ರಾಮನಗರ | ಅರ್ಕಾವತಿ ನದಿಯಲ್ಲಿ ಮಾತ್ರೆಗಳ ರಾಶಿ; ತಪ್ಪಿತಸ್ಥರ ಕ್ರಮಕ್ಕೆ ಭರವಸೆ

Date:

ರಾಮನಗರದ ಹೊರವಲಯದ ದ್ಯಾವರಸೇಗೌಡನ ದೊಡ್ಡಿ ಸೇತುವೆ ಬಳಿ ಅರ್ಕಾವತಿ ನದಿಗೆ ದುಷ್ಕರ್ಮಿಗಳು ಅವಧಿ ಮೀರಿದ ಮಾತ್ರೆಗಳನ್ನು ಸುರಿದು ಹೋಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡಲೇ ಮಾತ್ರೆ ರಾಶಿಯನ್ನು ತೆರವುಗೊಳಿಸಿದ್ದಾರೆ.

ಜಲಮಂಡಳಿ ಎಂಜಿನಿಯರ್ ಅನಿಲ್ ಅವರು ನೀರಿನ ಮಟ್ಟ ಪರಿಶೀಲಿಸಲು ನದಿ ಬಳಿಗೆ ಬಂದಿದ್ದರು. ಆ ವೇಳೆ ಆರೇಳು ಬಾಕ್ಸ್‌ಗಳಲ್ಲಿ ನದಿಗೆ ತಂದು ಎಸೆದು ಹೋಗಿದ್ದ ಮಾತ್ರೆ ರಾಶಿ ಗಮನಿಸಿ ತಕ್ಷಣ ನಗರಸಭೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾರೆ.

ನಗರಸಭೆ ಉಪಾಧ್ಯಕ್ಷ ಸೋಮಶೇಖರ್ ಮಣಿ, ಪರಿಸರ ಎಂಜಿನಿಯರ್ ಸುಬ್ರಹ್ಮಣ್ಯ, ಆರೋಗ್ಯ ನಿರೀಕ್ಷಕ ವಿಜಯಕುಮಾರ್, ತಾಲೂಕು ಆರೋಗ್ಯಾಧಿಕಾರಿ ಉಮಾ ಹಾಗೂ ಇತರರು ಭೇಟಿ ನೀಡಿ ಮಾತ್ರೆಗಳನ್ನು ಪರಿಶೀಲಿಸಿದ್ದಾರೆ. ಬಳಿಕ ತಕ್ಷಣವೇ ಪೌರ ಕಾರ್ಮಿಕರನ್ನು ಸ್ಥಳಕ್ಕೆ ಕರೆಸಿ, ಮಾತ್ರೆಗಳನ್ನು ತೆರವುಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಲವು ಕಂಪನಿಗಳ ಎಲ್ಲ ಮಾತ್ರೆಗಳು ಚೀಲದಲ್ಲಿದ್ದವು. ಅವೆಲ್ಲವೂ ಅವಧಿ ಮುಗಿದಿದ್ದು, ಪ್ಯಾಕಿಂಗ್ ಆಗಿದ್ದರಿಂದ ಇನ್ನೂ ನೀರಿನಲ್ಲಿ ಕರಗಿರಲಿಲ್ಲ. ಅಧಿಕಾರಿ ತೋರಿದ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದ್ದು, ಸಾರ್ವಜನಿಕರು ನದಿಗೆ ಯಾವುದೇ ವಸ್ತುಗಳನ್ನು ಎಸೆಯಬಾರದು. ಇದರಿಂದ ಅದೇ ನೀರನ್ನು ಬಳಸುವವರಿಗೆ ತೊಂದರೆಯಾಗುತ್ತದೆ” ಎಂದು ಸೋಮಶೇಖರ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅನುದಾನ ಮಂಜೂರಾದರೂ ಅಂಗನವಾಡಿ ಕಟ್ಟಡಕ್ಕಿಲ್ಲ ನಿರ್ಮಾಣ ಭಾಗ್ಯ

“ಅರ್ಕಾವತಿ ನದಿಯಲ್ಲಿ ಸಿಕ್ಕಿರುವ ಅವಧಿ ಮೀರಿದ ಮಾತ್ರೆಗಳ ಚೀಲದ ಮೇಲೆ ಐಜೂರು ಬಡಾವಣೆಯ ಧ್ರುವ ಮೆಡಿಕಲ್ ಸ್ಟೋರ್‌ ಹೆಸರು ಇರುವುದು ಪತ್ತೆಯಾಗಿದೆ. ಆತನೇ ಕೃತ್ಯ ಎಸಗಿರುವ ಅನುಮಾನವಿದೆ. ಈ ಕುರಿತು ನಗರಸಭೆ ಪೌರಾಯುಕ್ತರು ನೀಡಿದ ದೂರಿನ ಮೇರೆಗೆ ಮೆಡಿಕಲ್ ಮಾಲೀಕನಿಗೆ ನೊಟೀಸ್ ನೀಡಲಾಗುವುದು. ಜೊತೆಗೆ ಪೊಲೀಸ್ ಠಾಣೆಗೂ ದೂರು ನೀಡಲಾಗುವುದು” ಎಂದು ಜಿಲ್ಲಾ ಔಷಧ ನಿಯಂತ್ರಣ ಇಲಾಖೆಯ ಸಹಾಯಕ ನಿಯಂತ್ರಕಿ ಮಮತಾ ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...