ರಾಮನಗರ | ಬೀಡಿ ಕಾರ್ಮಿಕರಿಗೆ ಸಿಗದ ಮೂಲ ಸೌಲಭ್ಯ: ಹಕ್ಕುಗಳ ಬಗ್ಗೆ ತಿಳಿಸಿದ ಮುಖಂಡರು

Date:

ಬೀಡಿ ಕಾರ್ಮಿಕರಿಗೆ ಬೀಡಿ ಕಾರ್ಡ್‌ ದೊರೆಯದಿರುವುದರಿಂದ ಇಎಸ್‌ಐ, ಪಿಎಫ್‌ ಹಾಗೂ ಯಾವುದೇ ರೀತಿಯ ಇತರ ಸೌಲಭ್ಯಗಳು ದೊರೆಯುತ್ತಿಲ್ಲ. ಕಾರ್ಮಿಕರಿಗೆ ವಸತಿ ಇಲ್ಲದಿರುವುದರಿಂದ ಕಡಿಮೆ ಆದಾಯದಲ್ಲಿ ಮನೆ ಬಾಡಿಗೆ ಕಟ್ಟುವುದು ಕಷ್ಟಕರವಾಗಿದೆ ಎಂದು ಬೀಡಿ ಕಾರ್ಮಿಕರಾದ ಶಾಹ್‌ ತಾಜ್‌ ಹಾಗೂ ಶಾಹ್‌ ತಾಜ್‌ ಉನ್ನಿಸಾ, ತರನ್ನುಮ್‌ ಅಳಲು ತೋಡಿಕೊಂಡರು.

ಕಾರ್ಮಿಕ ಮುಖಂಡರಾದ ರಾಘವೇಂದ್ರ ಹಾಗೂ ಜಗದೀಶ್‌ ನಗರಕೆರೆಯವರೊಂದಿಗೆ ಸ್ಪೂರ್ತಿ ರಾಮನಗರದ ಸ್ಪಂದನ ಸಂಸ್ಥೆಯಲ್ಲಿ ನಡೆದ ಸಂವಾದ ಸಭೆಯಲ್ಲಿ ಬೀಡಿ ಕಾರ್ಮಿಕರು ತಮ್ಮ ಸಮಸ್ಯೆಗಳನ್ನು ಹಂಚಿಕೊಂಡರು.

“ನಾಲ್ಕೈದು ವರ್ಷಗಳಿಂದ ಮಕ್ಕಳಿಗೆ ಸ್ಕಾಲರ್‌ಶಿಪ್‌ ದೊರೆತಿಲ್ಲ. ಈ ಕಾರಣದಿಂದ ಅವರಿಗೆ ಶಿಕ್ಷಣ ಕೊಡಿಸುವುದು ಸಮಸ್ಯೆಯಾಗುತ್ತಿದೆ. ಮನೆಯ ಬಳಿ ಕಸದ ಗಾಡಿ ಬರುವುದಿಲ್ಲ, ರಸ್ತೆ, ಚರಂಡಿಯಂತಹ ಮೂಲಭೂತ ವ್ಯವಸ್ಥೆಯೂ ಇಲ್ಲ. ಕೂಡಲೇ ತಮ್ಮ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೀಡಿ ಕಾರ್ಮಿಕರು 1

ಕಾರ್ಮಿಕ ಮುಖಂಡ ರಾಘವೇಂದ್ರ ಮಾತನಾಡಿ, “ಕಾರ್ಮಿಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಹಾಗಾದರೆ ಮಾತ್ರ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಹಾಗಾಗಿ ಬೀಡಿ ಕಾರ್ಡ್‌ ಇಲ್ಲದ ಕಾರ್ಮಿಕರು ತಮ್ಮ ಬೀಡಿ ಮಾಲೀಕರ ಬಳಿ ಬೀಡಿ ಕಾರ್ಡ್‌ ಮಾಡಿಸಿಕೊಡಲು ತಿಳಿಸಬೇಕು. ಬೀಡಿ ಕಾರ್ಮಿಕರೆಲ್ಲರೂ ಸಂಘಟಿತರಾಗಬೇಕು. ಸಂಘಟಿತರಾಗುವ ಅಧಿಕಾರ ಪ್ರತಿಯೊಂದು ಕಾರ್ಮಿಕರಿಗೂ ಇದೆ. ಆದ ಕಾರಣ ಸಂಘಟಿತರಾಗಿ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸೋಣ” ಎಂದು ಕರೆ ನೀಡಿದರು.

“ಬೀಡಿ ಕಾರ್ಮಿಕರ ಸೆಸ್‌ ಕಾನೂನು ಪ್ರಕಾರ ಕಾರ್ಮಿಕರ ಕೂಲಿ ಹಣದಿಂದ ಬೋನಸ್‌ ಹಣವನ್ನು ಕೊಡುವಂತಿಲ್ಲ. ಬದಲಾಗಿ ಬೀಡಿ ಕಂಪನಿಯ ಸಾವಿರ ರೂಪಾಯಿ ಲಾಭಕ್ಕೆ ಪ್ರತಿಯಾಗಿ ಒಂದು ಕಾರ್ಮಿಕರಿಗೆ ಐದು ರೂಪಾಯಿಗಳಂತೆ ವಿನಿಯೋಗಿಸಿ ವರ್ಷದಲ್ಲಿ ಒಂದು ಬಾರಿ ಕಾರ್ಮಿಕರಿಗೆ ನೀಡಬೇಕು. ಇದನ್ನೂ ಕೂಡ ನೀವು ಪ್ರಶ್ನಿಸಬೇಕು. ನಿಮಗೆ ಕಾನೂನು ಮತ್ತು ಹಕ್ಕುಗಳ ಕುರಿತು ಮಾಹಿತಿ ತಿಳಿದಾಗ ಅವುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುವುದರ ಮೂಲಕ ಸಮುದಾಯವನ್ನು ಮೇಲಕ್ಕೆತ್ತಲು ಪ್ರಯತ್ನಿಸಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ಪ್ರಗತಿಪರ ಹೋರಾಟಗಾರ ಜಗದೀಶ್‌ ನಗರಕೆರೆ ಮಾತನಾಡಿ, “ಬೀಡಿ ಕಾರ್ಮಿಕರು ಒಗ್ಗಟ್ಟಾಗಿ ನಿಲ್ಲದ ಹೊರತು ಯಾವುದೇ ರೀತಿಯ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ” ಎಂದು ಸಂಘಟಿತರಾಗುವುದರ ಮೌಲ್ಯವನ್ನು ತಿಳಿಸಿದರು.

ಕಾರ್ಮಿಕರು ಕಾರ್ಯಕ್ರಮದ ಕೊನೆಯಲ್ಲಿ, “ತಮಗೆ ಬಹಳಷ್ಟು ಮಾಹಿತಿ ದೊರೆತಿದೆ ಮತ್ತು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ತಯಾರಿದ್ದೇವೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಮನಗರದ ವಿವಿಧ ವಾರ್ಡ್‌ಗಳ ನೂರಕ್ಕೂ ಹೆಚ್ಚು ಬೀಡಿ ಕಾರ್ಮಿಕರು, ಸ್ಪಂದನ ಸಂಸ್ಥೆಯ ಮಾಲಿನಿ, ಅಶ್ವಥ, ಕಾವ್ಯ, ಜಯಶ್ರೀ, ಮಹಾಲಕ್ಷ್ಮಿ, ಸುಪ್ರಿತಾ, ಮೇಘನಾ, ಕಾರ್ಮಿಕ ಮುಖಂಡರಾದ ಇಬ್ರಾಹಿಮ್‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...