ರಾಮದುರ್ಗ | ವಲಸೆ ಅಭ್ಯರ್ಥಿಗೆ ಟಿಕೆಟ್‌, ಬಿಜೆಪಿ ಮುಖಂಡರ ಮುನಿಸು – ಕಾಂಗ್ರೆಸ್‌ಗೆ ವರದಾನ

Date:

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಈ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಧನಾತ್ಮಕವಾಗಿದೆ.

ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ನೇರ ಪೈಪೋಟಿಯಿದ್ದರೂ ಕಾಂಗ್ರೆಸ್‌ಗೆ ಹೆಚ್ಚು ಅನೂಕೂಲಕರ ವಾತಾವರಣವಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಧಾನಸಭಾ ಕ್ಷೇತ್ರವು ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ 1939ರ ಏಪ್ರಿಲ್ ಜೈಲು ದುರಂತ‌ಕ್ಕೆ ಹೆಸರಾಗಿರುವ ಕ್ಷೇತ್ರ. ಈ ಬಾರಿಯ ಚುನಾವಣೆಯಲ್ಲಿ ಆಶ್ಚರ್ಯಕರ ವಾತಾವರಣವನ್ನು ನಿರ್ಮಾಣವಾಗಿದೆ.

ಬಿಜೆಪಿಗಾಗಿ ಕೆಲಸ ಮಾಡಿದ ಮತ್ತು ಬಿಜೆಪಿ ಶಾಸಕರಾಗಿದ್ದ ಮಹಾದೇವಪ್ಪ ಯಾದವಾಡ ಸೇರಿದಂತೆ ಇನ್ನೂ ನಾಲ್ಕು ಮಂದಿ ಸ್ಥಳೀಯ ಅಭ್ಯರ್ಥಿಗಳಿಗೆ ಬಿಜೆಪಿ ಈಬಾರಿ ಟಿಕೆಟ್ ನೀಡಿಲ್ಲ. ಬದಲಿಗೆ ಸ್ಥಳೀಯರಲ್ಲದ ಕೆಲವು ವರ್ಷಗಳಿಂದೀಚೆಗೆ ರಾಮದುರ್ಗ ತಾಲೂಕಿಗೆ ಆಗಮಿಸಿದ್ದು, ಪಕ್ಷದಲ್ಲಿ ಎಂದೂ ಗುರುತಿಸಿಕೊಳ್ಳದ ಉದ್ಯಮಿಯೊಬ್ಬರಿಗೆ ಟಿಕೆಟ್ ನೀಡಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಅಸಮಧಾನ ಮತ್ತು ಭೀನ್ನಾಭಿಪ್ರಾಯ ಉಂಟುಮಾಡಿದೆ. ಹಾಗೆಯೇ ಕಾಂಗ್ರೆಸ್‌ ಎರಡು ಬಾರಿ ಶಾಸಕರಾಗಿದ್ದ ಅಶೋಕ ಪಟ್ಟಣವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳ ಅಂತರದಿಂದ ಜಯಗಳಿಸಿದ್ಧರು. ಆದರೆ, ಈ ಬಾರಿ ಅವರಿಗೆ ಟಿಕೆಟ್ ನಿರಾಕರಿಸಿದ್ದು, ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣದಿಂದಾಗಿ ಬಿಜೆಪಿಯ ಯಾವುದೇ ಪ್ರಚಾರ ಸಭೆಗಳಲ್ಲಿ ಅವರು ಭಾಗಿಯಾಗಿಲ್ಲ. ಕುರುಬ ಸಮುದಾಯದ ಪ್ರಕಾಶ ಮುದೋಳ ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ಇದೆ. ಕಾಂಗ್ರೆಸ್‌ ಸರ್ಕಾರದ ಆಡಳಿತಾವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಶೈಕ್ಷಣಿಕವಾಗಿ ಕ್ಷೇತ್ರದ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗಳನ್ನು ಜಾರಿ ಮಾಡಿರುವುದು ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚು ಅನೂಕೂಲಕರವಾಗಲಿದೆ.

