ರಾಮನಗರ | ಪಿತೃಪ್ರಭುತ್ವವು ಪುರುಷರಿಗೂ ಸೀಮಿತತೆ ತರುತ್ತದೆ: ಕಿರಣ

Date:

ಪಿತೃಪ್ರಭುತ್ವವು ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ಒತ್ತಡ ಮತ್ತು ಸೀಮಿತತೆಯನ್ನು ತರುತ್ತದೆ ಎಂದು ತರಬೇತುದಾರರಾದ ಕಿರಣ ಅಭಿಪ್ರಾಯಪಟ್ಟರು.

ರಾಮನಗರದ ಸ್ಪಂದನ ಕಚೇರಿಯಲ್ಲಿ ನಡೆದ ʼಸ್ತ್ರೀವಾದ ಮತ್ತು ಅಸಂಘಟಿತ ಕಾರ್ಮಿಕರ ಕುರಿತ ಅಧ್ಯಯನʼ ವೃತ್ತದಲ್ಲಿ ತರಬೇತುದಾರರಾಗಿ ಮಾತನಾಡಿದ ಅವರು, ಅಸಂಘಟಿತ ಕ್ಷೇತ್ರದ ಕಾರ್ಮಿಕರಾದ ಕಟ್ಟಡ ನಿರ್ಮಾಣ ಕಾರ್ಮಿಕರು, ಬೀಡಿ ಕಾರ್ಮಿಕರು ಮತ್ತು ಕೃಷಿ ಕಾರ್ಮಿಕರೊಂದಿಗೆ ಪಿತೃಪ್ರಭುತ್ವದ ಪರಿಣಾಮಗಳ ಕುರಿತು ಆಳವಾದ ಚರ್ಚೆ ನಡೆಸಿದರು. ಈ ಕಾರ್ಯಕ್ರಮವು ಕೆಲಸದ ಸ್ಥಳದಲ್ಲಿ ಪುರುಷ ಪ್ರಧಾನ ವ್ಯವಸ್ಥೆ ಮತ್ತು ಸಾಮಾಜಿಕ ರಚನೆಗಳು, ಕಾರ್ಮಿಕರ ಜೀವನವನ್ನು ಹೇಗೆ ರೂಪಿಸುತ್ತವೆ ಎಂಬುದನ್ನು ವಿಶ್ಲೇಷಿಸಿತು.

ಕಿರಣ ಅವರು ಸ್ತ್ರೀವಾದದ ಪರಿಕಲ್ಪನೆಯನ್ನು ವಿವರಿಸಿ, ದೈನಂದಿನ ಜೀವನದಲ್ಲಿ ಸ್ತ್ರೀವಾದಿ ಆಲೋಚನೆಗಳನ್ನು ಅಳವಡಿಸಿಕೊಳ್ಳುವ ವಿಧಾನಗಳನ್ನು ತಿಳಿಸಿದರು. ಚಟುವಟಿಕೆಯೊಂದರಲ್ಲಿ ಕಾರ್ಮಿಕರು ತಮ್ಮ ಕೆಲಸದ ಸ್ಥಳಗಳಲ್ಲಿ ಎದುರಿಸುವ ಸವಾಲುಗಳಾದ ಕಡಿಮೆ ವೇತನ, ಅಸುರಕ್ಷಿತ ವಾತಾವರಣ ಮತ್ತು ಲಿಂಗ ಆಧಾರಿತ ತಾರತಮ್ಯವನ್ನು ಪಟ್ಟಿ ಮಾಡಿ, ಅವುಗಳನ್ನು ಎದುರಿಸುವ ಕುರಿತು ತಮ್ಮ ಅನುಭವ ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 06 22 at 6.07.37 PM 1

ಒಳಾಂಗಣ ಆಟವೊಂದರ ಮೂಲಕ ಕಾರ್ಮಿಕರು ತಮ್ಮ ಬಾಲ್ಯದ ಕನಸುಗಳನ್ನು ಈಗಿನ ಜೀವನದೊಂದಿಗೆ ಹೋಲಿಕೆ ಮಾಡಿ, ತಮ್ಮ ಆಕಾಂಕ್ಷೆಗಳು ಈಡೇರದಿರುವ ಕಾರಣಗಳನ್ನು ಚಿಂತಿಸಿದರು. ಕಿರಣ ಅವರು, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ಮೂಲಕ ಭವಿಷ್ಯದ ಪೀಳಿಗೆಗೆ ಉನ್ನತ ಜೀವನವನ್ನು ಕಟ್ಟಿಕೊಡುವಂತೆ ಕಾರ್ಮಿಕರಿಗೆ ಸಲಹೆ ನೀಡಿದರು.

ಇದನ್ನೂ ಓದಿ: ರಾಮನಗರ | ನಿಂತಿದ್ದ ಕ್ಯಾಂಟರ್‌ಗೆ ಬಸ್ ಡಿಕ್ಕಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಸ್ಪಂದನ ಸಂಸ್ಥೆಯು ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಸಾಮೂಹಿಕವಾಗಿ ಕೆಲಸ ಮಾಡಲು ಬದ್ಧವಾಗಿರುವುದನ್ನು ಒತ್ತಿ ಹೇಳುವ ಮೂಲಕ ಒಗ್ಗಟ್ಟಿನ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುವಂತೆ ಕರೆ ನೀಡಿತು.

ಕಾರ್ಯಕ್ರಮದಲ್ಲಿ ಸ್ಪಂದನ ಸಂಸ್ಥೆಯ ಮಾಲಿನಿ, ಅಂತರ್ಜನಂ, ಅಶ್ವತ, ಕಾವ್ಯ, ಅರ್ಶಿಯಾ, ಯಶೋಧ, ರಾಜೇಶ್ವರಿ, ಮಹಾಲಕ್ಷ್ಮಿ, ಮೇಘನಾ ಸೇರಿದಂತೆ ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ 60ಕ್ಕೂ ಹೆಚ್ಚು ವಿವಿಧ ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...