ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ; ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಪೊಲೀಸರು

Date:

ಗೋವು ಸಾಗಾಣಿಕೆ ವೇಳೆ ಇದ್ರೀಷ್ ಪಾಷ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣ ಸಂಬಂಧ ರಾಜಸ್ಥಾನದಲ್ಲಿ ಬಂಧಿಸಲಾಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಆರೋಪಿಗಳನ್ನು ಸಾತನೂರು ಪೊಲೀಸರು ಕನಕಪುರಕ್ಕೆ ಕರೆತಂದಿದ್ದು, ಏಪ್ರಿಲ್‌ 9ರಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ರಾಷ್ಟ್ರೀಯ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ, ಸುರೇಶ್ ಕುಮಾರ್, ಗೋಪಿ, ಪವನ್ ಕುಮಾರ್, ಪಿಲ್ಲಿಂಗ್ ಅಂಬಿಗಾರ್‌ ಬಂಧಿತ ಆರೋಪಿಗಳು.

ಎಫ್ಐಆರ್ ದಾಖಲಾದ ಐವರು ಆರೋಪಿಗಳನ್ನು ಕನಕಪುರದ ಜೆಎಂಎಫ್‌ಸಿ ನ್ಯಾಯಾಧೀಶರ ಮನೆಯಲ್ಲಿ ವಿಚಾರಣೆ ನಡೆಸಿದ್ದು, ಶಿವಮೊಗ್ಗದ ಇಬ್ಬರು ವಕೀಲರು ಪುನೀತ್ ಕೆರೆಹಳ್ಳಿ ತಂಡದ ಪರವಾಗಿ ವಕಾಲತ್ತು ವಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಮೂಲದ ನಿಶಾಂತ್ ಕುಶಾಲಪ್ಪ, ಉಮಾಶಂಕರ್ ಎಂಬ ವಕೀಲರು ವಕಾಲತ್ತು ವಹಿಸಿದ್ದು, ವಿಚಾರಣೆ ನಡೆಸಲಾಗಿದೆ. ಬಳಿಕ ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ.

ಪ್ರಧಾನ ಸಿವಿಲ್ ನ್ಯಾಯಾಧೀಶರು ಅಪ್ಪಣ್ಣ ಸವದಿ ಎದುರು ಆರೋಪಿಗಳನ್ನು ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ

ಕನಕಪುರ ತಾಲೂಕಿನ ಸಾತನೂರು ಬಳಿ ಮಾ.31ರ ರಾತ್ರಿ ಮಂಡ್ಯದಿಂದ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ವಾಹನವನ್ನು ಪುನೀತ್ ಕೆರೆಹಳ್ಳಿ ಹಾಗೂ ಸಂಗಡಿಗರು ತಡೆದಿದ್ದರು. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಇದ್ರೀಸ್‌ ಪಾಷಾ ಸಾವು ಪ್ರಕರಣ: ‘ಬೆಕ್ಕು ಮತ್ತು ಇಲಿ ಆಟ ಮುಗಿದಿದೆ’ ಎಂದ ಅಲೋಕ್‌ ಕುಮಾರ್

ಈ ವೇಳೆ ಕ್ಯಾಂಟರ್​ನಲ್ಲಿದ್ದ ಚಾಲಕ ಹಾಗೂ ಮತ್ತೊಬ್ಬ ಪರಾರಿಯಾಗಿದ್ದರೆ, ವಾಹನದಲ್ಲಿದ್ದ ಇದ್ರೀಷ್ ಪಾಷ ಎಂಬುವರ ಮೃತ ದೇಹ ಘಟನೆ ನಡೆದ 200 ಮೀಟರ್ ದೂರದಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಸಂಬಂಧ ಪುನೀತ್ ಕೆರೆಹಳ್ಳಿ ನೈತಿಕ ಪೊಲೀಸ್‌ಗಿರಿ ಮಾಡಿ ಇದ್ರಿಷ್ ಪಾಷಾರನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ 3 ಎಫ್‍ಐಆರ್ ದಾಖಲಾಗಿತ್ತು. ಮೃತನ ಸಹೋದರನ ದೂರಿನಂತೆ ಪೊಲೀಸರು ಐಪಿಸಿ ಸೆಕ್ಷನ್ 341, 504, 506, 324, 302, 34ರ ಅಡಿ ಪ್ರಕರಣ ದಾಖಲಿಸಿದ್ದರು.

ದೂರು ದಾಖಲಾಗುತ್ತಿದ್ದಂತೆಯೇ ಪುನೀತ್ ಕೆರೆಹಳ್ಳಿ ಹಾಗೂ ಇತರೆ ಆರೋಪಿಗಳು ನಾಪತ್ತೆಯಾಗಿದ್ದರು. ಸಾತನೂರು ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬುಧವಾರ (ಏ.5) ರಾಜಸ್ಥಾನದಲ್ಲಿ ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...