ಇನ್ನೂ ಕೊರೊನಾ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಸಹಾಯ ಮಾಡಿರುವುದು ಸೇರಿದಂತೆ ಅನೇಕ ಸಮಾಜಿಕ ಕಾರ್ಯಗಳನ್ನು ಮಾಡಿರುವುದು ಬಿಜೆಪಿ ಅಭ್ಯರ್ಥಿ ಚಿಕ್ಕರೇವಣ್ಣನವರಿಗೆ ಅನೂಕೂಲ ಮಾಡಿಕೊಟ್ಟರೂ ಇವರು ಸ್ಥಳೀಯ ಅಭ್ಯರ್ಥಿ ಅಲ್ಲ ಎನ್ನುವ ಅಸಮಧಾನ ಕ್ಷೇತ್ರದ ಜನರಲ್ಲಿದ್ದು, ಇದು ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಮದುರ್ಗ ವಿಧಾನಸಭಾ ಕ್ಷೇತ್ರದ ಜಾತಿವಾರು ಲೆಕ್ಕಾಚಾರವನ್ನು ಗಮನಿಸಿದಾಗ ಒಟ್ಟು 1,97,821 ಮತದಾರರಿದ್ದು, ಅದರಲ್ಲಿ 1,00,736 ಮಂದಿ ಪುರುಷ ಹಾಗೂ 97,085 ಮಂದಿ ಮಹಿಳಾ ಮತದಾರರಿದ್ದಾರೆ. ಇದರಲ್ಲಿ ಲಿಂಗಾಯತ 42,000, ಪರಿಶಿಷ್ಟ ಪಂಗಡದ 28,000, ಕುರುಬ ಸಮುದಾಯ 20,000, ರೆಡ್ಡಿ ಮತದಾರರು 16,000 ಮಂದಿ, ನೇಕಾರ 12,000, ಲಂಬಾಣಿ 12,000, ಮರಾಠ 3,000 ಸೇರಿದಂತೆ ಇತರೆ ಸಮುದಾಯದ ಮತದಾರರ ಸಂಖ್ಯೆ 16,000ದಷ್ಟಿದೆ. ರಾಮದುರ್ಗ ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಪಟ್ಟಣ ಕೂಡ ಲಿಂಗಾಯತ ಸಮುದಾಯದವರಾಗಿವುದರಿಂದ ಅನೂಕೂಲವಾಗಲಿದೆ.

ಈ ಸುದ್ದಿ ಓದಿದ್ದೀರಾ? ಹೊಳೆನರಸೀಪುರ ಕ್ಷೇತ್ರ | ಬದಲಾವಣೆ ಬಯಸುತ್ತಿದ್ದಾರೆಯೇ ಮತದಾರರು?

2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯು ಲಿಂಗಾಯತ ಸಮುದಾಯದವರಾಗಿದ್ಧರು. ಆ ಸಂಧರ್ಭದಲ್ಲಿ ಲಿಂಗಾಯತ ಮತಗಳು ಹಂಚಿಕೆಯಾಗಿದ್ದು, ಆದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಲಿಂಗಾಯತರಲ್ಲದ ಕಾರಣದಿಂದ ಲಿಂಗಾಯತ ಮತಗಳು ಹಂಚಿಕೆಯಾಗುವ ಸಾಧ್ಯತೆಗಳಿಲ್ಲ. ಇದು ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಧನಾತ್ಮಕವಾಗಿದೆ.

ಬಿಜೆಪಿ ಅಭ್ಯರ್ಥಿ ಕುರುಬ ಸಮುದಾಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬಹುದಾದರೂ, ಜೆಡಿಎಸ್ ಅಭ್ಯರ್ಥಿಯೂ ಕುರುಬ ಸಮುದಾಯದವರಾಗಿದ್ದು, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕಾರಣದಿಂದ ಕುರಬ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಈ ಎಲ್ಲ ಸಂಗತಿಗಳನ್ನು ಗಮನಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಪಟ್ಟಣ ಅವರಿಗೆ ಹೆಚ್ಚು ಅನೂಕೂಲಕರ ವಾತಾವರಣವಿದ್ದು, ಈ ಬಾರಿ ಮತದಾರ ವಿಜಯದ ಮಾಲೆಯನ್ನು ಯಾರಿಗೆ ಹಾಕಲಿದ್ದಾನೆ ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...