ರಾಮನಗರ | ಕುವೆಂಪು ಅವರಿಗೆ ಅವಮಾನವಾಗುವಂತೆ ಸರ್ಕಾರ ಆದೇಶ ಮಾಡಿಲ್ಲ: ಶಾಸಕ ಬಾಲಕೃಷ್ಣ

Date:

ಸರ್ಕಾರ ಕುವೆಂಪು ಅವರಿಗೆ ಅವಮಾನ ಮಾಡುವ ರೀತಿ ಯಾವುದೇ ಕೆಲಸ ಮಾಡುತ್ತಿಲ್ಲ. ಅಂತಹ ಯಾವುದೇ ಆದೇಶವನ್ನು  ಸರ್ಕಾರ ಹೊರಡಿಸಿಲ್ಲ ಎಂದು ಶಾಸಕ ಬಾಲಕೃಷ್ಣ ಸ್ಪಷ್ಟನೆ ನೀಡಿದರು.

ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿಯವರಿಗೆ ಕೆಲಸವಿಲ್ಲ. ಮೊರಾರ್ಜಿ ವಸತಿ ಶಾಲೆಗಳಲ್ಲಿ ಅಧಿಕಾರಿ ಹೇಳಿಕೆಯಂತೆ ʼಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿʼ ಎಂದು ಸಾಲುಗಳನ್ನು ಬದಲಿಸಿದ್ದಾರೆ. ಬಿಜೆಪಿಯವರು ಈ ರೀತಿಯ ಚಿಲ್ಲರೆ ವಿಚಾರಗಳನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿರುವುದು ಸರಿಯಲ್ಲ” ಎಂದು ಕಿಡಿಕಾರಿದರು.

“ಗಂಡಸರು ಎನ್ನುವ ಬಿಜೆಪಿ ಸಂಸದರು ವಿತ್ತ ಸಚಿವೆಯಾದ ನಿರ್ಮಲಾ ಸೀತಾರಾಮನ್ ಅವರಿಂದ ಭದ್ರಾ ಮೇಲ್ದಂಡೆ ಯೋಜನೆಗೆ ₹5,000 ಕೋಟಿ ಬಿಡುಗಡೆ ಮಾಡಿಸಿಕೊಂಡು ಬರಲಿ. ಅದನ್ನು ಬಿಟ್ಟು ಕೈಮುಗಿದು ಒಳಗೆ ಬರಲಿಲ್ಲ, ಕಾಲ್ ಮುಗಿದುಕೊಂಡು ಒಳಗೆ ಬರಲಿಲ್ಲ ಎಂದು ಚಿಲ್ಲರೆ ರಾಜಕೀಯ ಮಾಡುವುದನ್ನು ಬಿಜೆಪಿಯವರು ನಿಲ್ಲಿಸಬೇಕೆಂದು ಬಾಲಕೃಷ್ಣ ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕುವೆಂಪು ಅವರಿಗೆ ಅತ್ಯಂತ ಗೌರವ ಕೊಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ನಮ್ಮ ಯಾವುದೇ ಸಮಾರಂಭ ನಡೆದರೂ ಕೂಡ ನಾಡಗೀತೆಯನ್ನು ಹಾಡುವ ಮೂಲಕ ಕುವೆಂಪು ಅವರಿಗೆ ಗೌರವ ಕೊಡುವ ಕೆಲಸವನ್ನು ಮಾಡುತ್ತಿದ್ದೇವೆ. 15 ವರ್ಷ ದೇಶವನ್ನು ಆಳಿದ ಬಿಜೆಪಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚೆ ಮಾಡಲಿ” ಎಂದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ರೈತರ ಖಾತೆಗಳಿಗೆ ಹಣ ಜಮಾ ವಿಳಂಬ; ಪ್ರತಿಭಟನೆ

“ಮಾಜಿ ಶಾಸಕ ಎ ಮಂಜುನಾಥ್ ಅರ್ಥಗರ್ಭಿತವಾಗಿ ಚರ್ಚೆ ಮಾಡಲಿ. ಅದನ್ನು ಬಿಟ್ಟು ಗಾಬರಿಯಾದ ರೀತಿಯಲ್ಲಿ ನನ್ನ ಹೇಳಿಕೆಗೆ ಉತ್ತರ ಕೊಟ್ಟಿದ್ದಾರೆ. ನಾನು ಏಕೆ ಗಾಬರಿಯಾಗಲಿ ತಪ್ಪು ಮಾಡಿದವರು ಮಾತ್ರ ಗಾಬರಿಯಾಗಬೇಕು. ಪಾಯಿಖಾನೆ ತಿಂದ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಅವರ ರೀತಿ ಕೆಳಮಟ್ಟಕ್ಕೆ ಇಳಿದು ಮಾತನಾಡಲು ಸಾಧ್ಯವಿಲ್ಲ. ʼಡಾರ್ಲಿಂಗ್ ಬಾಲಣ್ಣʼ ಎಂದು ಮೊದಲು ಕರೆದವರು ಮಾಜಿ ಶಾಸಕ ಎ ಮಂಜುನಾಥ್. ಅದಕ್ಕೆ ನಾನು ʼಮಾಮʼ ಅಂತ ಕರೆದಿದ್ದೇನೆ. ನಮ್ಮ ಕ್ಷೇತ್ರದ ಹೆಣ್ಣು ಮಗಳನ್ನು ಮದುವೆಯಾಗಿದ್ದಕ್ಕೆ ಮಾಮ ಅಂತ ಕರೆದಿದ್ದೇನೆ. ಗೌರವಯುತವಾಗಿ ಮಾತನಾಡಬೇಕು. ಸುಮ್ಮನೆ ನಾವೇಕೆ ಅವರ ಬಗ್ಗೆ ಮಾತನಾಡೋಣ” ಎಂದು ಮಾಜಿ ಶಾಸಕ ಎ ಮಂಜುನಾಥ್ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...