ರಾಮನಗರ | ಗಿಡ ನೆಡುವ ಮೂಲಕ ಜಯಕರ್ನಾಟಕ ಜನಪರ ವೇದಿಕೆಯ 4ನೇ ವಾರ್ಷಿಕೋತ್ಸವ ಆಚರಣೆ

Date:

ಜಯಕರ್ನಾಟಕ ಜನಪರ ವೇದಿಕೆಯ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಅ.5ರ ಶನಿವಾರದಂದು ಕನಕಪುರದ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಗರಸಭಾ ಅಧ್ಯಕ್ಷೆ ಲಕ್ಷ್ಮಿ ಗೋವಿಂದಪ್ಪ, ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರರಾದ ಕುಮಾರಸ್ವಾಮಿ ಆಯೋಜಿಸಿದ್ದ ಪ್ರಗತಿಪರ ಸಂಘಟನೆಗಳ ಉಪಸ್ಥಿತಿಯಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಈ ವೇಳೆ ಕುಮಾರಸ್ವಾಮಿ, ಜಯಕರ್ನಾಟಕ ಜನಪರ ವೇದಿಕೆಯು ಸಂಸ್ಥಾಪನೆಗೊಂಡು ಇಂದಿಗೆ ನಾಲ್ಕು ವರ್ಷಗಳು ಸಂದಿವೆ. ಇದು ಅರ್ಥಪೂರ್ಣ ಮತ್ತು ಫಲವತ್ತಾದ ಯಾನವಾಗಿದೆ. ಇತರರ ಸೇವೆಯಲ್ಲಿ ತೊಡಗಿಸಿಕೊಂಡು ನಿಮ್ಮನ್ನು ನೀವೇ ಹುಡುಕಿಕೊಳ್ಳುವುದು, ಸರ್ವೋತ್ತಮ ಮಾರ್ಗವಾಗಿದೆ ಎಂಬ ಮಾತಿನಂತೆ ಈ ವಾರ್ಷಿಕೋತ್ಸವದ ಸವಿ ನೆನಪನ್ನು ಫಲ ನೀಡುವ ಗಿಡ ನೆಡುವ ಮೂಲಕ ಪ್ರಕೃತಿಯೂ ಸಹ ನಮ್ಮ ಸಂಭ್ರಮದಲ್ಲಿ ಭಾಗಿಯಾಗುವಂತೆ ಈ ಕಾರ್ಯಕ್ರಮ ಆಚರಿಸುತ್ತಾ ಬಂದಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಯಕರ್ನಾಟಕ ಜನಪರ ವೇದಿಕೆಯು ಇಂದು ಇಲ್ಲಿ ಮಾತ್ರವಲ್ಲದೆ ಪ್ರತಿ ತಾಲೂಕು ಹಾಗೂ ಜಿಲ್ಲೆಗಳಲ್ಲಿ ಸಹ ಹಣ್ಣಿನ ಗಿಡ ನೆಡುವ ಮೂಲಕ ಕರ್ನಾಟಕದಾದ್ಯಂತ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ. ನಮ್ಮದು ಕೇವಲ ಕನ್ನಡಪರ ಸಂಘಟನೆಯಲ್ಲದೆ, ಸಾಮಾಜಿಕ ಕೈಂಕರ್ಯಗಳನ್ನು ಸಹ ಅನುಸರಿಸುವ ವಿಶಿಷ್ಠವಾದ ಸಂಘಟನೆ ಎನಿಸಿದೆ. ಸಂಸ್ಥಾಪಕರಾದ ಗುಣರಂಜನ್ ಶೆಟ್ಟಿ, ಹಾಗೂ ರಾಜ್ಯಾಧ್ಯಕ್ಷರಾದ ಶ್ರೀನಿವಾಸ್ ಗೌಡರ ಮಾರ್ಗದರ್ಶನದಲ್ಲಿ ಜಯಕರ್ನಾಟಕ ಜನಪರ ವೇದಿಕೆ ಸಂಘಟನೆಯು ಉತ್ತಮ ಆಶಯಗಳನ್ನು ಹೊತ್ತು ಸಾಗುತ್ತಿದೆ ಎಂದು ನೆನಪಿಸಿದರು.

