ರಾಮನಗರ | ರೆಕಾರ್ಡ್‌ ರೂಂ ದಾಖಲೆಗಳು ಡಿಜಿಟಲೀಕರಣವಾಗುತ್ತಿವೆ: ಜಿಲ್ಲಾಧಿಕಾರಿ

Date:

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಚೇರಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ರೆಕಾರ್ಡ್ ರೂಂನಲ್ಲಿದ್ದ ಪತ್ರಗಳನ್ನು ಈಗ ಡಿಜಿಟಲೀಕರಣ ಮಾಡಲಾಗುತ್ತಿದೆ. ಮೂರು ತಿಂಗಳೊಳಗೆ ಪ್ರತಿಯೊಂದು ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಸರ್ಕಾರದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.

ಮಾಗಡಿ ತಾಲೂಕು ಕಚೇರಿಯಲ್ಲಿ ಶನಿವಾರ ದಾಖಲಾತಿಗಳ ಸ್ಕ್ಯಾನಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಇಂದಿನಿಂದ ಮೂರು ತಿಂಗಳ ಕಾಲ ಸತತವಾಗಿ ರೆಕಾರ್ಡ್ ರೂಂನಲ್ಲಿರುವ ಎಲ್ಲ ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡಿ ಸರ್ಕಾರದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವ ಕೆಲಸವನ್ನು ಮಾಡಲು ಈಗ ಐದು ಸ್ಕ್ಯಾನರ್‌ಗಳನ್ನು ತರಿಸಲಾಗಿದೆ. ಸೋಮವಾರದ ಬಳಿಕ ಮತ್ತೆ ಐದು ಸ್ಕ್ಯಾನರ್‌ಗಳು ಬರಲಿದ್ದು, 10 ಸ್ಕ್ಯಾನರ್‌ಗಳ ಮೂಲಕ ತರಬೇತಿ ಪಡೆದಿರುವ ಕಂಪ್ಯೂಟರ್ ಆಪರೇಟರ್‌ಗಳ ಮೂಲಕ ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡುವ ಕೆಲಸ ಮಾಡಲಾಗುತ್ತಿದೆ. ಪ್ರತಿದಿನ ಅವರಿಗೆ 5,000 ಪ್ರತಿಗಳ ಸ್ಕ್ಯಾನಿಂಗ್ ಮಾಡುವ ಗುರಿಯನ್ನು ಕೊಡಲಾಗಿದ್ದು, ಸಾರ್ವಜನಿಕರು ಈ ಸಮಯದಲ್ಲಿ ಅಧಿಕಾರಿಗಳ ಜೊತೆ ಸ್ಪಂದಿಸುವ ಕೆಲಸ ಮಾಡಬೇಕು. ಈ ದಾಖಲಾತಿಗಳು ಸ್ಕ್ಯಾನಿಂಗ್ ಬಳಿಕ ಯಾವುದೇ ತೊಂದರೆಗಳಿಲ್ಲದೆ ಕಂಪ್ಯೂಟರ್ ಮೂಲಕ ತಮ್ಮ ದಾಖಲಾತಿಗಳನ್ನು ಪಡೆಯಬಹುದು. ಈ ಸಮಯದಲ್ಲಿ ಸಾರ್ವಜನಿಕರು ಅಧಿಕಾರಿಗಳ ಜೊತೆ ಸೌಮ್ಯವಾಗಿ ವರ್ತಿಸಬೇಕು” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳೆಯ ದಾಖಲಾತಿಗಳು ಸಿಗಲಿವೆ: ರಾಮನಗರ ಜಿಲ್ಲೆಯಲ್ಲಿ ಹಾರೋಹಳ್ಳಿ ತಾಲೂಕಿನಲ್ಲಿ ರೆಕಾರ್ಡ್‌ಗಳನ್ನು ಸಂಪೂರ್ಣ ಸ್ಕ್ಯಾನಿಂಗ್ ಮಾಡಿಸಲಾಗಿದೆ. ಮಾಗಡಿಯಲ್ಲಿ ಕೂಡ ರೆಕಾರ್ಡ್ ರೂಂಗಳ ದಾಖಲಾತಿ ಸ್ಕ್ಯಾನಿಂಗ್ ಮಾಡುವ ಕಾರ್ಯಕ್ಕೆ ಚಾಲನೆ ದೊರೆತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಸತಿನಿಲಯದ ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

“ಸಾರ್ವಜನಿಕರು ತಮಗೆ ಬೇಕಾಗಿರುವ ಪತ್ರಗಳನ್ನು ಪಡೆಯುವುದಕ್ಕೆ ಸಾಕಷ್ಟು ಸಮಯ ಹಿಡಿಯುತ್ತಿದೆ, ಕೆಲವು ದಾಖಲಾತಿಗಳು ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಮಾಗಡಿ ತಾಲೂಕಿನಲ್ಲಿ 2.5 ಲಕ್ಷ ದಾಖಲಾತಿಗಳ ಪೈಕಿ ಪ್ರತಿಯೊಂದು ದಾಖಲಾತಿಗಳನ್ನು ಸ್ಕ್ಯಾನಿಂಗ್ ಮಾಡುವ ಸಮಯದಲ್ಲಿ ಹಳೆಯ ದಾಖಲಾತಿಗಳು ಸಿಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರಿಗೆ ಅಗತ್ಯವಾದ ದಾಖಲಾತಿಗಳನ್ನು ಕೊಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ” ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಇದೇ ವೇಳೆ ತಹಶೀಲ್ದಾರ್ ಸುರೇಂದ್ರ ಮೂರ್ತಿ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...