ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

Date:

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ ಯುವಕನೋರ್ವ ಅಪಹರಿಸಲು ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಅಪಹರಣಕ್ಕೆ ಯತ್ನಿಸಿದ ಆಸಾಮಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿಯನ್ನು ಅಪಹರಿಸುವ ಭರದಲ್ಲಿ ಬಾಲಕಿಯ ಕೈಯಿ, ಬಾಯಿ, ಕಾಲಿಗೆ ಟೇಪಿನಿಂದ ಕಟ್ಟಿ ರಸ್ತೆ ಬದಿ ಎಸೆದಿದ್ದ ಯುವಕ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ನಗರದ ಚಾಮುಂಡಿಪುರ ಲೇಔಟ್‌ನಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಆರೋಪಿ ಯುವಕ ದರ್ಶನ್ (24)ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಮುಂಡಿಪುರ ಲೇಔಟ್‌ನಲ್ಲಿ ವಾಸವಿರುವ ಸಂತೋಷ್ ಎನ್ನುವವರ ಏಳು ವರ್ಷದ ಪುತ್ರಿಯನ್ನು ಪಕ್ಕದ ಮನೆಯಲ್ಲಿಯೇ ಇದ್ದ ದರ್ಶನ್ ಅಪಹರಿಸಲು ಪ್ರಯತ್ನಿಸಿದ್ದಾನೆ. ಮನೆ ಬಾಡಿಗೆ ಸೇರಿದಂತೆ ಕೈ ಸಾಲಗಳು ಸೇರಿ 2 ಲಕ್ಷ ರೂ.ಗಳ ವರೆಗೂ ಸಾಲ ಮಾಡಿದ್ದ ಆರೋಪಿಯು, ಗಣೇಶ ಹಬ್ಬದ ಸಂದರ್ಭದಲ್ಲೇ ಬಾಲಕಿಯನ್ನು ಅಪಹರಿಸಲು ಸಂಚು ರೂಪಿಸಿದ್ದ.

ಚಾಮುಂಡಿಪುರ ಲೇಔಟ್‌ನಲ್ಲಿ ಪೆಂಡಾಲ್ ಗಣೇಶನನ್ನು ಪ್ರತಿಷ್ಠಾಪಿಸಲಾಗಿತ್ತು. ಅಲ್ಲಿಗೆ ಕುಟುಂಬ ಸಮೇತ ಪೂಜೆಗೆ ತೆರಳಿದ್ದ ಸಂತೋಷ್ ಕುಟುಂಬವನ್ನೆ ಟಾರ್ಗೆಟ್ ಮಾಡಿಕೊಂಡಿದ್ದ. ಆರೋಪಿ, ಬಾಲಕಿಯನ್ನು ಆಟವಾಡಿಸುವುದಾಗಿ ಪುಸಲಾಯಿಸಿದ್ದಾನೆ. ಪರಿಚಯಸ್ಥನಾದ ಕಾರಣಕ್ಕೆ ಬಾಲಕಿ ಕೂಡ ಪ್ರತಿರೋಧ ತೋರಲಿಲ್ಲ.

ಬಾಲಕಿಯ ಕೈಯಿ, ಕಾಲು ಹಾಗೂ ಬಾಯಿಗೆ ಪ್ಲಾಸ್ಟರ್ ಬಿಗಿದು, ಆಕೆಯನ್ನು ಅಪಹರಿಸಲು ಆರೋಪಿ ಮುಂದಾಗಿದ್ದಾನೆ. ಈ ವೇಳೆ ತಮ್ಮ ಮಗಳು ಕಾಣಿಸುತ್ತಿಲ್ಲ ಎಂದು ಪೋಷಕರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಪೆಂಡಾಲ್ ಕೂರಿಸಿದ್ದ 25ಕ್ಕೂ ಹೆಚ್ಚು ಯುವಕರು ಏಕಕಾಲದಲ್ಲಿ ಸುತ್ತಮುತ್ತ ಹುಡುಕಾಡಿದ್ದಾರೆ. ಇದರಿಂದ ಭಯಗೊಂಡ ಆರೋಪಿ ಬಾಲಕಿಯನ್ನು ಸಿಮೆಂಟ್ ಅಂಗಡಿಯೊಂದರ ಮುಂಭಾಗ ಬಿಸಾಡಿ ಓಡಿ ಹೋಗಿದ್ದಾನೆ.

ಯುವಕರ ಗುಂಪು ಬಾಲಕಿಯನ್ನು ಪತ್ತೆ ಮಾಡಿ, ರಕ್ಷಿಸಿದ್ದಾರೆ. ಉಸಿರುಗಟ್ಟುವ ಹಂತದಲ್ಲಿದ್ದ ಬಾಲಕಿ ಚೇತರಿಸಿಕೊಂಡಿದ್ದಾಳೆ. ಇನ್ನೊಂದಷ್ಟು ಯುವಕರು ಆರೋಪಿಯನ್ನು ಬೆನ್ನು ಹತ್ತಿ ಹಿಡಿದಿದ್ದಾರೆ. ಐಜೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮನೆ ಬಾಡಿಗೆ ಕಟ್ಟಬೇಕಿತ್ತು. ಜತೆಗೆ 2 ಲಕ್ಷದಷ್ಟು ಕೈ ಸಾಲ ಮಾಡಿಕೊಂಡಿದ್ದ. ಹೀಗಾಗಿ ಪಕ್ಕದ ಮನೆಯ ಬಾಲಕಿಯನ್ನೇ ಅಪಹರಿಸಿ, ಅವರ ಪೋಷಕರಿಂದ ಹಣ ವಸೂಲಿ ಮಾಡಲು ಸಂಚು ರೂಪಿಸಿದ್ದ ಎಂದು ಪೊಲೀಸರ ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಅವಾಚ್ಯ ನಿಂದನೆ ಆರೋಪ: ಸರ್ಕಾರಿ ವೈದ್ಯರಿಗೆ ಹಲ್ಲೆ; ಒಪಿಡಿ ಬಂದ್, ಪ್ರತಿಭಟನೆ

ಚಾಮುಂಡಿಪುರ ಲೇಔಟ್‌ನ ಸಿಮೆಂಟ್ ಅಂಗಡಿಯ ಪಕ್ಕದಲ್ಲಿ ಮೂಕರೋದನೆಯೊಂದಿಗೆ ಅಳುತ್ತಾ ಬಿದ್ದಿದ್ದ ಬಾಲಕಿಯ ವಿಡಿಯೋ ಎಲ್ಲೆಡೆ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಕೇವಲ ಏಳು ವರ್ಷದ ಕಂದನಿಗೆ ಟೇಪ್ ಸುತ್ತಿ, ಕತ್ತಲಿನಲ್ಲಿ ಬಿಸಾಡಿದ್ದ ವಿಡಿಯೋ ಎಂಥವರ ಕಲ್ಲು ಹೃದಯವನ್ನೂ ಕಲಕುವಂತಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...