ರಾಮನಗರ | ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರ: ಸೌಲಭ್ಯ ಪಡೆಯುವ ಅರಿವಿನ ಜಾಗೃತಿ

Date:

ಹಲವಾರು ಕಾರ್ಮಿಕರು ಹದಿನೈದು, ಇಪ್ಪತ್ತು ವರ್ಷಗಳಿಂದ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಕಾರ್ಮಿಕರ ಕಾರ್ಡ್‌ ಮಾಡಿಸಿಲ್ಲ. ಅಲ್ಲದೆ ಯಾವುದೇ ರೀತಿಯ ಸೌಲಭ್ಯವನ್ನೂ ಪಡೆದುಕೊಂಡಿಲ್ಲ. ಸೌಲಭ್ಯಗಳ ಕುರಿತು ಮಾಹಿತಿ ಇಲ್ಲದೇ ಇರುವುದೇ ಇದಕ್ಕೆ ಕಾರಣ ಎಂದು ಕಟ್ಟಡ ಕಾರ್ಮಿಕರ ಸಂಘದ ಸಹ ಕಾರ್ಯದರ್ಶಿ ಶಿವಕುಮಾರ್‌ ತಿಳಿಸಿದರು.

ರಾಮನಗರದ ಸ್ಪೂರ್ತಿನಗರದಲ್ಲಿರುವ ಸ್ಪಂದನ ಸಂಸ್ಥೆಯಲ್ಲಿ ಭಾನುವಾರ ನಡೆದ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರದಲ್ಲಿ ಮಾತನಾಡಿ, ಕಾರ್ಮಿಕರಿಗೆ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಿದರು.

“ರಾಮನಗರದ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಕಾರ್ಮಿಕರ ಕಾರ್ಡ್‌ ಮಾಡಿಸಬೇಕೆಂದಿದ್ದರೂ ಕೂಡ ಅವರಿಗೆ ಉಚಿತವಾಗಿ ಸೌಲಭ್ಯಗಳು ದೊರೆಯುತ್ತಿಲ್ಲ ಎಂಬುದು ಸ್ಪಂದನ ನಡೆಸಿದ ಸಮೀಕ್ಷೆಯಲ್ಲಿ ತಿಳಿದುಬಂದಿದೆ. ಈ ಕಾರಣದಿಂದಾಗಿ ಕಟ್ಟಡ ಕಾರ್ಮಿಕರಿಗೆ ಅರಿವು ಮೂಡಿಸುವ ಸಲುವಾಗಿ ಕಟ್ಟಡ ಕಾರ್ಮಿಕರ ಹಕ್ಕುಗಳ ಕುರಿತ ಕಾರ್ಯಗಾರವನ್ನು ಏರ್ಪಡಿಸಲಾಗಿದ್ದು, ಸರ್ಕಾರದಿಂದ ಕಾರ್ಮಿಕರಿಗೆ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾದ ವಿಧಾನ, ಬೇಕಾಗಿರುವ ದಾಖಲೆಗಳ ಕುರಿತು ಕಾರ್ಮಿಕರು ತಿಳಿದುಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಟ್ಟಡ ಕಾರ್ಮಿಕರ ಹಕ್ಕು

“ಕಾರ್ಮಿಕರಿಗೆ ಹಲವಾರು ಯೋಜನೆಗಳು ಇದ್ದು, ಇದನ್ನು ಕಾರ್ಮಿಕರಿಗಿಂತ ಹೆಚ್ಚಾಗಿ ಇತರರು ಬಳಸುತ್ತಿದ್ದಾರೆ. ಆದ್ದರಿಂದ ಕಾರ್ಮಿಕರು ಒಟ್ಟುಗೂಡಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕು ಹಾಗೂ ತಮಗಿರುವ ಹಕ್ಕುಗಳ ಕುರಿತು ಅರಿತುಕೊಳ್ಳಬೇಕು. ಜತೆಗೆ ಕಟ್ಟಡ ನಿರ್ಮಾಣ ಕಾರ್ಮಿಕರಲ್ಲಿ ʼಸಮಾನ ಕೆಲಸಕ್ಕೆ ಸಮಾನ ವೇತನʼ ಎಂಬ ಕಲ್ಪನೆಯೇ ಇಲ್ಲ, ಮಹಿಳೆ ಮತ್ತು ಪುರುಷರಿಗೆ ಸಮಾನ ವೇತನ ದೊರೆಯುವಂತಾಗಬೇಕು. ಇದಕ್ಕಾಗಿ ನಾವೆಲ್ಲರೂ ಜೊತೆಯಾಗಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ದೇಶದಲ್ಲೇ ರಾಜ್ಯದ ತಲಾ ಆದಾಯ ಹೆಚ್ಚಳಕ್ಕೆ ಪಂಚ ಗ್ಯಾರೆಂಟಿಗಳೇ ಕಾರಣ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಸ್ಪಂದನ ಸಂಸ್ಥೆಯ ಮಾಲಿನಿ ಅಂತರ್ಜನಂ, ಸುಪ್ರಿತಾ, ಕಾವ್ಯ, ಯಶೋಧ, ಜಯಶ್ರೀ, ಮಹಾಲಕ್ಷ್ಮಿ, ಮೇಘನಾ, ರಂಗಕರ್ಮಿ ಶ್ರೀನಿವಾಸ್‌ ಹಾಗೂ ರಾಮನಗರದ ವಿವಿಧ ಭಾಗಗಳಿಂದ ಬಂದಿದ್ದ ಐವತ್ತಕ್ಕೂ ಹೆಚ್ಚು ಕಟ್ಟಡ ನಿರ್ಮಾಣ ಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...