ರಾಮನಗರ | ರಾಜ್ಯದ 28 ಕ್ಷೇತ್ರಗಳಲ್ಲೂ ಬಿಎಸ್‌ಪಿ ಸ್ಪರ್ಧೆ: ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ

Date:

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.

ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ ಬಿಎಸ್‌ಪಿ ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣ ಕಾರ್ಯಕ್ರಮ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸಮಿತಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

“ನಮ್ಮ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಐಎನ್‍ಡಿಐಎ(ಇಂಡಿಯಾ) ಜತೆಗೂ ಹೋಗದೆ ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ. ಈ ನಿಟ್ಟಿನಲ್ಲಿ ಡಿಸೆಂಬರ್‌ 10ರಂದು ಪಕ್ಷದ ರಾಷ್ಟ್ರೀಯ ಸಭೆ ನಡೆಯಲಿದ್ದು, ರಾಜ್ಯದ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿಷ್ಠಿತ ಲೋಕಸಭಾ ಕ್ಷೇತ್ರವಾಗಿರುವ ಹಾಗೂ ಡಿ ಕೆ ಸುರೇಶ್ ಸದ್ಯ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರದಲ್ಲಿ ಪಕ್ಷದ ನಾಯಕ ಡಾ ಚಿನ್ನಪ್ಪ ವೈ. ಚಿಕ್ಕಹಾಗಡೆ ಅವರನ್ನು ಈ ಸಲವೂ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಅವರ ಗೆಲುವಿಗಾಗಿ ಕ್ಷೇತ್ರದ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗೂಡಿ ಕೆಲಸ ಮಾಡಬೇಕು” ಎಂದು ಹೇಳಿದರು.

“ಘೋಷಿತ ಅಭ್ಯರ್ಥಿಗಳು ಈಗಿನಿಂದಲೇ ಚುನಾವಣೆಗೆ ತಯಾರಿ ಮಾಡಿಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪರ ಜನಾಭಿಪ್ರಾಯ ರೂಪಿಸಬೇಕು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮಾಡಿರುವ ವಂಚನೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಆ ಮೂಲಕ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು” ಎಂದು ಸಲಹೆ ನೀಡಿದರು.

ಅಭ್ಯರ್ಥಿ ಡಾ. ಚಿನ್ನಪ್ಪ ವೈ. ಚಿಕ್ಕಹಾಗಡೆ ಮಾತನಾಡಿ, “ಕ್ಷೇತ್ರವು ಬಿಬಿಎಂಪಿ, ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳನ್ನೂ ಒಳಗೊಂಡಿದೆ. ಕ್ಷೇತ್ರವನ್ನು ಮೂರು ಬಾರಿ ಪ್ರತಿನಿಧಿಸಿರುವ ಡಿ ಕೆ ಸುರೇಶ್ ಯಾವುದೇ ಕೊಡುಗೆ ನೀಡಿಲ್ಲ. ಚುನಾವಣೆ ಸಂದರ್ಭದಲ್ಲಷ್ಟೇ ಗಮನ ಹರಿಸುವ ಅವರಿಗೆ ಕ್ಷೇತ್ರದ ಅಭಿವೃದ್ಧಿ ಕುರಿತು ಯಾವುದೇ ಕಾಳಜಿ ಇಲ್ಲ” ಎಂದರು.

“ಕಳೆದ ಬಾರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾಗ, ಇಲ್ಲಿನ ಮತದಾರರು ನನಗೆ 20,000 ಮತಗಳನ್ನು ನೀಡಿದ್ದರು. ಈ ಬಾರಿ ಹೆಚ್ಚಿನ ತಯಾರಿ ನಡೆಸುತ್ತಿದ್ದು, ಹಿಂದಿಗಿಂತಲೂ ಹೆಚ್ಚಿನ ಮತಗಳನ್ನು ಪಡೆಯುವತ್ತ ಗಮನ ಹರಿಸಲಾಗಿದೆ. ಹಾಗಾಗಿ ಹಳ್ಳಿಗಳ ಭೇಟಿ ಸೇರಿದಂತೆ ಅಲ್ಲಲ್ಲಿ ಮುಖಂಡರೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸಿ ತಯಾರಿ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಮಾತನಾಡಿ, “ಅಂಬೇಡ್ಕರ್ ಅವರ ಋಣದಲ್ಲಿ ಅಧಿಕಾರ ಅಂತಸ್ತು ಸೇರಿದಂತೆ ಹಲವು ಸ್ಥಾನಮಾನ ಪಡೆದವರು ತಾವು ಯಾರ ಕಾರಣದಿಂದ ಅವೆಲ್ಲವನ್ನೂ ಪಡೆದಿದ್ದಾರೊ ಅವರನ್ನೇ ಮರೆಯುತ್ತಿದ್ದಾರೆ. ಈ ದೇಶದ ಬಹುಸಂಖ್ಯಾತ ಶೋಷಿತ ಹಾಗೂ ಶೂದ್ರ ಸಮುದಾಯಗಳು ಅಂಬೇಡ್ಕರ್ ಅವರು ನೀಡಿದ ಸಂದೇಶ ಹಾಗೂ ಅವರ ತತ್ವಾದರ್ಶಗಳನ್ನು ಪಾಲಿಸುವ ಬದಲು ಅವರ ಭಾವಚಿತ್ರವಿಟ್ಟು ಆರಾಧನೆ ಮಾಡುತ್ತಿವೆ” ಎಂದು ಕಳವಳ ವ್ಯಕ್ತಪಡಿಸಿದರು.

