ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

Date:

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ ಪರಿಣಮಿಸಿವೆ. ಷೇರು ಮಾರ್ಕೆಟ್ ಹೂಡಿಕೆ, ಆನ್‌ಲೈನ್ ಗೇಮಿಂಗ್, ಫಿಶಿಂಗ್, ಡಿಜಿಟಲ್ ಅರೆಸ್ಟ್ ಮತ್ತು ನಕಲಿ ವೆಬ್‌ಸೈಟ್‌ಗಳಂತಹ ವಿವಿಧ ರೂಪಗಳಲ್ಲಿ ನಡೆಯುತ್ತಿರುವ ಈ ವಂಚನೆಗಳು ಲಕ್ಷಾಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡುತ್ತಿವೆ. ಈಗಾಗಲೇ ಕರ್ನಾಟಕದಲ್ಲಿಯೇ ಸಾವಿರಾರು ಪ್ರಕರಣಗಳು ದಾಖಲಾಗುತ್ತಿದ್ದು, ವಿದ್ಯಾವಂತರೂ ಕೂಡ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ.

ಅಂತೆಯೇ ‘ಲೈಫ್ ಸರ್ಟಿಫಿಕೇಟ್’ ಅಪ್ಡೇಟ್ ಮಾಡಬೇಕಿದೆ ಎಂದು ನಿವೃತ್ತ ನೌಕರರೊಬ್ಬರಿಗೆ ವಾಟ್ಸ್‌ ಆ್ಯಪ್‌ನಲ್ಲಿ ಕರೆ ಮಾಡಿದ ವಂಚಕನೊಬ್ಬ, ನೌಕರನ ಎಟಿಎಂ ಕಾರ್ಡ್ ಸೇರಿದಂತೆ ವಿವಿಧ ಮಾಹಿತಿ ಪಡೆದು ಅವರ ಬ್ಯಾಂಕ್‌ ಖಾತೆಯಿಂದ ₹8 ಲಕ್ಷ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರ ಹೋಬಳಿಯ ಪುಟ್ಟಸ್ವಾಮಿ ಎಂಬುವವರು ಆನ್‌ಲೈನ್ ವಂಚನೆಯ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡವರು. ಹೊಂಗನೂರಿನಲ್ಲಿರುವ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ಪುಟ್ಟಸ್ವಾಮಿ ಅವರಿಗೆ ಡಿಸೆಂಬರ್‌ 25ರಂದು ಸಂಜೆ 4ರ ಸುಮಾರಿಗೆ ಅಪರಿಚಿತನೊಬ್ಬ ವಾಟ್ಸ್‌ಆ್ಯಪ್‌ ಕರೆ ಮಾಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಮ್ಮ ಲೈಫ್ ಸರ್ಟಿಫಿಕೇಟ್ ಇನ್ನೂ ಸ್ವೀಕಾರವಾಗಿಲ್ಲ. ಅದನ್ನು ಅಪ್‌ಡೇಟ್‌ ಮಾಡಬೇಕಿದೆ. ಅದಕ್ಕಾಗಿ ನಿಮ್ಮ ಪಿಂಚಣಿ ಖಾತೆ ಸಂಖ್ಯೆ ಹೇಳಿ” ಎಂದು ಕೇಳಿದ್ದಾನೆ. ಆತನ ಮಾತನ್ನು ನಿಜವೆಂದು ನಂಬಿದ ಪುಟ್ಟಸ್ವಾಮಿಯವರು ಖಾತೆ ನಂಬರ್ ಹಂಚಿಕೊಂಡಿದ್ದಾರೆ.

