ಇಂಜಿನಿಯರ್ ದ್ವೇಷ – ಬೆಂಗಳೂರು ಪೊಲೀಸರ ಯಡವಟ್ಟು; ಹಳ್ಳಿ ಮಂದಿಗೆ 5 ಲಕ್ಷ ರೂ. ದಂಡ

Date:

ಗ್ರಾಮಸ್ಥರ ಮೇಲೆ ಎಂಜಿನಿಯರ್‌ ಒಬ್ಬನ ದ್ವೇಷ ಮತ್ತು ಬೆಂಗಳೂರು ಪೊಲೀಸರ ಯಡವಟ್ಟಿನಿಂದಾಗಿ ಗ್ರಾಮವೊಂದರ ಸುಮಾರು 60 ಮಂದಿಗೆ ಸಂಚಾರ ಪೊಲೀಸರು ಸುಮಾರು 5 ಲಕ್ಷ ರೂ. ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ. ದಂಡದ ಮೊತ್ತ ನೋಡಿ ಬೆರಗಾಗಿರುವ ಗ್ರಾಮದ ಜನರು ನ್ಯಾಯಕ್ಕಾಗಿ ಪೊಲೀಸ್‌ ಕಚೇರಿಯ ಮೆಟ್ಟಿಲೇರಿದ್ದಾರೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೆರಳಾಳುಸಂದ್ರ ಗ್ರಾಮದ 60 ಮಂದಿಗೆ ಸಂಚಾರ ನಿಯಮ ಉಲ್ಲಂಘನೆ ಆರೋಪದ ಮೇಲೆ ದಂಡ ವಿಧಿಸಲಾಗಿದೆ. ದಂಡದ ಮಾಹಿತಿ ನೀಡಿ ಬೆರಗಾದ ಗ್ರಾಮಸ್ಥರು ಆ ಕುರಿತು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸರು ತಮಗೆ ದಂಡ ವಿಧಿಸಿರುವುದನ್ನು ಕಂಡು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೆಲ್ಲಕ್ಕೆ ಕಾರಣ ಬೆಂಗಳೂರಿನಲ್ಲಿ ಎಂಜಿನಿಯರ್‌ ಆಗಿರುವ ತಮ್ಮದೇ ಗ್ರಾಮದ ಲೋಕೇಶ್‌ ಎಂದು ಆರೋಪಿಸಿದ್ದಾರೆ.

grama

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಜಿನಿಯರ್ ಲೋಕೇಶ್ ತನ್ನ ಗ್ರಾಮದ ಹಲವಾರು ಮಂದಿಯ ಮೇಲೆ ದ್ವೇಷ, ಅಸೂಯೆ ಹೊಂದಿದ್ದ. ಗ್ರಾಮದಲ್ಲಿದ್ದ ತನ್ನ ಮನೆಯ ಮುಂದೆ ಸಿಸಿ ಕ್ಯಾಮೆರಾ ಅಳವಡಿಸಿಕೊಂಡಿದ್ದ. ತನ್ನ ಮನೆಯ ಮುಂದೆ ವಾಹನಗಳಲ್ಲಿ ಓಡಾಡುವವರ ಚಿತ್ರಗಳನ್ನು ಸೆರೆಹಿಡಿದು, ಸಂಚಾರ ನಿಮಯ ಉಲ್ಲಂಘಿಸಿದ್ದಾರೆಂದು ಬೆಂಗಳೂರು ನಗರ ಪೊಲೀಸರು ಚಾಲ್ತಿಗೆ ತಂದಿರುವ ಬಿಸಿಪಿ ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾನೆ. ಚಿತ್ರಗಳನ್ನು ಕಂಡ ಪೊಲೀಸರು ಘಟನೆಯ ಸ್ಥಳ ಯಾವುದು ಎಂಬುದನ್ನು ಪರಿಶೀಲಿಸದೆ ದಂಡ ವಿಧಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಆತನ ಕೃತ್ಯದಿಂದಾಗಿ ಗ್ರಾಮದ 60 ಮಂದಿ ಬೆಂಗಳೂರಿಗೆ ತಮ್ಮ ವಾಹನಗಳನ್ನು ತರದಿದ್ದರೂ, ಸಂಚಾರ ನಿಯಮ ಉಲ್ಲಂಘನೆಯ ಆರೋಪದಲ್ಲಿ ದಂಡಕ್ಕೆ ತುತ್ತಾಗಿದ್ದಾರೆ. ಲೋಕಶ್‌ ಮಾಡಿರುವ ಕೃತ್ಯದಿಂದ ನಾವು ದಂಡ ಕಟ್ಟುವುದಿಲ್ಲ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ದಾಖಲಿಸಿದ್ದಾರೆ.

“ಬಿಸಿಪಿ ಆ್ಯಪ್‌ಅನ್ನು ದುರ್ಬಳಕೆ ಮಾಡಿರುವ ಲೋಕೇಶ್ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು. ದಂಡವನ್ನು ಮನ್ನಾ ಮಾಡುವ ಕುರಿತು ಬೆಂಗಳೂರು ಪೊಲೀಸರೊಂದಿಗೆ ಚರ್ಚಿಸಲಾಗುವುದು” ಎಂದು ಸಿಪಿಐ ಕೃಷ್ಣ ಲಮಾಣಿ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...