ರಾಮನಗರ | ಕಸಾಪದಿಂದ ಅಗಲಿದ ಉದ್ಯಮಿ ರತನ್ ಟಾಟಾಗೆ ನುಡಿನಮನ

Date:

ಹಲವು ಕ್ಷೇತ್ರಗಳಲ್ಲಿ ಹಲವಾರು ಉತ್ಪನ್ನಗಳ ಮೂಲಕ ತಮ್ಮದೇ ಆದಂತಹ ಹೊಸ ಛಾಪನ್ನು ಮೂಡಿಸಿದಂತಹವರು ರತನ್ ಟಾಟಾ. ಅವರು ಸದಾ ಬಡವರಿಗಾಗಿ ತುಡಿಯುತ್ತಿದ್ದಂತಹ ಮನಸ್ಸು. ಶ್ರೀಸಾಮಾನ್ಯ ವ್ಯಕ್ತಿಗೂ ದಕ್ಕುವ ದರಗಳಲ್ಲಿ ಅವರ ಉತ್ಪನ್ನಗಳು ದೊರೆಯುತ್ತಿದ್ದವು. ರೈತರೂ ಕಾರಿನಲ್ಲಿ ಓಡಾಡುವ ಕನಸು ಕಂಡಂತಹ ಭಾರತದ ಹೆಮ್ಮೆಯ ಪುತ್ರ ಎಂದು ರಾಮನಗರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಟಿ.ದಿನೇಶ್ ಬಿಳಗುಂಬ ತಿಳಿಸಿದರು.

ರಾಮನಗರದಲ್ಲಿ ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿಕೊಂಡಿದ್ದಂತಹ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಪ್ರೇಮಿ ಬಿ.ಟಿ. ರಾಜೇಂದ್ರ ಮಾತನಾಡಿ, ಮದ್ಯಪಾನ, ಧೂಮಪಾನ ಹೊರತುಪಡಿಸಿ ಮಿಕ್ಕುಳಿದ ಎಲ್ಲಾ ಉತ್ಪನ್ನಗಳಲ್ಲಿಯೂ ತಮ್ಮದೇ ಹೊಸ ಬ್ರಾಂಡ್ ಕಟ್ಟಿಕೊಟ್ಟವರು ರತನ್ ಟಾಟಾ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮದ್ ಮಾತನಾಡಿ, ನನ್ನ ಸ್ನೇಹಿತ ಟಾಟಾ ಎಸ್ ಗಾಡಿ ತಗೊಂಡು ಬದುಕು ರೂಪಿಸಿ ಇಂದು ಮೂರು ಮಹಡಿಯ ಮನೆ ನಿರ್ಮಿಸಿದ್ದಾನೆ. ಅಂತಹ ಬ್ರಾಂಡ್ ನಮ್ಮ ಉದ್ಯಮಿಗಳು ಕಟ್ಟಿಕೊಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಸೇಡಂ | ಕುಡಿಯುವ ನೀರಿಗಾಗಿ ಪರದಾಟ: ಸ್ಲಮ್‌ಬೋರ್ಡ್ ಬಡಾವಣೆ ನಿವಾಸಿಗಳ ಗೋಳು ಕೇಳದ ಅಧಿಕಾರಿಗಳು!

ಕಾರ್ಯಕ್ರಮದಲ್ಲಿ ಮಾತನಾಡಿದ ಅರುಣ್ ಕವಣಾಪುರ, ರತನ್ ಟಾಟಾರ ಬದುಕು ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ. ಅವರ ಸಂಪಾದನೆಯಲ್ಲಿ ಶೇಕಡಾ ಅರವತ್ತು ಭಾಗ ದೇಶಕ್ಕಾಗಿ ಮುಡಿಪಿಟ್ಟವರು. ನವ ಭಾರತದ ಕನಸನ್ನು ಸಾಕಾರಗೊಳಿಸುವ ಕೆಲಸವನ್ನು ಮುಂದಿನ ಉದ್ಯಮಿಗಳಾದರೂ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಾನಪದ ವಿದ್ವಾಂಸ ಡಾ.ಎಂ.ಬೈರೇಗೌಡರು, ಲಕ್ಕಸಂದ್ರ ಮಹದೇವು, ಆರೋಗ್ಯ ಇಲಾಖೆಯ ಸುರೇಶ್, ಸಮಾಜ ಸೇವಕಿ ವೀಣಾ, ನಂಜುಂಡಿ ಬಾನಂದೂರು, ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...