ರಾಮದುರ್ಗ | ಸಂಪೂರ್ಣ ಹದಗೆಟ್ಟ ಹಲಗತ್ತಿ ಗ್ರಾಮದ ರಸ್ತೆ; ಶಾಸಕ ಅಶೋಕ ಪಟ್ಟಣ ವಿರುದ್ಧ ಸಾರ್ವಜನಿಕರ ಆಕ್ರೋಶ

Date:

“ಶಾಸಕ ಅಶೋಕ ಪಟ್ಟಣ ಅವರು ಇದೇ ರಸ್ತೆಯಲ್ಲಿ ಓಡಾಡ್ತ ಇರ್ತಾರೆ. ಆದರೂ, ರಸ್ತೆ ಸರಿ ಮಾಡಬೇಕು ಅಂತ ಅವರಿಗೆ ಅನ್ನಿಸಿಲ್ಲ. ಇದಕ್ಕಿಂತ ದೌರ್ಭಾಗ್ಯ ನಮಗೆ ಇನ್ನೇನಿದೆ”…ಹೀಗಂತ ಆಕ್ರೋಶ ಹೊರ ಹಾಕಿರುವುದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಜನ.

ಹೌದು. ಹಲಗತ್ತಿ ಗ್ರಾಮದ ರಸ್ತೆ ಸಂಪೂರ್ಣವಾಗಿ ಹಾಳಾಗಿ ವರ್ಷಗಳೇ ಕಳೆದಿದೆ. ಆದರೂ, ರಸ್ತೆಯನ್ನು ದುರಸ್ತಿ ಮಾಡುವ ಕಾರ್ಯಕ್ಕೆ ಜನಪ್ರತಿನಿಧಿಗಳಾಗಲೀ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಾಗಲೀ ಮುಂದಾಗಿಲ್ಲ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಹಲಗತ್ತಿ ಗ್ರಾಮದ ವಿಜಯಲಕ್ಷ್ಮಿ, “ಈ ರಸ್ತೆಯಲ್ಲಿ ಬೇರೆ ಬೇರೆ ಜಿಲ್ಲೆಯ ವಾಹನಗಳು ಸಂಚಾರ ಮಾಡುತ್ತವೆ. ಇದು ಮುಖ್ಯ ರಸ್ತೆ ಬೆರೆ. ಶಾಸಕರು ಇದೇ ರಸ್ತೆಯಲ್ಲಿ ಓಡಾಡುತ್ತಾರೆ. ಎಲೆಕ್ಷನ್ ಬಂದಾಗ ಓಟು ಹಾಕಿಸಿಕೊಳ್ಳುತ್ತಾರೆ. ಆಮೇಲೆ ನಾಪತ್ತೆಯಾಗ್ತಾರೆ. ಜನರು ಪ್ರತಿಭಟನೆ ನಡೆಸಿದಾಗ, ರಸ್ತೆಗೆ ಮಣ್ಣು ಹಾಕಿ ಪ್ಯಾಚ್ ವರ್ಕ್ ಮಾಡ್ತಾರೆ. ಅದು ಮತ್ತೆ ಹಾಳಾಗುತ್ತದೆ. ಹಲವು ವರ್ಷಗಳಿಂದ ಇದುವೇ ಪುನರಾವರ್ತನೆಯಾಗ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಬೆಳಗಾಬಿ

ಈ ಕುರಿತು ಕೊರಿಯರ್ ಕೆಲಸ ಮಾಡುವ ಫಾರೂಕ್ ಜೈನೆಖಾನ ಮಾತನಾಡಿ, “ನಾನು ಕೊರಿಯರ್ ಕೆಲಸ ಮಾಡುತ್ತಿರುವುದರಿಂದ ದಿನನಿತ್ಯ ಇದೇ ರಸ್ತೆಯಲ್ಲಿ ಓಡಾಡುತ್ತೇನೆ. ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಓಡಾಡುವುದೇ ಬಹಳ ತ್ರಾಸದ ಕೆಲಸ” ಎಂದು ತಿಳಿಸಿದ್ದಾರೆ.