ಬಳಿಕ ವಂಚಕ, ಎಟಿಎಂ ಕಾರ್ಡಿನ ಸಂಖ್ಯೆ ಹಾಗೂ ಅದರ ಅವಧಿ ಮಾಹಿತಿ ಕೇಳಿದಾಗ ಅದನ್ನೂ ತಿಳಿಸಿದ್ದಾರೆ. ಇದಾದ ಎರಡು ತಾಸಿನ ಬಳಿಕ ಪುಟ್ಟಸ್ವಾಮಿ ಅವರ ಬ್ಯಾಂಕ್ ಖಾತೆಯಿಂದ ಒಮ್ಮೆ ₹4.95 ಲಕ್ಷ ಆರ್‌ಟಿಜಿಎಸ್ ಮೂಲಕ ಹಾಗೂ ₹3.10 ಲಕ್ಷ ಐಎಂಪಿಎಸ್(ತ್ವರಿತ ನಗದು ಪಾವತಿ ಸೇವೆ) ಮೂಲಕ ಕಡಿತವಾಗಿದೆ.

ಮೊಬೈಲ್‌ಗೆ ಖಾತೆಯಿಂದ ಹಣ ಕಡಿತ ಸಂದೇಶ ಬಂದ ಬಳಿಕ ಪುಟ್ಟಸ್ವಾಮಿ ಅವರಿಗೆ ತಾನು ಆನ್‌ಲೈನ್ ವಂಚಕರ ಜಾಲಕ್ಕೆ ಸಿಲುಕಿರುವುದು ಗೊತ್ತಾಗಿದೆ. ಕೂಡಲೇ ಅವರು ಸೈಬರ್ ಸಹಾಯವಾಣಿಗೆ ಕರೆ ಮಾಡಿ, ಉಳಿದ ಮೊತ್ತ ವರ್ಗಾವಣೆಯಾಗದಂತೆ ನೋಡಿಕೊಂಡಿದ್ದಾರೆ. ಬಳಿಕ, ಸಿಇಎನ್ ಠಾಣೆಗೆ ಬಂದು ದೂರು ಕೊಟ್ಟಿದ್ದಾರೆ.

ಎಪಿಕೆ ಲಿಂಕ್‌ ಒತ್ತಿ ಹಣ ಖಾಲಿ

‘ಪಿಎಂ ಕಿಸಾನ್’ ಹೆಸರಿನಲ್ಲಿ ತಮ್ಮ ವಾಟ್ಸ್‌ಆ್ಯಪ್‌ಗೆ ಬಂದ ಎಪಿಕೆ ಫೈಲ್ ಕ್ಲಿಕ್ ಮಾಡಿದ ರೈತರೊಬ್ಬರ ಬ್ಯಾಂಕ್ ಖಾತೆಯಿಂದ ಆನ್‌ಲೈನ್ ವಂಚಕರು ₹62 ಸಾವಿರ ಕಡಿತ ಮಾಡಿಕೊಂಡಿದ್ದಾರೆ. ಹಾರೋಹಳ್ಳಿಯ ಶಂಕರಯ್ಯ ಹಣ ಕಳೆದುಕೊಂಡವರು.

ಹಾರೋಹಳ್ಳಿಯ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿನಲ್ಲಿ ಖಾತೆ ಹೊಂದಿರುವ ಶಂಕರಯ್ಯ ಅವರು, ಕ್ರೆಡಿಟ್ ಕಾರ್ಡನ್ನೂ ಹೊಂದಿದ್ದಾರೆ. ಜತೆಗೆ ಎಸ್‌ಬಿಐ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆ ಹೊಂದಿದ್ದಾರೆ. ಅಕ್ಟೋಬರ್‌ 14ರಂದು ಅವರ ವಾಟ್ಸ್‌ಆ್ಯಪ್‌ಗೆ ಪಿಎಂ ಕಿಸಾನ್ ಹೆಸರಿನ ಎಪಿಕೆ ಫೈಲ್ ಬಂದಿತ್ತು.

ಕುತೂಹಲಕ್ಕೆ ಶಂಕರಯ್ಯ ಅವರು ಲಿಂಕ್ ಕ್ಲಿಕ್ ಮಾಡಿದ್ದರು. ಅದಾದ ಎರಡು ದಿನಗಳ ಬಳಿಕ ಸಂಜೆ 7ರ ಸುಮಾರಿಗೆ ಅವರ ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು, ಅವರ ಕ್ರೆಡಿಟ್ ಕಾರ್ಡ್‌ನಿಂದ ಹಂತ ಹಂತವಾಗಿ ₹41,998 ನಗದು ಕಡಿತ ಮಾಡಿಕೊಂಡಿದ್ದಾರೆ.

