ರಾಮನಗರ | ಶವಸಂಸ್ಕಾರಕ್ಕೆ ದಲಿತರಿಗೆ ಅಡ್ಡಿ; ಸ್ಮಶಾನ ಭೂಮಿಗಾಗಿ ಶವವಿಟ್ಟು ಪ್ರತಿಭಟನೆ

Date:

ಶವಸಂಸ್ಕಾರ ಮಾಡಲು ಸ್ಮಶಾನ ಜಾಗ ನೀಡುವಂತೆ ಆಗ್ರಹಿಸಿ ದೇವರಹೊಸಹಳ್ಳಿ ಗ್ರಾಮದ‌ ದಲಿತ ಮುಖಂಡರು ಗುರುವಾರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕು ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ರಾಜೇಶ ಎಂಬ ಯುವಕ ಬುಧವಾರ ಬೈಕ್ ಅಪಘಾತದಲ್ಲಿ ಸಾವಿಗೀಡಾಗಿದ್ದ. ಶವ ಸಂಸ್ಕಾರ ಮಾಡಲು‌ ಕುಟುಂಬದವರು ಶವವನ್ನು ಸ್ಮಶಾನಕ್ಕೆ‌ ತೆಗೆದುಕೊಂಡು ಹೋಗುವಾಗ ಸ್ಥಳೀಯರು ನಮ್ಮ ಜಮೀನಿನ ಮೇಲೆ ಹೋಗಬೇಡಿ ಎಂದು ಅಡ್ಡಿಪಡಿಸಿದ್ದರು.

ಸ್ಮಶಾನಕ್ಕೆ ಹೋಗಲು ಜಾಗವಿಲ್ಲದ‌ ಕಾರಣ ಕುಪಿತಗೊಂಡ ಗ್ರಾಮಸ್ಥರು ಶವ ಮತ್ತು ಸೌದೆಯೊಂದಿಗೆ ಚನ್ನಪಟ್ಟಣಕ್ಕೆ ತೆರಳಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ್ದು, “ಜಿಲ್ಲಾಧಿಕಾರಿ ಸ್ಥಳಕ್ಕೆ‌ ಬರಬೇಕು. ‌ಗ್ರಾಮದ ದಲಿತರಿಗೆ ಸ್ಮಶಾನ ಭೂಮಿ ಕಲ್ಪಿಸಬೇಕು. ಸ್ಮಶಾನ‌ಕ್ಕೆ ಹೋಗಲು ಜಾಗ ಕೊಡಿಸದಿದ್ದರೆ, ಕಚೇರಿ ಆವರಣದಲ್ಲೇ ಶವಸಂಸ್ಕಾರ ಮಾಡಲಾಗುವುದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವರಹೊಸಹಳ್ಳಿ ನಿವಾಸಿ ಹನುಮಂತ ಎಂಬುವವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮೇಲ್ಜಾತಿ ವ್ಯಕ್ತಿಯೊಬ್ಬ ಗೋಮಾಳ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ದಲಿತರು ಅಲ್ಲಿ ಓಡಾಡಲು ಬಿಡುತ್ತಿರಲಿಲ್ಲ. ಈ ಕುರಿತು ಮೂರ್ನಾಲ್ಕು ಬಾರಿ ತಹಶೀಲ್ದಾರರು ಬಂದು ಜಾಗ ಪರಿಶೀಲನೆ ಮಾಡಿ, ಅವರ ಬಳಿ ಜಾಗದ ದಾಖಲೆಗಳನ್ನು ಕೇಳಿದ್ದರು. ಆಗ ಯಾವುದೇ ದಾಖಲೆಗಳಿಲ್ಲವೆಂದಿದ್ದ ಆತ ಇದೀಗ ಅಕ್ರಮವಾಗಿ ಎಲ್ಲ ದಾಖಲೆಗಳನ್ನು ಅವರ ಹೆಸರಿಗೆ ಮಾಡಿಸಿಕೊಂಡಿದ್ದು, ಗೋಮಾಳ ಭೂಮಿಯನ್ನು ತನ್ನದಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

“ನಿನ್ನೆ ಶವಸಂಸ್ಕಾರ ಮಾಡಲೆಂದು ಮೃತದೇಹ ಕೊಂಡೊಯ್ಯುವಾಗ ಹೊಲದ ಮೇಲೆ ಹೋಗಬೇಡಿ ಅಂತ ತಗಾದೆ ತೆಗೆದರು. ಬಳಿಕ ತಾಲೂಕು ಕಚೇರಿ ಬಳಿ ಹೋಗಿ ಶವವಿಟ್ಟು ಪ್ರತಿಭಟನೆ‌ ನಡೆಸಿದೆವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ನರಸಿಂಹ ಮೂರ್ತಿ ದೇವರಹೊಸಹಳ್ಳಿ ಗ್ರಾಮಕ್ಕೆ‌ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿದರು. ”ಸ್ಮಶಾನಕ್ಕೆ ‌ಜಾಗವಿದ್ದು, ಸ್ಮಶಾನಕ್ಕೆ ಹೋಗಲು ರಸ್ತೆಯಿಲ್ಲದ ಕಾರಣ ಸಮಸ್ಯೆ ಎದುರಾಗಿದೆ. ಸಮಸ್ಯೆ ಪರಿಹರಿಸುತ್ತೇವೆಂದು ಅಧಿಕಾರಿಗಳು ಭರವಸೆ ನೀಡಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

“ಸ್ಮಶಾನಕ್ಕೆ ಜಾಗ ನೀಡುವವರೆಗೆ ನಾವು ಸ್ಥಳದಿಂದ ಕದಲುವುದಿಲ್ಲವೆಂದು ಪ್ರತಿಭಟನೆ ಮುಂದುವರೆಸಿದ್ದೆವು. ಬಳಿಕ ಪೊಲೀಸ್‌ ಅಧಿಕಾರಿಗಳು, ತಹಶೀಲ್ದಾರ್‌ ಸೇರಿದಂತೆ ಹಲವು ಮಂದಿ ಅಧಿಕಾರಿಗಳು ಗ್ರಾಮಕ್ಕೆ ಬಂದರು. ಅಧಿಕಾರಿಗಳ ಬಂದೋಬಸ್ತ್‌ನಲ್ಲಿ ಶವಸಂಸ್ಕಾರ ಮಾಡಿದೆವು. ಇದೀಗ ಒತ್ತುವರಿಯಾಗಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಿ ದಲಿತರ ಸ್ಮಶಾನಕ್ಕೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...