ರಾಮನಗರ | ಕಾರ್ಮಿಕರು ತಂಗಿದ್ದ ಕಟ್ಟಡದಲ್ಲಿ ಸಿಲಿಂಡರ್‌ ಸ್ಫೋಟ: ಪೊಲೀಸ್‌ ಅಧಿಕಾರಿಗಳ ಭೇಟಿ

Date:

ರಾಮನಗರದ ಬಿಡದಿಯಲ್ಲಿನ ಕೈಗಾರಿಕಾ ಪ್ರದೇಶದ ಕಾಡುಮನೆ ಕ್ರಾಸ್ ಬಳಿಯ ಭೀಮೇನಹಳ್ಳಿಯಲ್ಲಿ ಸಿಲಿಂಡರ್‌ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದ್ದ ಕಟ್ಟಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಇತರೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕಟ್ಟಡ ಕಾರ್ಮಿಕರು ತಂಗಿದ್ದ ಶೆಡ್‌ನಲ್ಲಿ ಅಡುಗೆ ಅನಿಲ ಸೋರಿಕೆಯಾಗಿ, ಬೆಂಕಿ ಹೊತ್ತಿಕೊಂಡಿದ್ದರಿಂದ ಶೆಡ್‌ನಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಏಳು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು.

ಕಾರ್ಮಿಕರಾದ ಮನ್ರುಲ್ ಶೇಕ್, ತಜ್ಬುಲ್ ಶೇಕ್, ಜಾವೆದ್ ಅಲಿ, ಜಿಯಾಬುರ್ ಶೇಕ್, ಶಫಿಜುಲ್ ಶೇಕ್ ಹಾಗೂ ನೂರ್ ಜಮಲ್ ಗಾಯಗೊಂಡವರು. ಶೇ 60ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿರುವ ಎಲ್ಲರನ್ನೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳು ಸಾವು–ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೀಮೇನಹಳ್ಳಿ ಬಳಿ ಎಲಿಗೆನ್ಸ್ ಲೇಔಟ್‌ನಲ್ಲಿ ಐಶಾರಾಮಿ ವಿಲ್ಲಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದ ಕಾರ್ಮಿಕರು, ಕಟ್ಟಡ ನಿರ್ಮಾಣ ಹಂತದ ಸಮೀಪದಲ್ಲೇ ತಾತ್ಕಾಲಿಕವಾಗಿ ತಗಡಿನ ಶೆಡ್ ನಿರ್ಮಿಸಿಕೊಂಡು ತಂಗಿದ್ದರು. ಸೋಮವಾರ(ಅ.6) ಕೆಲಸ ಮುಗಿಸಿಕೊಂಡು ಬಂದಿದ್ದ ಕಾರ್ಮಿಕರು, ರಾತ್ರಿ ಶೆಡ್‌ನಲ್ಲೇ ಅಡುಗೆ ಮಾಡಿಕೊಂಡು ಊಟ ಮಾಡಿ ಮಲಗಿದ್ದರು.

ಸಿಲಿಂಡರ್‌ ಸರಿಯಾಗಿ ಬಂದ್ ಆಗದಿದ್ದರಿಂದ, ರಾತ್ರಿಯಿಡೀ ಅನಿಲ ಸೋರಿಕೆಯಾಗಿದೆ. ನಸುಕಿನಲ್ಲಿ 2 ಗಂಟೆ ಸುಮಾರಿಗೆ ಎದ್ದಿರುವ ಕಾರ್ಮಿಕನೊಬ್ಬ, ಬೀಡಿ ಸೇದಲು ಬೆಂಕಿ ಕಡ್ಡಿ ಗೀರುತ್ತಿದ್ದಂತೆ, ಇಡೀ ಶೆಡ್‌ಗೆ ಬೆಂಕಿ ವ್ಯಾಪಿಸಿಕೊಂಡಿದೆ. ಇದರಿಂದಾಗಿ ಎದ್ದಿದ್ದ ಕಾರ್ಮಿಕ ಸೇರಿದಂತೆ ಮಲಗಿದ್ದವರಿಗೂ ಬೆಂಕಿ ಹೊತ್ತಿಕೊಂಡಿದೆ.

ಕೂಡಲೇ ಎಲ್ಲರೂ ಕೂಗಿಕೊಂಡು ಹೊರಕ್ಕೆ ಓಡಿ ಬಂದಿದ್ದಾರೆ. ಕಾರ್ಮಿಕರ ಚೀರಾಟ ಕೇಳಿದ ಸಮೀಪದ ಭದ್ರತಾ ಸಿಬ್ಬಂದಿ ಹಾಗೂ ಅಕ್ಕಪಕ್ಕದ ಮನೆಯವರು, ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಆ್ಯಂಬುಲೆನ್ಸ್ ಕರೆಯಿಸಿ ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಘಟನೆಯಿಂದಾಗಿ, ಶೆಡ್ ಒಳಗಿದ್ದ ಎಲ್ಲ ವಸ್ತುಗಳೂ ಕೂಡ ಬೆಂಕಿಗೆ ಆಹುತಿಯಾಗಿವೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸಮಾಜದ ಸ್ಥಾನ ಮಾನ ಗೌರವಿಸುವುದು ಭಾರತದ ಪ್ರಜೆಯ ಕರ್ತವ್ಯ

“ಘಟನೆಗೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು ಕಾರ್ಮಿಕರ ಕಂಟ್ರ್ಯಾಕ್ಟರ್ ಹಸನ್ ಮಲಿಕ್ ಎಲಿಗೆನ್ಸ್ ಲೇಔಟ್ ಮಾಲೀಕ, ಜಮೀನಿನ ಮಾಲೀಕ, ಶೆಡ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಮಿಕರಿಗೆ ಯಾವುದೇ ಮೂಲಸೌಕರ್ಯ ಒದಗಿಸದೆ ಅತಿ ಕಿರಿದಾದ ಶೆಡ್‌ನಲ್ಲಿ ಏಳು ಮಂದಿ ಕಾರ್ಮಿಕರು ಮತ್ತು ಅಪಾಯಕಾರಿ ಅನಿಲ ಸಿಲಿಂಡರ್ ಇರಿಸಲಾಗಿತ್ತು. ಹಾಗಾಗಿ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಚಂದ್ರಯ್ಯ, ಡಿವೈಎಸ್‌ಪಿ ಬಿ ಎನ್ ಶ್ರೀನಿವಾಸ್, ಬಿಡದಿ ಠಾಣೆ ಇನ್‌ಸ್ಪೆಕ್ಟರ್ ಶಂಕರ್ ನಾಯಕ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...