ಇದಾದ ಎರಡು ತಿಂಗಳ ಬಳಿಕ ಡಿ. 21ರಂದು ಎಸ್‌ಬಿಐ ಯೊನೊ ಆ್ಯಪ್‌ನಿಂದ ಶಂಕರಯ್ಯ ಅವರ ಮೊಬೈಲ್‌ಗೆ ಮೂರು ಸಲ ಒಟಿಪಿ ಜತೆಗೆ ವಾಟ್ಸ್‌ಆ್ಯಪ್‌ನಲ್ಲಿ ‘ಎಂ’ ಎಂಬ ಸಂದೇಶ ಬಂದಿದೆ. ಇದಾದ ಕೆಲ ಹೊತ್ತಿನಲ್ಲೇ ಎಸ್‌ಬಿಐ ಖಾತೆಯಿಂದ ₹21,000 ಕಡಿತವಾಗಿದೆ.

ವಂಚಕರು ಎರಡು ತಿಂಗಳಲ್ಲಿ ಒಟ್ಟು ₹62,998 ಮೊತ್ತವನ್ನು ವರ್ಗಾಯಿಸಿಕೊಂಡಿದ್ದಾರೆ. ಈ ಕುರಿತು ಶಂಕರಯ್ಯ ನೀಡಿದ ದೂರಿನ ಮೇರಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಡಿ.29, 30ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ : ಡಿಸಿ

ಆದರೆ, ಈ ಆನ್‌ಲೈನ್‌ ವಂಚನೆ ಸಮಸ್ಯೆಗೆ ಸಂಪೂರ್ಣ ನಿರ್ಮೂಲನೆ ಸಾಧ್ಯವಿಲ್ಲದಿದ್ದರೂ, ಎಚ್ಚರಿಕೆ ಮತ್ತು ಜಾಗೃತಿಯೇ ಪ್ರಮುಖ ಪರಿಹಾರವಾಗಿದೆ. ಅಪರಿಚಿತ ಲಿಂಕ್‌ಗಳನ್ನು ಕ್ಲಿಕ್ ಮಾಡದಿರುವುದು, OTP ಅಥವಾ ಬ್ಯಾಂಕ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಿರುವುದು, ಸಂದೇಹಾಸ್ಪದ ಸಂದೇಶಗಳನ್ನು ನಿರ್ಲಕ್ಷಿಸುವುದು ಮತ್ತು cybercrime.gov.in ಪೋರ್ಟಲ್ ಮೂಲಕ ತಕ್ಷಣ ದೂರು ನೀಡುವುದರಿಂದ ಇಂತಹ ವಂಚನೆಗಳಿಂದ ತಪ್ಪಿಸಿಕೊಳ್ಳಬಹುದು.

ಅಂತಿಮವಾಗಿ, ಆನ್‌ಲೈನ್ ಜಗತ್ತಿನ ಅನುಕೂಲಗಳನ್ನು ಸದುಪಯೋಗಪಡಿಸಿಕೊಳ್ಳುತ್ತ, ಸದಾ ಎಚ್ಚರ ವಹಿಸಿದರೆ ಮಾತ್ರ ನಾವು ಇಂತಹ ವಂಚಕರ ಬಲೆಗೆ ಬೀಳದೆ ಸುರಕ್ಷಿತವಾಗಿ ಇರಬಹುದು. ಆನ್‌ಲೈನ್ ವಂಚನೆಯ ವಿರುದ್ಧದ ಅತ್ಯುತ್ತಮ ಅಸ್ತ್ರಗಳೇ ಜಾಗೃತಿ ಮತ್ತು ಎಚ್ಚರಿಕೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...