ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಕಾರು ಅಪಘಾತ: ಮಂಡ್ಯದ ಮೂವರ ಸಾವು

Date:

ಮೈಸೂರಿನಿಂದ ಬೆಂಗಳೂರಿಗೆ ವೇಗವಾಗಿ ಬರುತ್ತಿದ್ದ ಕಾರೊಂದು ರಾಮನಗರದ ಜಯಪುರ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು, ಜಯಪುರದ ಬಳಿ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ ಸೇತುವೆಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗೊಜ್ಜಾಗಿದೆ. ಅದರಲ್ಲಿ ನಾಲ್ವರು ಪುರುಷರು ಇದ್ದು, ಅವರಲ್ಲಿ ಮೂವರು ಮೃತಪಟ್ಟಿದ್ದಾರೆ ಹಾಗೂ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿನಲ್ಲಿದ್ದವರೆಲ್ಲರೂ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನವರು ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದಿದ್ದರಿಂದಲೇ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಅಪಘಾತ ನಡೆದ ಸ್ಥಳಕ್ಕೆ ರಾಮನಗರ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಕಾರಿಗೆ ಯೆಲ್ಲೋ ಬೋರ್ಡ್ ಇದ್ದು, ಮೇಲ್ನೋಟಕ್ಕೆ ಇದು ಟ್ಯಾಕ್ಸಿ ಎಂಬುದು ಗೊತ್ತಾಗಿದೆ. ಇದು ಟ್ಯಾಕ್ಸಿ ಬುಕ್ಕಿಂಗ್ ಮಾಡಿಕೊಂಡು ಬಂದಿದ್ದರೇ ಅಥವಾ ಸ್ನೇಹಿತರು ಸೇರಿ ಬಂದಿದ್ದರೇ ಎಂಬುದು ತನಿಖೆಯ ನಂತರ ಗೊತ್ತಾಗಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಜಮೀನು ಕಬಳಿಕೆ ಸಂಚು ಬಯಲು; ತಹಶೀಲ್ದಾರ್ ಸೇರಿ 8 ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆದೇಶ

​ರಾಮನಗರ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ...

ಬೇಗೂರು ದಲಿತರ ಮನೆ ಧ್ವಂಸ ಪ್ರಕರಣ : ತನಿಖಾಧಿಕಾರಿಗಳ ಮೇಲೂ ತನಿಖೆಯಾಗಬೇಕು- ಜ.ಸಂ.ಪರಿಷತ್ ಒತ್ತಾಯ

“ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿನ ಬೇಗೂರಿನಲ್ಲಿ ದಲಿತರ ಮನೆ ಮತ್ತು ದೇವಸ್ಥಾನವನ್ನು...

ಮೈಸೂರು, ಕೊಡಗು ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಮಳೆ

ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು...

ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನ ಕೈಗೊಳ್ಳಲು ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ

ಮಾರ್ಚ್‌ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರವಾಗಿ ತೀರ್ಮಾನ...