ಬಿಡದಿ | ಮೂಕ ಬಾಲಕಿ ಅಪಹರಿಸಿ ಕೊಲೆ, ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಸಂಸ್ಕಾರ

Date:

ರಾಮನಗರ ಜಿಲ್ಲೆ ಬಿಡದಿಯಲ್ಲಿ ಭೀಕರವಾಗಿ ಕೊಲೆಯಾಗಿದ್ದ ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿಯ ಅಂತ್ಯ ಸಂಸ್ಕಾರ ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ನಡೆಯಿತು.

“ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ…” ಎಂದು ಪೋಷಕರು ಹಠ ಹಿಡಿದ್ದರು. ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ಮೇಲೆ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

ಕಳೆದ ಭಾನುವಾರ 14 ವರ್ಷದ ಈ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಕತ್ತು ನುಲುಚಿ, ಬೆನ್ನು ಮೂಳೆ ಮುರಿದು ಕೊಲೆ ಮಾಡಿ ಬಿಡದಿ ಹೋಬಳಿ ಬಳಿಯ ಭದ್ರಾಪುರ ಹತ್ತಿರದ ರೈಲ್ವೆ ಟ್ರಾಕ್‌ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಬಿಡದಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಡಿ ಕೆ ಬಿಡದಿ

ಮೂರು ದಿನಗಳ ಹಿಂದೆ ಅರೆ ನಗ್ನಾವಸ್ಥೆಯಲ್ಲಿ ಶವವಾಗಿ ಪತ್ತೆಯಾದ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ್ದಾಳೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು, ಗ್ರಾಮಕ್ಕೆ ಬುಧವಾರ ಭೇಟಿ ನೀಡಿದಾಗ ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡರು.

“ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದರೆ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ನಿನ್ನೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೂ, ಇನ್ನೂ ವರದಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ. ವರದಿ ಬಂದು ಯಾವ ರೀತಿ ಕೊಲೆ ಮಾಡಿದ್ದಾರೆ? ಅತ್ಯಾಚಾರ ಆಗಿದೆಯೇ ಇಲ್ಲವೊ ಎಂದು ಖಚಿತವಾಗಿ ಹೇಳುವವರೆಗೆ ನಾವು ಮಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದು ಬೆಳಿಗ್ಗೆಯಿಂದ ಪಾಲಕರು ಪಟ್ಟು ಹಿಡಿದಿದ್ದರು.

ಪರಿಹಾರ ವಿತರಣೆ

ಹತ್ಯೆ ಆಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಾಂತ್ವನ ಹೇಳಿ ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್ ನೀಡಿದರು.

ಶಾಸಕ ಡಾ. ರಂಗನಾಥ್, ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್ಪಿ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡ ಗಾಣಕಲ್ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related