ನಷ್ಟದ ನೆಪ – ರೈತರ ಜೇಬಿಗೆ ಕತ್ತರಿ; ಪ್ರತಿ ಲೀಟರ್ ಹಾಲಿಗೆ 2 ರೂ. ಕಡಿತ

Date:

ಬೆಂಗಳೂರು ಹಾಲು ಒಕ್ಕೂಟ (ಬಮುಲ್) ಬರೋಬ್ಬರಿ 67 ಕೋಟಿ ರೂ. ನಷ್ಟ ಅನುಭವಿಸಿದೆ ಎಂದು ಹೇಳಿಕೊಂಡಿದ್ದು, ತನ್ನ ನಷ್ಟವನ್ನು ಸರಿದೂಗಿಸಲು ರೈತರ ಜೇಬಿಗೆ ಕತ್ತರಿ ಹಾಕಲು ಮುಂದಾಗಿದೆ. ರೈತರಿಂದ ಖರೀದಿಸುವ ಹಾಲಿನ ದರದಲ್ಲಿ 2 ರೂ. ಕಡಿತ ಮಾಡುವುದಾಗಿ ಹೇಳಿದೆ. ಬಮುಲ್ ನಿರ್ಧಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳಿಯ ಬೈರಾಪಟ್ಟಣದಲ್ಲಿರುವ ಬಮುಲ್ ಕಚೇರಿಯಲ್ಲಿ ರೈತರೊಂದಿಗೆ ಬಮೂಲ್ ವ್ಯವಸ್ಥಾಪಕ ಡಾ. ಶ್ರೀಧರ್ ಸಭೆ ನಡೆಸಿದ್ದಾರೆ. “ಬಮುಲ್ ನಷ್ಟದಲ್ಲಿದೆ. ಹಾಲು ಒಕ್ಕೂಟಕ್ಕೆ ಲಾಭ ದೊರೆತಾಗ, ರೈತರಿಂದ ಪಡೆಯುವ ಹಾಲಿನ ದರವನ್ನು ಹೆಚ್ಚಿಸಲಾಗುತ್ತದೆ. ಅದೇ ರೀತಿ, ಒಕ್ಕೂಟಕ್ಕೆ ನಷ್ಟವಾದಾಗ ಹಾಲಿನ ದರವನ್ನು ಕಡಿತಗೊಳಿಸಲಾಗುತ್ತದೆ. ಸದ್ಯ, ಬಮುಲ್ ನಷ್ಟದಲ್ಲಿದ್ದು, ಹಾಲಿನ ದರವನ್ನು ಕಡಿತ ಗೊಳಿಸುತ್ತೇವೆ” ಎಂದು ಹೇಳಿದ್ದಾರೆ.

ಬಮುಲ್ ನಿರ್ಧಾರವನ್ನು ಖಂಡಿಸಿರುವ ರೈತರು ಮತ್ತು ರೈತ ಸಂಘದ ಕಾರ್ಯಕರ್ತರು ಬಮೂಲ್ ಹಾಲು ಕೇಂದ್ರದ ಎದುರು ಪ್ರತಿಭಟನೆ ನಡೆಸಿದ್ದಾರೆ. “ವೈಜ್ಞಾನಿಕವಾಗಿ ಹಾಲಿನ ಬೆಲೆ ನಿಗದಿ ಮಾಡದೆ ಒಕ್ಕೂಟವು ರೈತರಿಗೆ ವಂಚಿಸುತ್ತಿದೆ. ರೈತರಿಂದ ಖರೀದಿಸುವ ಹಾಲಿಗೆ 3 ರೂ. ಹೆಚ್ಚಿಸುತ್ತೇವೆಂದು ಹೇಳಿದ್ದರು. ಈಗ, ಅದರಲ್ಲಿ 2 ರೂ. ಕಿತ್ತುಕೊಳ್ಳುತ್ತಿದ್ದಾರೆ. ಇದು ಅನ್ಯಾಯ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಲು

“ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಜಾನುವಾರುಗಳ ಮೇವಿನ ಕೊರತೆ ಉಂಟಾಗಿದೆ. ಪಶುಆಹಾರದ ಬೆಲೆಯೂ ಏರುತ್ತಿದೆ. ಹೀಗಿರುವಾಗ ಹಾಲಿನ ಬೆಲೆ ಕಡಿತ ಮಡುವುದು ರೈತರಿಗೆ ಗಾಯದ ಮೆಲೆ ಬರೆ ಎಳೆದಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹಾಲು ಉತ್ಪಾದನೆಯಲ್ಲಿ ಬಮೂಲ್ ಪ್ರಥಮ ಸ್ಥಾನದಲ್ಲಿದೆ. ಆದರೆ, ಅನವಶ್ಯ ಆಡಳಿತ್ಮಾಕ ವೆಚ್ಚ, ಮತ್ತಿತರ ಸೌಲಭ್ಯದಿಂದ ಹೆಚ್ಚು ಖರ್ಚು ಮಾಡಲಾಗುತ್ತಿದೆ. ಬಮುತ್ ತನ್ನ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕು. ರೈತರಿಗೆ ನ್ಯಾಯಯುತ ದರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...