ರಾಮನಗರ | ಮನೆ, ಮನಗಳಲ್ಲಿ ನಿತ್ಯವೂ ಕನ್ನಡ ಆಚರಿಸುವ ದೀಕ್ಷೆ ತೊಡಬೇಕು: ಎ ಆರ್ ಗೋವಿಂದಸ್ವಾಮಿ

Date:

ಮನೆ, ಮನಗಳಲ್ಲಿ ನಿತ್ಯವೂ ಕನ್ನಡ ತನವನ್ನು ಆಚರಿಸುವ ದೀಕ್ಷೆ ತೊಡಬೇಕು. ಕನ್ನಡವನ್ನು ಭಾಷಾ ದೃಷ್ಟಿಕೋನದಿಂದಲ್ಲದೇ ಒಗ್ಗಟ್ಟು, ಸಂಸ್ಕೃತಿ, ಗೌರವ ಮತ್ತು ಅಭಿಮಾನದ ಪ್ರತೀಕವಾಗಿ ಕಾಣುವ ಮೂಲಕ ಕನ್ನಡವನ್ನು ಆಚರಿಸಬೇಕು ಎಂದು ಬಂಜಾರ ಭಾಷಾ ಸಂಸ್ಕೃತಿ ಮತ್ತು ಅಕಾಡೆಮಿಯ ಅಧ್ಯಕ್ಷ, ಅಂತಾರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಡಾ. ಎ ಆರ್ ಗೋವಿಂದಸ್ವಾಮಿ ತಿಳಿಸಿದರು.

ರಾಮನಗರದ ನ್ಯೂಎಕ್ಸ್‌ಪರ್ಟ್ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ, ಕನ್ನಡ ಹಬ್ಬ, ಮಕ್ಕಳ ದಿನಾಚರಣೆ ಹಾಗೂ ಎನ್‌ಎಸ್‌ಎಸ್ ಘಟಕದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ಪಠ್ಯೇತರ ಚಟುವಟಿಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಸುಜ್ಞಾನ ಸಂಪಾದನೆಗೂ ಒತ್ತು ಕೊಡಬೇಕು. ನಿರಂತರ ಅಧ್ಯಯನ ಶೀಲತೆ, ಸೃಜನಶೀಲತೆ, ಸಮಾಜ ಸೇವಾ ಮನೋಭಾವ, ರಾಷ್ಟ್ರಾಭಿಮಾನ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಯುವಜನರು ಈ ನೆಲದ ಅಸ್ತಿತ್ವ ಗಟ್ಟಿಗೊಳಿಸುವ ನಾಯಕರಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20241201 WA0026

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲ ಡಾ. ಡಿ ಆರ್ ರವಿಕುಮಾರ್ ಮಾತನಾಡಿ, “ವಿದ್ಯಾರ್ಥಿಗಳು ಉನ್ನತ ಭವಿಷ್ಯವನ್ನು ವಿದ್ಯಾರ್ಥಿ ದೆಸೆಯಲ್ಲಿಯೇ ಕಟ್ಟಿಕೊಳ್ಳುವ ಸಂಕಲ್ಪ ಮಾಡಬೇಕು. ಮಾತೃಭಾಷೆಯನ್ನು ಆರಾಧಿಸುವ, ಪ್ರೀತಿಸುವ ದೃಢಸಂಕಲ್ಪ ಮಾಡಬೇಕು” ಎಂದರು.

ರಾಮನಗರ ಕಸಾಪ ಅಧ್ಯಕ್ಷ ಬಿ ಟಿ ದಿನೇಶ್ ಬಿಳಗುಂಬ, ಚುಟುಕು ಕವಿ ಪೂರ್ಣಚಂದ್ರ, ಹಿರಿಯ ಗಾಯಕ ಚೌ ಪು ಸ್ವಾಮಿ, ಸಾಹಿತಿ ಡಾ ವಿಜಯ್ ರಾಂಪುರ, ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್‌ನ ಚಂದ್ರೇಗೌಡ ಮಾತನಾಡಿದರು.

ಇದನ್ನು ಓದಿದ್ದೀರಾ? ದೆಹಲಿ ಪೊಲೀಸರಿಂದ ಬೆಂಗಳೂರಿನಲ್ಲಿ ಅಕ್ರಮ ಚಟುವಟಿಕೆ : ದೂರು ದಾಖಲು

ವೇದಿಕೆಯಲ್ಲಿ ಉಪ ಪ್ರಾಂಶುಪಾಲ ಆರ್ ಚಂದ್ರಶೇಖರ್, ಸಹಾಯಕ ಪ್ರಾಧ್ಯಾಪಕರಾದ ದಯಾನಂದ ಸ್ವಾಮಿ, ಸುಮತಿಶ್ರೀ ಹಾಗೂ ಉಪನ್ಯಾಸಕ ವೃಂದದವರು ಇದ್ದರು.

ಕಾರ್ಯಕ್ರಮದ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನೂರು ಅಡಿ ಉದ್ದದ ಕನ್ನಡ ಧ್ವಜ ಹಿಡಿದು ಕಲಾ ತಂಡಗಳೊಂದಿಗೆ ಗಣ್ಯರನ್ನು ವೇದಿಕೆಗೆ ಕರೆತರಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...