ರಾಮನಗರ | ಹಣಕ್ಕೆ ಬೇಡಿಕೆಯಿಟ್ಟ ಆರೋಪ: ಹಾರೋಹಳ್ಳಿ ಪ. ಪಂ. ಮುಖ್ಯಾಧಿಕಾರಿ ಶ್ವೇತಾ ಅಮಾನತು

Date:

ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾ ಬಾಯಿ ಅವರು ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್‌ಸಿ) ಅಳವಡಿಕೆಗಾಗಿ ಗುತ್ತಿಗೆದಾರನೊಬ್ಬನಿಗೆ ₹3.50 ಲಕ್ಷಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ, ಅಮಾನತು ಮಾಡಲಾಗಿದೆ.

ಓಎಫ್‌ಸಿ ಕೇಬಲ್ ಅಳವಡಿಕೆಗೆ ಗುತ್ತಿಗೆದಾರನಿಗೆ ಹಣಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾಬಾಯಿ ಅವರನ್ನು ಪೌರಾಡಳಿತ ನಿರ್ದೇಶನಾಲಯ ಅಮಾನತು ಮಾಡಿ ಆದೇಶ ಹೊರಡಿಸಿದೆ.

ಮುಖ್ಯಾಧಿಕಾರಿ ಜುಲೈ 20ರಂದು ಓಎಫ್‌ಸಿ ಕೇಬಲ್ ಅಳವಡಿಕೆಗೆ ಒಂದು ಕಿಲೋಮೀಟರ್ ಕೇಬಲ್ ಅಳವಡಿಕೆಗೆ ₹2 ಲಕ್ಷ, ಎರಡು ಕಿ.ಮೀ. ಗೆ ₹4ಲಕ್ಷ ನೀಡುವಂತೆ ಬೇಡಿಕೆ ಇಟ್ಟ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇಲಾಖೆ ವಿಚಾರಣೆ ನಡೆಸಿದ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕ ಪ್ರಭುಲಿಂಗ ಕವಳಕಟ್ಟೆ ಕೂಡಲೇ ಜಾರಿಗೆ ಬರುವಂತೆ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಿದ್ದೇನು?

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾ ಬಾಯಿ ಅವರು ಜುಲೈ 20ರಂದು ಒಎಫ್‌ಸಿ ಕೇಬಲ್ ಅಳವಡಿಕೆಗೆ ಗುತ್ತಿಗೆದಾರನಿಂದ ಒಂದು ಕಿಲೋಮೀಟರ್‌ಗೆ ಕೇಬಲ್ ಅಳವಡಿಕೆಗೆ ಎರಡು ಲಕ್ಷ, ಎರಡು ಕಿಲೋಮೀಟರ್ ಗೆ ನಾಲ್ಕು ಲಕ್ಷ ಹಣ ನೀಡುವಂತೆ ಗುತ್ತಿಗೆದಾರನಿಗೆ ಬೇಡಿಕೆ ಇಟ್ಟ ವಿಡಿಯೋ ಸಂಭಾಷಣೆ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಆನೇಕಲ್ ಮೂಲದ ಈಶಾ ಎಂಟರ್‌ಪ್ರೈಸಸ್‌ನ ಗುತ್ತಿಗೆದಾರ ವಿಶ್ವನಾಥ್, ಅದನ್ನು ತನ್ನ ಮೊಬೈಲ್‌ನಲ್ಲಿ ಈ ಸಂಭಾಷಣೆಯನ್ನು ಚಿತ್ರೀಕರಿಸಿಕೊಂಡಿದ್ದಾನೆ. ಈತ ಕೇಬಲ್ ಅಳವಡಿಕೆಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶ್ವೇತಾ ಅವರನ್ನು ಭೇಟಿಯಾಗಲೆಂದು ತೆರಳಿದ್ದ ವಿಡಿಯೋ ಮಾಡಿದ್ದಾನೆ.

