ರಾಮನಗರ | ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಕಚೇರಿ ಸ್ಥಳಾಂತರ; ದಸಂಸ ಆಕ್ರೋಶ

Date:

ಕನಕಪುರ ತಾಲೂಕಿನ ಗ್ರೇಡ್-2 ತಹಶೀಲ್ದಾರ್ ಶಿವಕುಮಾರ್ ಕಾರ್ಯನಿರ್ವಹಿಸುತ್ತಿದ್ದ ಕಚೇರಿಯನ್ನು ಸಕಾರಣ ಇಲ್ಲದೆ ತೆರವುಗೊಳಿಸಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ದಿಲೀಪ್‌ ಅವರಿಗಾಗಿ ಅದ್ದೂರಿಯಾಗಿ ನವೀಕರಣಗೊಳಿಸುತ್ತಿರುವುದು ಖಂಡನೀಯ ಎಂದು ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ಪಟ್ಟಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಧಮ್ಮ ದೀವಿಗೆ ಟ್ರಸ್ಟ್‌ ಅಧ್ಯಕ್ಷ ಮಲ್ಲಿಕಾರ್ಜುನ ಮಾತನಾಡಿ, “ಕನಕಪುರ ತಾಲೂಕಿನಲ್ಲಿ ಪರಿಶಿಷ್ಟರ ಮೇಲಿನ ದೌರ್ಜನ್ಯಗಳು ಮಿತಿಮೀರಿದ್ದು, ಇತ್ತೀಚೆಗೆ ಪರಿಶಿಷ್ಟರ ಕೈಕಡಿದಿದ್ದರು. ಆದರೆ ಇಂದು ಪರಿಶಿಷ್ಟ ಜನಾಂಗದ ವ್ಯಕ್ತಿ ಉನ್ನತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಸಹಿಸಲಾಗದೆ ಅವರನ್ನು ಏಕಾಏಕಿ ತೆರವುಗೊಳಿಸಿರುವುದು ನಿಜಕ್ಕೂ ಅಕ್ಷಮ್ಯ, ಪರಿಶಿಷ್ಟರ ಹಿತ ಕಾಯಬೇಕಾದ ಆಡಳಿತ ಕಚೇರಿಯಲ್ಲೇ ಜಾತಿಯ ಕಾರಣಕ್ಕೆ ಶೋಷಣೆ ನಡೆದಿರುವುದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ” ಎಂದರು.

