ಚಿಂತಾಮಣಿ | ಜೆಸಿಬಿ ಮಾಲೀಕ ರಾಮಸ್ವಾಮಿ ಕೊಲೆ ಆರೋಪಿ ಬಂಧನ; ವೇತನ ಕೊಡದೆ ಸತಾಯಿಸುತ್ತಿದ್ದರಿಂದ ಕೊಲೆ

Date:

ಚಿಂತಾಮಣಿ ನಗರದ ಅಶ್ವಿನಿ ಬಡಾವಣೆಯಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಜೆಸಿಬಿ ಮಾಲೀಕ ರಾಮಸ್ವಾಮಿ ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗುಲ್ಬರ್ಗ ಮೂಲದ ಚಾಲಕ ನಾಗೇಶ್ ಕೊಲೆ ಮಾಡಿರುವ ಆರೋಪಿ. ಜೆಸಿಬಿ ಚಾಲಕನಾಗಿದ್ದ ನಾಗೇಶ್ ವರ್ಷಗಳಿಂದ ರಾಮಸ್ವಾಮಿ ಬಳಿ ಕೆಲಸ ಮಾಡುತ್ತಿದ್ದ. ದಿನಕ್ಕೆ ಸಾವಿರ ರುಪಾಯಿ ದಿನಗೂಲಿ ಕೊಡುತ್ತಿದ್ದರು.

ಕಳೆದ ಒಂದು ವರ್ಷದಿಂದ ರಾಮಸ್ವಾಮಿ ಚಾಲಕ ನಾಗೇಶ್ ಗೆ ವೇತನ ಕೊಡದೆ ಸತಾಯಿಸುತ್ತಿದ್ದರು. ಸುಮಾರು 1.80ಲಕ್ಷ ವೇತನ ಬಾಕಿ ಇತ್ತು. ಕೊಲೆ ನಡೆದ ಹಿಂದಿನ ದಿನ ಇದೆ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ನಾಗೇಶ್ ವೇತನ ಕೊಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಕೊನೆಗೂ ಹಣ ಸಿಗದ ಕಾರಣ ಸಿಟ್ಟಿಗೆದ್ದಿದ್ದ ಆರೋಪಿ ನಾಗೇಶ್ ಫೆಬ್ರವರಿ 13ರಂದು ರಾತ್ರಿ 9.30ರ ಸುಮಾರಿಗೆ ರಾಮಸ್ವಾಮಿ ಮನೆಗೆ ಹೋಗುವಾಗ ಬೈಕ್ ಅಡ್ಡಗಟ್ಟಿ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ರಕ್ತಸ್ರಾವದಿಂದ ರಾಮಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಚಿಂತಾಮಣಿ | ಜಿಸಿಬಿ ರಾಮಸ್ವಾಮಿ ಕೊಲೆ

ಕೂಡಲೇ ಎಚ್ಚೆತ್ತುಕೊಂಡಿದ್ದ ಎಸ್ಪಿ ಕುಶಾಲ್ ಚೌಕ್ಸೆ ವಿಶೇಷ ತಂಡ ರಚಿಸಿ ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಆರೋಪಿ ವಿಳಾಸ ತಿಳಿದುಕೊಂಡು, ಮೊಬೈಲ್ ಅಡ್ರೆಸ್ ಟ್ರ್ಯಾಕ್ ಮಾಡಿದ್ದ ತಂಡ ಗುಲ್ಬರ್ಗ ಪೊಲೀಸರ ನೆರವು ಪಡೆದು ರಾತ್ರಿ 10.30 ವೇಳೆಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಕುಶಾಲ್ ಚೌಕ್ಸೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...