ramanagar 2

ಜಿಕೆವಿಕೆಯ ನಿವೃತ್ತ ಪ್ರೊಫೆಸರ್ ಪುಟ್ಟರಾಜು ಮಾತನಾಡಿ, ಕನ್ನಡಪರ ಸಂಘಟನೆಯೊಂದು ಪರಿಸರ ಸ್ನೇಹಿ ಕಾರ್ಯಗಳಲ್ಲಿ ಸಹ ಭಾಗಿಯಾಗಿ ಆದರ್ಶ ಮೆರೆಯುತ್ತಿರುವುದು ಸಂತಸಕರ ಸಂಗತಿ. ಕನಕಪುರದಲ್ಲಿ ಕೃಷಿ ಕಾಲೇಜು ಸಹ ಅನುಮೋದನೆಗೊಂಡಿದ್ದು, ಮುಂದೆ ಇಲ್ಲಿನ ಹಸಿರ ಮಡಿಲಿನ ರೈತರ ಮಕ್ಕಳು ಕೃಷಿ ವಿಭಾಗದಲ್ಲಿ ಕಡಿಮೆ ಖರ್ಚಿನಲ್ಲಿ ಪದವೀಧರರಾಗಿ ಪರಿಸರಮುಖಿ ಸಂಶೋಧನೆಗಳಲ್ಲಿ ತೊಡಗಿಕೊಳ್ಳುವುದನ್ನು ಈ ಸಂದರ್ಭದಲ್ಲಿ ಹೇಳಲು ಹೆಮ್ಮೆ ಎನಿಸುತ್ತದೆ ಎಂದರು.

ಜಿಲ್ಲಾ ಲೇಖಕರ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಾಹಿತಿ ಕೂ.ಗಿ. ಗಿರಿಯಪ್ಪ ಮಾತನಾಡಿ, ಕನ್ನಡಪರ ಸಂಘಟನೆಯೊಂದು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮೇಲ್ಪಂಕ್ತಿ ಹಾಕಿ ಕೊಟ್ಟಿದೆ. ಅದಕ್ಕಾಗಿ ಜಯಕರ್ನಾಟಕ ಜನಪರ ವೇದಿಕೆಗೆ ಶುಭ ಹಾರೈಸುತ್ತೇನೆ ಎಂದರು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಒಳಮೀಸಲಾತಿ ಜಾರಿಗೊಳಿಸದಿದ್ದರೆ ಸಿಎಂ ಮನೆಗೆ ಪಾದಯಾತ್ರೆ: ಪಾವಗಡ ಶ್ರೀರಾಮ್

ಕಾರ್ಯಕ್ರಮದಲ್ಲಿ ಸ್ಟುಡಿಯೋ ಚಂದ್ರು, ಪ್ರಶಾಂತ್ ಹೊಸದುರ್ಗ, ಕನ್ನಡ ಭಾಸ್ಕರ್, ಗಬ್ಬಾಡಿ ಕಾಡೇಗೌಡ, ಮಳಗಾಳು ದಿನೇಶ್, ಚೀರಣಗುಪ್ಪೆ ರಾಜೇಶ್, ನಲ್ಲಹಳ್ಳಿ ಶ್ರೀನಿವಾಸ್, ಚಲವಾದಿ ನವೀನ್, ಕೆಬ್ಬಹಳ್ಳಿ ಶಿವರಾಜು, ಪುಟ್ಟಲಿಂಗಯ್ಯ, ಅಸ್ಗರ್ ಖಾನ್, ಅಂಗಡಿ ರಮೇಶ್, ಹಾರೋಹಳ್ಳಿ ಗಿರೀಶ್, ಕುಮಾರ್, ಅಂದಾನಿಗೌಡ, ಕಗ್ಗಲಹಳ್ಳಿ ಲಿಂಗರಾಜು, ಹಾಗೂ ನಗರಸಭೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು‌.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...