ಕೆಆರ್‌ಎಸ್ ಪಕ್ಷದ ಮುಖಂಡ ಪ್ರಶಾಂತ್ ಹೊಸದುರ್ಗ ಮಾತನಾಡಿ, “ಕನಕಪುರದ ಎಲ್ಲ ಜನಗಳಿಗೆ ಹತ್ತಿರದಲ್ಲಿ ಸಿಗುತ್ತಿದ್ದ ಅಧಿಕಾರಿ ಅಂದರೆ ಗ್ರೇಡ್-2 ತಹಶೀಲ್ದಾರ್ ಮಾತ್ರ. ವೃದ್ಧರರು, ಅಂಗವಿಕಲರನ್ನು ಅಲೆದಾಡಿಸದೆ ಮಾಸಿಕ ವೇತನಗಳನ್ನು ಕೊಡಿಸುತ್ತಿದ್ದರು. ಅಂಥವರನ್ನು ಹಾಗೂ ಅವರ ಕಚೇರಿಯ ದಾಖಲಾತಿಗಳನ್ನು ಯಾವುದೋ ಒಂದು ಮೂಲೆಗೆ ಸ್ಥಳಾಂತರಿಸಿರುವುದು ಅನ್ಯಾಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ತಾಲೂಕುಗಳಲ್ಲೂ ಅಧ್ಯಕ್ಷರನ್ನು ಆಯ್ಕೆ ಮಾಡಿರುವುದು ಸಂತೋಷ. ಆದರೆ ಎಲ್ಲ ಕಡೆಯೂ ಗ್ರೇಡ್-2 ತಹಶೀಲ್ದಾರರನ್ನು ಖಾಲಿ ಮಾಡಿಸಿ ಕೂರಿಸಿದ್ದಾರಾ ಅಂತ ನೋಡಿದರೆ ಇಲ್ಲ. ಕನಕಪುರದಲ್ಲಿ ಮಾತ್ರ ಜಾತಿಕಾರಣಕ್ಕೆ ಅಧಿಕಾರಿಯನ್ನು ಸ್ಥಳಾಂತರಿಸಿದ್ದು, ಸರ್ವಾಧಿಕಾರಿ ಧೋರಣೆಯ ರಾಜಕಾರಣಿಗಳು ಅಧಿಕಾರಿಯ ಘನತೆಯನ್ನು ಕಳೆದಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಮೂಲನಿವಾಸಿ ಕಾವಲು ಪಡೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೌರ್ಯ ಮಾತನಾಡಿ, “ಸಾವಿರಾರು ಜನರಿಗೆ ಅನುಕೂಲವಾಗುವಂತಹ ಸಬ್‌ರಿಜಿಸ್ಟಾರ್ ಕಚೇರಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಅದನ್ನು ತಾಲೂಕು ಕಚೇರಿಗೆ ಸ್ಥಳಾಂತರಿಸಿ. ಅದನ್ನು ಬಿಟ್ಟು ಶಾಶ್ವತವಲ್ಲದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಗಾಗಿ ಲಕ್ಷಾಂತರ ವೆಚ್ಚದಲ್ಲಿ ಕಟ್ಟಡ ನವೀಕರಿಸುತ್ತಿರುವುದು ಏಕೆ ಎಂಬುದನ್ನು ಜನರಿಗೆ ಉತ್ತರಿಸಬೇಕು” ಎಂದರು.

“ಗ್ರೇಡ್‌-2 ತಹಶೀಲ್ದಾರ್ ಶಿವಕುಮಾ‌ರ್ ಕೊಠಡಿಯಲ್ಲಿ ಇದ್ದಂತಹ ಪೀಠೋಪಕರಣ ಹಾಗೂ ಕಡತಗಳನ್ನು ಬೇಕಾಬಿಟ್ಟಿಯಾಗಿ ಒಂದು ಮೂಲೆಯ ಕೊಠಡಿಯಲ್ಲಿ ತುಂಬಲಾಗಿದೆ. ಸಂವಿಧಾನಿಕ ಸ್ಥಾನ-ಮಾನವನ್ನು ರಾಜಕಾರಣಿಗಳ ಓಲೈಕೆಗಾಗಿ ಕಳೆಯಬಾರದು. ಅವರಿಗೆ ಕಚೇರಿಯಲ್ಲಿ ಸೂಕ್ತ ಜಾಗ ಕೊಡಬೇಕು” ಎಂದು ‌ಆಗ್ರಹಿಸಿದರು.

“ಇನ್ನು ಮೂರು ದಿನಗಳೊಳಗಾಗಿ ಶಿವಕುಮಾ‌ರ್ ಇದ್ದಂತಹ ಕೊಠಡಿಯಲ್ಲೇ ಅವರಿಗೆ ಸ್ಥಳ ಒದಗಿಸದಿದ್ದಲ್ಲಿ ತಾಲೂಕಿನ ದಲಿತಪರ, ಪ್ರಗತಿಪರ, ರೈತಪರ ಸಂಘಟನೆಗಳ ಬೆಂಬಲ ಕೋರಿ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದ್ದಾರೆ.

ಬುದ್ದವಿಹಾರ ಸಮಿತಿಯ ದಿನೇಶ್ ಮಳಗಾಳು, ಕೆಆರ್‌ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ತುಂಗಣಿ ಶಿವಮ್ಮ, ಬಿ ಎಂ ಕೆ ಗಣೇಶ್, ಕಚುವನಹಳ್ಳಿ ಕುಮಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...