ಪಟ್ಟಣದಲ್ಲಿ 2 ಕಿಲೋಮೀಟರ್ ರಸ್ತೆಯಲ್ಲಿ ಕೇಬಲ್ ಅಳವಡಿಕೆಗೆ ಸಹಕರಿಸುವಂತೆ ವಿಶ್ವನಾಥ್ ಕೇಳಿದ್ದಾನೆ. ಅದಕ್ಕಾಗಿ, ಬೇರೆಯವರಿಗೆ ಹಣ ಕೊಟ್ಟಿರುವುದಾಗಿ ಗುತ್ತಿಗೆದಾರ ಹೇಳುತ್ತಾನೆ. ಆಗ ಶ್ವೇತಾ ಅವರು ಕಿ.ಮೀ.ಗೆ ₹2 ಲಕ್ಷದಂತೆ ₹4 ಲಕ್ಷಕ್ಕೆ ಬೇಡಿಕೆ ಇಟ್ಟು, ಕಡೆಗೆ ₹3.50 ಲಕ್ಷಕ್ಕೆ ಒಪ್ಪಿಕೊಳ್ಳುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಶ್ವೇತಾ ಈ ವಿಷಯವನ್ನು ಬೇರೆ ಯಾರೊಂದಿಗೆ ಮಾತನಾಡಬಾರದು ಎಂದು ಹೇಳಿದ್ದಾರೆ. ನಂತರ ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಕೇಬಲ್ ಅಳವಡಿಕೆಯ ವಿಷಯ ತಿಳಿಸುತ್ತಾರೆ. ಕೆಲಸಕ್ಕೆ ಸಂಬಂಧಿಸಿದಂತೆ, ಏನೇ ಇದ್ದರೂ ನೋಡಿಕೊಳ್ಳುವಂತೆ ಸೂಚನೆ ನೀಡುತ್ತಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಗುತ್ತಿಗೆದಾರ ವಿಶ್ವನಾಥ್ ಯೂಟರ್ನ್ ಹೊಡೆದಿದ್ದಾರೆ. “ಶ್ವೇತಾ ಬಾಯಿ ಅವರು ಚಂದಾಪುರ ಪಟ್ಟಣ ಪಂಚಾಯಿತಿಯಲ್ಲೂ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಅಂದಿನಿಂದಲೂ ಅವರು ಪರಿಚಯವಿದ್ದರು. ಈ ವಿಡಿಯೋ ಅವರನ್ನು ರೇಗಿಸಲು ಮಾಡಿಕೊಂಡಿದ್ದೆ. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ” ಎಂದಿದ್ದಾರೆ.

“ಈ ವಿಡಿಯೋ ನನ್ನ ಯೂಟ್ಯೂಬ್‌ ಚಾನೆಲ್‌ಗೂ ಅ‍ಪ್ಲೋಡ್ ಮಾಡಲಾಗಿತ್ತು. ನಂತರ, ಆ ವಿಡಿಯೋ ಡಿಲೀಟ್ ಮಾಡಿದ್ದೇನೆ. ಅದೇ ವಿಡಿಯೋ ಈಗ ವೈರಲ್ ಆಗಿದ್ದು, ವಿಡಿಯೋವನ್ನು ಕತ್ತರಿಸಿ ತೋರಿಸಲಾಗುತ್ತಿದೆ. ವಿಡಿಯೋಗೆ ಸಂಬಂಧಿಸಿದಂತೆ, ಈಗಾಗಲೇ ಜಿಲ್ಲಾಧಿಕಾರಿ ಕಚೇರಿಗೆ ಸ್ಪಷ್ಟನೆಯ ಪತ್ರವೊಂದನ್ನು ಸಲ್ಲಿಸಿದ್ದೇನೆ. ಅವರು ವಿಚಾರಣೆಗೆ ಕರೆದರೆ ಹೋಗಿ ಸತ್ಯ ತಿಳಿಸಲು ಸಿದ್ಧನಿದ್ದೇನೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಕಾ.ತ. ಚಿಕ್ಕಣ್ಣನವರ ಸಮಗ್ರ ಸಾಹಿತ್ಯ ಸಂಪುಟ ಬಿಡುಗಡೆ

ಈ ಎಲ್ಲ ಬೆಳವಣಿಗೆಯ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿರುವ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರಾದ ಪ್ರಭುಲಿಂಗ ಕವಳಕಟ್ಟೆ, ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಶ್ವೇತಾಬಾಯಿ ಅವರನ್ನುಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...