ರಾಮನಗರ | ಕಟ್ಟಡ ಕಾರ್ಮಿಕರ ಸಂಘಟನೆ ಕಟ್ಟಲು ಸಭೆ: ಕಾರ್ಮಿಕರ ಹಕ್ಕು, ಸೌಲಭ್ಯಗಳ ಕುರಿತು ಮಾಹಿತಿ

Date:

ರಾಮನಗರದ ಸ್ಪಂದನ ಸಂಸ್ಥೆಯಲ್ಲಿ ಭಾನುವಾರದಂದು ರಾಮನಗರ ಕಟ್ಟಡ ಕಾರ್ಮಿಕರ ಸಂಘಟನೆ ಕಟ್ಟಲು ಏರ್ಪಡಿಸಿದ್ದ ಸಭೆಯಲ್ಲಿ ಕಾರ್ಮಿಕರ ಹಕ್ಕು, ಸೌಲಭ್ಯ ಮತ್ತು ಸಂಘಟನೆಯ ಕುರಿತು ಮಾಹಿತಿ ನೀಡಲಾಯಿತು.

ಕಾರ್ಮಿಕ ಮುಖಂಡ ಬಾಲಕೃಷ್ಣ ಶೆಟ್ಟಿಯವರು ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ, ಕಾರ್ಮಿಕರಿಗೆ ಇರುವ ಸೌಲಭ್ಯಗಳ ಕುರಿತು ವಿಸ್ತಾರವಾಗಿ ತಿಳಿಸಿದ್ದು, “ಭಾರತ ಸಂವಿಧಾನದ ಪ್ರಕಾರ ಮಹಿಳೆ ಮತ್ತು ಪುರುಷರಿಬ್ಬರಿಗೂ ಕೂಡ ಮತದಾನದ ಹಕ್ಕು ಸಮಾನವಾಗಿದೆ. ಆದರೆ ವೇತನದಲ್ಲಿ ಮಾತ್ರ ತಾರತಮ್ಯವಿದೆ, ಕಾರ್ಮಿಕರಿಗೆ ಯಾವುದೇ ರೀತಿಯ ಸುರಕ್ಷತೆ ಇಲ್ಲ, 1996ರಲ್ಲಿ ಜಾರಿಯಾದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಕಾನೂನಿನ ಬಗ್ಗೆ 29 ವರ್ಷಗಳಾದರೂ ಕಾರ್ಮಿಕರಿಗೆ ಇದರ ಮಾಹಿತಿ ಇಲ್ಲದಿರುವುದು ದುರಂತ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಟ್ಟಡ ಕಾರ್ಮಿಕರಲ್ಲದವರು ಕಾರ್ಮಿಕ ಇಲಾಖೆಯಿಂದ ನಕಲಿ ಕಾರ್ಮಿಕ ಚೀಟಿ ಮಾಡಿಸಿಕೊಂಡು ಹಲವಾರು ಯೋಜನೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ಮತ್ತು ನಿಜವಾದ ಕಾರ್ಮಿಕರಿಗೆ ಸೌಲಭ್ಯಗಳು ಸಿಗುವಂತೆ ಮಾಡಲು ಸಂಘಟನೆ ಕಟ್ಟುವುದು ಅತಿ ಅವಶ್ಯಕ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಮುಖಂಡ ರಾಘವೇಂದ್ರ ಮಾತನಾಡಿ, ಸಂಘಟನೆ ಕಟ್ಟುವುದರ ಉದ್ದೇಶ ಮತ್ತು ಅದನ್ನು ನಡೆಸಿಕೊಂಡು ಹೋಗುವುದರ ಕುರಿತು ಮಾಹಿತಿ ನೀಡಿದರು. ಕಾರ್ಮಿಕ ಕಾನೂನುಗಳು ಹಾಗೂ ದೇಶಾದ್ಯಂತ ನಡೆದ ಕಟ್ಟಡ ಕಾರ್ಮಿಕರ ಹೋರಾಟಗಳ ಕುರಿತು ತಿಳಿಸಿದರು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅದರ ಕೆಲಸಗಳನ್ನು ವಿವರಿಸಿದರು.

“ಕಾರ್ಮಿಕರು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಹೇಳಿಕೊಂಡರು, ಒಂದು ಕಾರ್ಮಿಕರ ಚೀಟಿ ಮಾಡಿಸಲು ಐನೂರರಿಂದ ಎರಡು ಸಾವಿರದವರೆಗೆ ಕೊಡುವ ಪರಿಸ್ಥಿತಿ ಇದೆ. ಹಾಗಿದ್ದೂ ಕಾರ್ಮಿಕರ ಹಕ್ಕುಗಳು ಕಾರ್ಮಿಕರಿಗೆ ಸಿಗುತ್ತಿಲ್ಲ. ಎಲ್ಲ ಸಮಸ್ಯೆಗಳಿಗೂ ಪರಿಹಾರ ಎನ್ನುವುದು ಸಂಘಟನೆಯೊಂದೇ. ಹಾಗಾಗಿ ಕಾರ್ಮಿಕರೆಲ್ಲರೂ ಸಂಘಟಿತರಾಗಿ ನಮ್ಮ ಹಕ್ಕುಗಳನ್ನು ಪಡೆಯೋಣ” ಎಂದು ನಿರ್ಣಯಿಸಲಾಯಿತು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹದೇವಪ್ಪ ಹರಿಜನ ಹತ್ಯೆ ಪ್ರಕರಣ: ಆರೋಪಿಗಳ ಪತ್ತೆಗೆ ಕಾಲಾವಕಾಶ ಕೇಳಿದ ಎಸ್‌ಪಿ

ಕಾರ್ಯಕ್ರಮದಲ್ಲಿ ನೂರು ಜನ ಕಟ್ಟಡ ನಿರ್ಮಾಣ ಕಾರ್ಮಿಕರು, ಇಬ್ರಾಹಿಂ, ಸಲೀಮ್‌, ಬಾಬಾ ಜಾನ್‌ ಹಾಗೂ ಸ್ಪಂದನ ಸಂಸ್ಥೆಯ ಮಾಲಿನಿ ಅಂತರ್ಜನಂ, ಅಶ್ವತ, ಕಾವ್ಯ, ಪದ್ಮ, ಜಯಶ್ರೀ, ಮೇಘನ ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...