“ರಸ್ತೆ ಹಾಳಾಗಿರುವುದರಿಂದ ನಮ್ಮ ವಾಹನಗಳು ಸಹ ಹಾಳಾಗುತ್ತಿವೆ. ನಾವು ಓಟು ಹಾಕಿದ್ದೆಲ್ಲ ವ್ಯರ್ಥವಾಗಿದೆ. ಈ ರಸ್ತೆಯ ಸಮಸ್ಯೆಯ ಕುರಿತು ವಿಡಿಯೋ ಮಾಡಿ, ಫೇಸ್‌ಬುಕ್, ಟ್ವಿಟ್ಟರ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಹಾಕಿದ್ದಲ್ಲದೇ, ಶಾಸಕರು, ಸಂಸದರು ಹಾಗೂ ಪ್ರಧಾನಿಯವರಿಗೂ ಟ್ಯಾಗ್ ಮಾಡಿದ್ದೇನೆ. ಆದರೂ ಈವರೆಗೆ ಯಾರೂ ಕೂಡ ಸ್ಪಂದಿಸಿಲ್ಲ. ನಿಮ್ಮ ಸುದ್ದಿಯನ್ನು ನೋಡಿದ ಮೇಲಾದರೂ ರಸ್ತೆ ದುರಸ್ತಿ ಮಾಡಲಿ” ಎಂದು ಫಾರೂಕ್ ಆಗ್ರಹ ವ್ಯಕ್ತಪಡಿಸಿದ್ದಾರೆ.

ಫಾರೂಕ್

ಹಲಗತ್ತಿಯ ಮಾರ್ಗವಾಗಿ ವಿಜಯಪೂರ, ಬಾಗಲಕೋಟೆ, ಧಾರವಾಡ ಮತ್ತು ರಾಮದುರ್ಗ ತಾಲೂಕಿನ ಹಳ್ಳಿಗಳಿಗೆ ದಿನ ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಆದರೆ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು ರಸ್ತೆಯ ತುಂಬೆಲ್ಲಾ ಗುಂಡಿಗಳೇ ತುಂಬಿ ಹೋಗಿವೆ.

ಇದನ್ನು ಓದಿದ್ದೀರಾ? ಬೇಲೆಕೇರಿ ಅದಿರು ಪ್ರಕರಣ | ಕಾಂಗ್ರೆಸ್ ಶಾಸಕ ​ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ, 9 ಕೋಟಿ ದಂಡ

ಮಳೆ ಬಂದರೆ ಈ ರಸ್ತೆಯಲ್ಲಿ ಓಡಾಡಬೇಕಾದರೆ, ವಾಹನ ಸವಾರರು ಹರಸಾಹಸ ಮಾಡಬೇಕಾಗುತ್ತದೆ. ಆದರೆ, ಕೆಲವೊಮ್ಮೆ ಮಣ್ಣು ಹಾಕಿ ಗುಂಡಿಗಳನ್ನು ಮುಚ್ಚುತ್ತಾರೆ. ಮಳೆ ನಂತರ ಮತ್ತೆ ರಸ್ತೆ ಹಾಳಾಗುತ್ತದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಆದಷ್ಟು ಬೇಗನೆ ರಾಮದುರ್ಗ ತಾಲೂಕಿನ ಶಾಸಕರಾದ ಅಶೋಕ ಪಟ್ಟಣ ರಸ್ತೆ ದುರಸ್ತಿ ಮಾಡಲಿ ಎನ್ನುವುದು ಸ್ಥಳೀಯರ ಆಗ್ರಹವಾಗಿದೆ. ಈ ವರದಿಯ ಬಳಿಕ ದುರಸ್ತಿ ಮಾಡುವ ಕಾರ್ಯಕ್ಕೆ ಜನಪ್ರತಿನಿಧಿಗಳಾಗಲೀ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಾಗಲೀ ಸ್ಪಂದಿಸುತ್ತಾರಾ ಕಾದು ನೋಡಬೇಕಿದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...