ರಾಮನಗರ | ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ

Date:

ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ಕಗ್ಗಲೀಪುರ ವೃತ್ತ ರೈತ ನಿಯೋಗ ರೈತರ ಜ್ವಲಂತ ಸಮಸ್ಯೆಗಳಾದ ಅರಣ್ಯ ಇಲಾಖೆಯ ಅಧಿಕಾರಿಗಳ ಕಿರುಕುಳ, ಪೋಡಿ ಸಮಸ್ಯೆ ಹಾಗೂ ಇನ್ನಿತರ ರೈತರ ತೊಡಕುಗಳ ಬಗ್ಗೆ ವಿಧಾನಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಹಾಗೂ ಯಶವಂತಪುರ ಶಾಸಕರಾದ ಸೋಮಶೇಖರ್ ಜೊತೆ ಸಭೆ ಸೇರಿ ಚರ್ಚಿಸಲಾಯಿತು.

ಸಾಕಷ್ಟು ವರ್ಷಗಳಿಂದ ರೈತರು ಸಮಸ್ಯೆ ಅನುಭವಿಸುತ್ತಾ ಬಂದಿದ್ದು ಕಾನೂನಾತ್ಮಕ ನೆಲೆಯಲ್ಲಿ ಪರಿಹಾರ ಒದಗಿಸುವ ಬಗ್ಗೆ ಮಾತನಾಡಿದ ಸಂತೋಷ್ ಹೆಗ್ಡೆಯವರು ವಿಧಾನಸೌಧಕ್ಕೆ ಬರಬಾರದು ಎಂಬ ತಮ್ಮ ಸಂಕಲ್ಪ ಮುರಿದು ರೈತಪರ ಕಾಳಜಿಯಿಂದ ವಿಧಾನಸೌಧಕ್ಕೆ ಕಾಲಿರಿಸಿದ್ದೇನೆ. ರೈತರನ್ನು ಹಿಂಸಿಸುವುದು ಸರಿಯಲ್ಲ. ಕಾನೂನಿನಲ್ಲಿ ರೈತರಿಗೆ ಅವಕಾಶವಿದೆ. ಉಳ್ಳವರಿಗೆ ಪರಿಹಾರ ಒದಗಿಸಿ ರೈತರನ್ನು ಶೋಷಿಸುತ್ತಿರುವುದು ಸರಿಯಲ್ಲ. ರೈತರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

1001329733

ಪೋಡಿ ಸಮಸ್ಯೆ, ರೈತರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ, ಸೋಮನಹಳ್ಳಿ ಗೇಟ್ ಟೋಲ್ ಹಾಗೂ ರೈತರ ಇನ್ನಿತರ ವಿಚಾರವಾಗಿ ನಾಲ್ಕು ತಿಂಗಳ ಹಿಂದೆ ಕನಕಪುರದಲ್ಲಿ ಸಂತೋಷ್ ಹೆಗ್ಡೆಯವರ ಮುಂದಾಳತ್ವದಲ್ಲಿ ನಾಲ್ಕು ಸಾವಿರ ರೈತರು ಸೇರಿ ಬೃಹತ್ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ಯಶವಂತಪುರದ ಶಾಸಕರಾದ ಸೋಮಶೇಖರ್ ಸ್ಪಂದಿಸಿ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಜೊತೆಗೆ ರೈತರ ನಿಯೋಗ ಚರ್ಚಿಸಲು ಸಮಯ ನಿಗದಿ ಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, “ಸುಪ್ರೀಂ ಕೋರ್ಟ್ ಮಾರ್ಗಸೂಚಿ ಹಾಗೂ ಇನ್ನಿತರ ಕಾನೂನಾತ್ಮಕ ತೊಡಕುಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಎರಡು ತಿಂಗಳ ಕಾಲಾವಕಾಶ ಕೇಳಿ, ರೈತರ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲು ಸರಕಾರ ಬದ್ದವಾಗಿದೆ” ಎಂದರು.

ಯಶವಂತಪುರ ಕ್ಷೇತ್ರದ ಶಾಸಕರಾದ ಸೋಮಶೇಖರ್ ಕೂಡ ಸಮಸ್ಯೆಗಳ ಪರಿಹಾರ ಒದಗಿಸಲು ಮುಖ್ಯಮಂತ್ರಿಯವರ ಬಳಿ ಮಾತನಾಡುತ್ತೇನೆ ಎಂದು ಗಮನಾರ್ಹವಾಗಿ ಸ್ಪಂದಿಸಿದರು. .

ವಿಧಾನ ಪರಿಷತ್ ಸದಸ್ಯರಾದ ಮೋಹನ್ ಕೊಂಡಾಜಿ ಸಹ ರೈತರ ಜೊತೆಗೂಡಿದ್ದರು. ಜೊತೆಗೆ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರರಾದ ಕುಮಾರಸ್ವಾಮಿ, ರೈತ ಮುಖಂಡ ನದೀಂಪಾಷ, ಕೆ ಆರ್ ಎಸ್ ಪಕ್ಷದ ಮುಖಂಡ ಪ್ರಶಾಂತ್ ಹೊಸದುರ್ಗ, ವೆಂಕಟೇಶ್ , ಶೀನಿವಾಸ್, ಕಾಣಿಕ್, ನಾಗಭೂಷಣ ರೆಡ್ಡಿ, ಮಂಜಣ್ಣ , ಹಾಗೂ ಮುಂತಾದ ರೈತ ಮುಖಂಡರು ಉಪಸ್ಥಿತರಿದ್ದರು.

IMG 20240814 WA2202
1001329732
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...