ರಾಮನಗರ | ಕನಕಪುರ ತಾಲೂಕು ಕಚೇರಿಯಲ್ಲಿ ಪ್ರಗತಿಪರ ಸಂಘಟನೆಗಳಿಗೆ ಕೊಠಡಿ ನೀಡುವಂತೆ ಹೋರಾಟಗಾರರ ಒತ್ತಾಯ

Date:

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಪ್ರಗತಿಪರ ಸಂಘಟನೆಗಳಿಗೆ ಕೊಠಡಿ ನೀಡುವಂತೆ ಒತ್ತಾಯಿಸಿ ಹೋರಾಟಗಾರರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

“ಇತ್ತೀಚೆಗಷ್ಟೇ ಕನಕಪುರ ತಾಲೂಕು ಕಚೇರಿಯಲ್ಲಿ ಗ್ರೇಡ್-2 ತಹಶೀಲ್ದಾರ್ ಕಚೇರಿಯನ್ನು ತೆರವುಗೊಳಿಸಿ, ಗ್ಯಾರಂಟಿ ಯೋಜನೆ ಪ್ರತಿಷ್ಠಾಪನಾ ಸಮಿತಿಯ ಅಧ್ಯಕ್ಷರಿಗೆ ನೀಡಿದ್ದು, ಅದನ್ನು ಲಕ್ಷಾಂತರ ರೂಪಾಯಿ ಖರ್ಚಿನಲ್ಲಿ ನವೀಕರಿಸಿಕೊಟ್ಟಿದ್ದಾರೆ. ಇದೇ ಮಾನದಂಡಗಳ ಆಧಾರದಲ್ಲಿ ನಮಗೂ ತಾಲೂಕು ಆಡಳಿತ ಭವನದಲ್ಲಿ ಕಚೇರಿ ಕೊಡಿ” ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

ಈ ಹಿನ್ನೆಲೆಯಲ್ಲಿ ಸೋಮವಾರದಂದು ಪ್ರಗತಿಪರ ಸಂಘಟನೆಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು ಹಾಗೂ ಇತತರ ಸಂಘಟನೆಗಳು ತಮ್ಮ ಕಾರ್ಯಚಟುವಟಿಕೆಗಳಿಗಾಗಿ ತಲಾ ಒಂದೊಂದು ಕೊಠಡಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಘಟನೆಗಳು ಪ್ರತಿದಿನ ನೂರಾರು ಸಾರ್ವಜನಿಕರಿಗೆ ಕಾನೂನಾತ್ಮಕ ಸಹಾಯ ಮಾಡುತ್ತಿವೆ. ನ್ಯಾಯ ನೀಡಲು ಶ್ರಮಿಸುತ್ತಿವೆ. ಈ ಮೂಲಕ ತಮ್ಮ ಸೇವೆಯನ್ನು ಮತ್ತಷ್ಟು ಬಲಪಡಿಸಲು ತಮಗೂ ಕೊಠಡಿ ನೀಡಬೇಕೆಂದು ವಿನಂತಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ವೇತನ ಪಾವತಿಸುವಂತೆ ಆಗ್ರಹ; ಟಾಸ್ಕ್ ವರ್ಕ್ ದಿನಗೂಲಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

“ಈ ಕೊಠಡಿಗಳನ್ನು ನವೀಕರಿಸಲು ಸರ್ಕಾರದ ಯಾವುದೇ ತೆರಿಗೆ ಹಣವನ್ನು ಬಳಸಬೇಡಿ, ಬದಲಿಗೆ ಸಂಘಟನೆಗಳು ತಮ್ಮ ಸ್ವಂತ ಖರ್ಚಿನಲ್ಲಿ ನವೀಕರಣ ಕಾರ್ಯವನ್ನು ಕೈಗೊಳ್ಳುತ್ತೇವೆ” ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಪ್ರಗತಿಪರ ಸಂಘಟನೆ ಅಧ್ಯಕ್ಷ ಕುಮಾರಸ್ವಾಮಿ, ಕೆಆರ್‌ಎಸ್ ಪಾರ್ಟಿ ಪ್ರಶಾಂತ್ ಹೊಸದುರ್ಗ, ಸಂಚಾಲಕ ಮುನಿರಾಜು, ಕನ್ನಡ ಭಾಸ್ಕರ್, ರಮೇಶ್, ಗಿರೀಶ್, ಸುರೇಶ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಜಯ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...