‌ರಾಮನಗರ | ಓಬವ್ವ, ಮನುಕುಲಕ್ಕೇ ಸ್ಫೂರ್ತಿದಾಯಕ ಆದರ್ಶ ಮಹಿಳೆ: ತಹಶೀಲ್ದಾರ್ ಶಿವಕುಮಾರ್

Date:

ವೀರ ವನಿತೆ ಓಬವ್ವ ಈ ನಾಡ ಚರಿತ್ರೆಯ ವೀರ, ಶೌರ್ಯ, ಪರಾಕ್ರಮಕ್ಕೆ ಮನುಕುಲಕ್ಕೆ ಸ್ಫೂರ್ತಿದಾಯಕವಾಗಿದ್ದು, ಅಂದು, ಇಂದು, ಮುಂದೆಂದಿಗೂ ಮಹಿಳೆಯರಿಗೆ ಮಾತ್ರವಲ್ಲದೆ ಇಡೀ ಮನುಕುಲಕ್ಕೇ ಆದರ್ಶ ಮಹಿಳೆಯಾಗಿದ್ದಾರೆ. ಇಂದು ಅವರನ್ನು ಸ್ಮರಿಸುವುದು ನಮ್ಮ ಜನುಮದ ಪುಣ್ಯದಾಯಕ ಕೆಲಸವಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅದ್ಯಕ್ಷತೆ ವಹಿಸಿದ್ದ ಗ್ರೇಡ್ 2 ತಹಶೀಲ್ದಾರ್ ಶಿವಕುಮಾರ್ ಹೇಳಿದರು.

ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವೀರ ವನಿತೆ ಓಬವ್ವನ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಗತಿಪರ ಸಂಘಟನೆಗಳ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, “ವೀರ ವನಿತೆ ಓಬವ್ವನ ಜೀವನಗಾಥೆಯನ್ನು ಪ್ರತಿಯೊಬ್ಬ ಹೆಣ್ಣು ಮಕ್ಕಳಿಗೂ ನಾವು ಬಾಲ್ಯದಿಂದಲೇ ತಿಳಿಸಬೇಕಾಗಿದೆ. ಸಮಾಜದಲ್ಲಿ ನಡೆವ ಅತ್ಯಾಚಾರ, ದೌರ್ಜನ್ಯ, ಶೋಷಣೆಗಳನ್ನು ಮೆಟ್ಟಿ ನಿಲ್ಲಲು ಓಬವ್ವನ ಚರಿತ್ರೆಯ ಜತೆಗೆ ಇತಿಹಾಸ ಪ್ರಸಿದ್ಧ ಇತರ ವೀರ ವನಿತೆಯರ ಯಶೋಗಾಥೆಯನ್ನೇ ನಾವು ತಿಳಿಸಿ ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕಾಗಿದೆ. ಚಿತ್ರದುರ್ಗದ ಕೋಟೆಯಲ್ಲಿನ ಓಬವ್ವನ ಕಿಂಡಿ ನೋಡಿದರೆ ಸಾಕು ಹೃದಯದ ಧಮನಿ, ಧಮನಿಗಳ ರಕ್ತವನ್ನು ರೋಮಾಂಚನಗೊಳಿಸುತ್ತದೆ. ಇಂದಿನ ಎಷ್ಟೋ ಮಕ್ಕಳಿಗೆ ಈ ವಿಚಾರವೇ ತಿಳಿದಿಲ್ಲದಿರುವುದು ದುರ್ದೈವದ ಸಂಗತಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದು ಮಕ್ಕಳು ಸಿನಿಮಾ, ಕ್ರಿಕೆಟ್, ರಾಜಕೀಯ ನಾಯಕರೇ ನಮ್ಮ ಆರಾಧ್ಯ ದೈವ. ಅವರೇ ನಿಜ ನಾಯಕರೆಂದು ಭಾವಿಸಿರುವುದು ಸಮಾಜದ ಮೌಲ್ಯಗಳ ಅವನತಿಗೆ ಹಿಡಿದ ಕೈಗನ್ನಡಿಯಾಗಿದೆ. ಪೋಷಕರು ಹಾಗೂ ಶಿಕ್ಷಕರ ಜತೆಗೆ ಮಾಧ್ಯಮಗಳೂ ಕೂಡಾ ವೀರ ವನಿತೆ ಓಬವ್ವನಂತಹ ಇತಿಹಾಸವನ್ನು ತಿಳಿಸಿ ಅವರಲ್ಲಿ ಮರಳಿ ಮೌಲ್ಯ ತುಂಬವಂತಹ ಜವಾಬ್ದಾರಿ ಅತ್ಯಗತ್ಯವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಣಿಪಾಲ | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಶಾಲಾ ಮಕ್ಕಳ ರಿಕ್ಷಾ: ಮೂವರಿಗೆ ಗಾಯ

ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ ಮಾತನಾಡಿ, “ರಾಷ್ಟ್ರೀಯ ಹಬ್ಬಗಳ ಸಮಿತಿ ಇತಿಹಾಸವನ್ನು ಮರೆತು ಹೋಗುವ ಮನುಕುಲಕ್ಕೆ ಪುಣ್ಯ ಪುರುಷರ ಜಯಂತಿಗಳ ಆಚರಣೆಗಳ ಮೂಲಕ ಅವರನ್ನು ಮುಂದಿನ ಪೀಳಿಗೆಯ ಜನರಿಗೂ ಪರಿಚಯಿಸುತ್ತಿರುವುದು ಅಭಿನಂದನಾರ್ಹ. ಅಂದು ಕೋಟೆ ಕಾಯಲು ಪ್ರಾಣತೆತ್ತ ಓಬವ್ವನ ಆತ್ಮ ಕೂಡ ಈ ಆಚರಣೆಯನ್ನು ಕಂಡು ತೃಪ್ತಭಾವ ಹೊಂದಿರುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಭಾಸ್ಕರ್, ಭಾಜಪ ಅಧ್ಯಕ್ಷ ಕೆ ಪಿ ಕುಮಾರ್, ಹೋರಾಟಗಾರ ಪರಮೇಶ್, ಸರ್ಕಾರಿ ನೌಕರರಾದ ಪ್ರದೀಪ್, ಯಶೋಧ, ಸಿದ್ದಬಸವಯ್ಯ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...