ರಾಮನಗರ | ಯುವತಿಯೊಂದಿಗೆ ಅಸಭ್ಯ ವರ್ತನೆ, ಲಾರಿ ವಿಚಾರಕ್ಕೆ ಗಲಾಟೆ: ಮಧ್ಯಸ್ಥಿಕನ ಹತ್ಯೆ; 17 ಮಂದಿ ಬಂಧನ

Date:

ಯುವತಿಯೊಂದಿಗೆ ಅಸಭ್ಯ ವರ್ತನೆ ಹಾಗೂ ಲಾರಿ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದು, ಅವರನ್ನು ಸಮಾಧಾನಿಸಲು ಮಧ್ಯಸ್ಥಿಕೆ ವಹಿಸಲು ಹೋದವನನ್ನೇ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಮಂಜುನಾಥ್ ಸೇರಿದಂತೆ 17 ಮಂದಿ ಆರೋಪಿಗಳನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಮನಗರ ತಾಲೂಕಿನ ವಡ್ಡರದೊಡ್ಡಿ ಗೇಟ್ ಬಳಿ ಮೇ.25ರ ಮಧ್ಯರಾತ್ರಿ ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ಮಂಜುನಾಥ್(29) ಎಂಬಾತ ಬರ್ಬರವಾಗಿ ಹತ್ಯೆಯಾಗಿದ್ದ.

ಘಟನೆ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ ದೊಡ್ಡಿ ನಿವಾಸಿ ರಘು, ರಾಮನಗರ ತಾಲೂಕಿನ ಬೆಣ್ಣಹಳ್ಳಿ ನಿವಾಸಿ ಮಂಜುನಾಥ್ ಎಂಬುವವರು ಕಳೆದ ಹಲವು ವರ್ಷಗಳಿಂದ ಪರಿಚಯಸ್ಥರು. ರಘು ಎಂಬಾತನ ಟಿಪ್ಪರ್ ಲಾರಿಗಳನ್ನು ಬಾಡಿಗೆ ಪಡೆದಿದ್ದ ಆರೋಪಿ ಮಂಜುನಾಥ್ ಜಲ್ಲಿ, ಡಸ್ಟ್​, ಕ್ರಷರ್​ಗಳನ್ನು ತುಂಬಿಸಿ ಮಾರಾಟ ಮಾಡುತ್ತಿದ್ದ.

ಕಳೆದ ಹಲವು ತಿಂಗಳಿಂದ ಇಬ್ಬರೂ ಚೆನ್ನಾಗಿಯೇ ಇದ್ದರು. ಆದರೆ, ಈ ಮಧ್ಯೆ ತನ್ನದೇ ಗ್ರಾಮದ ಯುವತಿಯನ್ನು ಪ್ರೀತಿಸಿದ್ದ ಆರೋಪಿ ಮಂಜುನಾಥ್, ಆಕೆಯನ್ನು ಕರೆದೊಯ್ದು ಕೆ.ಎಂ ದೊಡ್ಡಿಯಲ್ಲಿ ಮನೆ ಮಾಡಿಕೊಂಡಿದ್ದ. ಆಕೆಯೊಂದಿಗೆ ರಘು ಅನುಚಿತವಾಗಿ ವರ್ತಿಸಿದ್ದಾನೆ ಎಂಬ ವಿಚಾರಕ್ಕೆ ರಘು ಹಾಗೂ ಮಂಜುನಾಥ್ ನಡುವೆ ಗಲಾಟೆ ನಡೆದಿತ್ತು.

ಇದೇ ವಿಚಾರವಾಗಿ ರಘು ಎಂಬಾತ ಮೇ 22ರಂದು ಕೆ.ಎಂ ದೊಡ್ಡಿ ಠಾಣೆಯಲ್ಲಿ ಮಂಜುನಾಥ್ ಹಾಗೂ ಯುವತಿ ವಿರುದ್ದ ದೂರು ನೀಡಿದ್ದ. ಈ ವಿಚಾರಕ್ಕೆ ಸಿಟ್ಟಾದ ಆರೋಪಿ ಮಂಜುನಾಥ್, ರಘುಗೆ ಸಂಬಂಧಿಸಿದ ಟಿಪ್ಪರ್ ಲಾರಿಯನ್ನು ಮೇ.25ರಂದು ಚಾಲಕ ಬಸವಣ್ಣ ಎಂಬಾತನಿಂದ ಕಿತ್ತುಕೊಂಡು ಹೋಗಿ ಅಜ್ಞಾತ ಸ್ಥಳದಲ್ಲಿ ನಿಲ್ಲಿಸಿದ್ದ. ಇದರಿಂದ ಕುಪಿತಗೊಂಡ ರಘು ಎರಡು ಕಾರಿನಲ್ಲಿ ತನ್ನ ಸ್ನೇಹಿತರನ್ನು ಕರೆದುದೊಯ್ದು ಗಲಾಟೆ ಮಾಡಿದ್ದ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ವಚ್ಛಗೊಳಿಸುವಾಗ ಮ್ಯಾನ್‌ಹೋಲ್‌ಗೆ ಬಿದ್ದ ಸ್ವಚ್ಛತಾ ಸಿಬ್ಬಂದಿ; ಬೆನ್ನು ಮೂಳೆ ಮುರಿತ

ಗಲಾಟೆ ವೇಳೆ, ರಘುಗೆ ಚಾಕುವಿನಿಂದ ಹಲ್ಲೆ ಮಾಡಲು ಆರೋಪಿ ಮುಂದಾಗಿದ್ದಾನೆ. ಈ ವೇಳೆ, ಅಡ್ಡ ಬಂದ ರಘು ಸ್ನೇಹಿತ ಮಂಜುನಾಥ್‌ ಎದೆಗೆ ಆರೋಪಿ ಮಂಜುನಾಥ್‌ ಚುಚ್ಚಿದ್ದಾನೆ. ಸ್ಥಳದಲ್ಲೇ ಮಂಜುನಾಥ್ ಸಾವನ್ನಪ್ಪಿದ್ದಾನೆ. ಸ್ಥಳದಿಂದ ಆರೋಪಿ ಮಂಜುನಾಥ್‌ ಸೇರಿದಂತೆ ರಘು ಮತ್ತಾತನ ಸ್ನೇಹಿತರು ಪರಾರಿಯಾಗಿದ್ದರು. ಇದೀಗ, ಅವರೆಲ್ಲರನ್ನೂ ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...