ರಾಮನಗರ | ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆ; ಸ್ಥಳೀಯರ ಆಕ್ರೋಶ

Date:

ರಸ್ತೆಗಳು ಗುಂಡಿಯಿಂದ ಕೂಡಿದ್ದು, ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದೆ. ಮಳೆ ಬಂತೆಂದರೆ ರಸ್ತೆಯಲ್ಲ ಕೆರೆಯಂತಾಗುತ್ತದೆ ಎಂದು ರಾಮನಗರ ಜಿಲ್ಲೆ ಕುದೂರು ವ್ಯಾಪ್ತಿಯ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

“ಸೋಲೂರು ಗ್ರಾಮದಿಂದ ಒಂಬತ್ತನಗುಂಟೆ ಗ್ರಾಮದವರೆಗೆ ವಿಸ್ತರಿಸಿರುವ ರಸ್ತೆ ಗುಂಡಿಯಿಂದ ಕೂಡಿದ್ದು, ಅಸ್ತವ್ಯಸ್ತವಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ. ತುಮಕೂರು, ಕುದೂರು, ಶಿವಗಂಗೆ ವೀರಾಪುರ ಗ್ರಾಮಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಆದರೆ, ಸಂಚಾರಕ್ಕೆ ಯೋಗ್ಯವಲ್ಲದಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಸೋಲೂರು ಹೋಬಳಿ ಮಾಗಡಿ ತಾಲೂಕಿಗೆ ಸೇರುತ್ತದೆ. ಆದರೆ, ವಿಧಾನಸಭೆ ಚುನಾವಣೆ ನೆಲಮಂಗಲ ಕ್ಷೇತ್ರಕ್ಕೆ ಸೇರುತ್ತದೆ. ಲೋಕಸಭಾ ಕ್ಷೇತ್ರ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಸೇರುತ್ತದೆ. ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಇಂತಹ ಅತಂತ್ರ ಸ್ಥಿತಿಯಲ್ಲಿರುವ ಹೋಬಳಿಯನ್ನು ಜನಪ್ರತಿನಿಧಿಗಳು ನಿರ್ಲಕ್ಷಿಸಿದ್ದಾರೆ” ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷ ಇದೇ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ನುಗ್ಗಿತ್ತು. ಗುಂಡಿಗಳ ನಡುವೆ ರಸ್ತೆ ಇದೆಯೋ, ರಸ್ತೆಯ ನಡುವೆ ಗುಂಡಿಗಳಿವೆಯೋ ಎಂಬ ಗೊಂದಲದಲ್ಲಿ ವಾಹನ ಸವಾರರು ವಾಹನ ಚಲಾಯಿಸುವಂತಾಗಿದೆ. ಈ ರಸ್ತೆಯಲ್ಲಿ ಓಡಾಡುವ ನೂರಾರು ವಾಹನಗಳು, ಪ್ರಯಾಣಿಕರು ಜನಪ್ರತಿನಿಧಿಗಳನ್ನು ಹಾಗೂ  ಸಂಬಂಧಪಟ್ಟ ಇಲಾಖೆಗಳನ್ನು ಶಪಿಸದೆ ಮುಂದೆ ಹೋಗದಂತ ಸ್ಥಿತಿಯಲ್ಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಲ್ಲಾ ಮಾದರಿಯ ವಸತಿ ಸಮುಚ್ಚಯ: ಮನೆಗಳ ಹಂಚಿಕೆಗೆ ಸಿದ್ಧತೆ; ಬಿಡಿಎ ಆಯುಕ್ತ ಪರಿಶೀಲನೆ

“ಗುಂಡಿಗಳಿಂದ ತುಂಬಿರುವ ಈ ರಸ್ತೆಯಲ್ಲಿ ನಿತ್ಯವೂ ನೂರಾರು ವಾಹನಗಳು ಸಂಚರಿಸುತ್ತವೆ. ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ಹಲವಾರು ಬಾರಿ ಸಂಬಂಧಪಟ್ಟ ಶಾಸಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ನೂತನವಾಗಿ ಆಯ್ಕೆಯಾಗಿರುವ ಶಾಸಕರಾದರೂ ಈ ದುರಸ್ತಿಯನ್ನು ಕಾರ್ಯವನ್ನು ಮಾಡಬೇಕು” ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...