“ಈ ದೇಶದಲ್ಲಿ ಶೋಷಿತರಿಗೆ ಕಾನೂನಾತ್ಮಕ ರಕ್ಷಣೆ ಸಿಕ್ಕಿದ್ದರೆ ಅದು ಅಂಬೇಡ್ಕರ್ ರಚಿಸಿರುವ ಸಂವಿಧಾನದಿಂದಲೇ ಹೊರತು ಯಾವುದೇ ದೇವರುಗಳಿಂದಲ್ಲ. ಶ್ರೀಮಂತರು ಹಾಗೂ ಕೆಲವೇ ಸಮುದಾಯದವರಿಗೆ ಮೀಸಲಾಗಿದ್ದ ಮತದಾನದ ಹಕ್ಕನ್ನು ಎಲ್ಲರಿಗೂ ಕೊಟ್ಟಿದ್ದು ಅಂಬೇಡ್ಕರ್” ಎಂದರು.

ಈ ಸುದ್ದಿ ಓದಿದ್ದೀರಾ? ‌ಕಲಬುರಗಿ | ಅಂಬೇಡ್ಕರ್ ವಿಚಾರಗಳು ನಮಗೆ ಸ್ಪೂರ್ತಿ ನೀಡುತ್ತವೆ: ತಹಶೀಲ್ದಾರ್ ಜಮಖಂಡಿ

“ದೇಶದಲ್ಲಿ ಇಂದಿಗೂ ಪರಿಶಿಷ್ಟರ ಮೇಲೆ ದೌರ್ಜನ್ಯ, ಕೊಲೆ, ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ, ಧರ್ಮಗಳ ನಡುಗೆ ಕೋಮು ಘರ್ಷಣೆಗಳು ನಡೆಯುತ್ತಲೇ‌ ಇವೆ. ದೇಶವನ್ನು ಆಳಿದ ಕಾಂಗ್ರೆಸ್ ಮತ್ತು ಬಿಜೆಪಿ ಈ ದೇಶವನ್ನು ಅಧೋಗತಿಗೆ ಕೊಂಡೊಯ್ದಿದ್ದು, ಹಿಂದೂಗಳು ಒಂದು ಎನ್ನುವವರಿಗೆ ಜಾತಿ ದೌರ್ಜನ್ಯ‌ ಕಾಣುವುದಿಲ್ಲ. ಹಾಗಾಗಿ ಬಹುಸಂಖ್ಯಾತರು ಮತ ಮಾರಿಕೊಳ್ಳದೆ ವಿವೇಚನೆಯಿಂದ ಮತ ಚಲಾಯಿಸಿದರೆ ಮಾತ್ರ ದೇಶದಲ್ಲಿ ಬದಲಾವಣೆ ಸಾಧ್ಯ” ಎಂದು ಅಭಿಪ್ರಾಯಪಟ್ಟರು.

ಪಕ್ಷದ ರಾಮನಗರ ಜಿಲ್ಲಾ ಉಸ್ತುವಾರಿ ಎಂ. ನಾಗೇಶ್, ಅನ್ನದಾನಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಪ್ಪ, ಪ್ರಧಾನ ಕಾರ್ಯದರ್ಶಿ ಮುರುಗೇಶ್, ಮುಖಂಡರುಗಳಾದ ಗೌರಮ್ಮ, ಪಾರ್ವತಮ್ಮ, ಬಸಮ್ಮ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...