದಂತೆ ಇತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...