ರಾಮನಗರ | ವಕೀಲರು-ಪೊಲೀಸರು-ದಲಿತ ಮುಖಂಡರ ನಡುವೆ ತಿಕ್ಕಾಟ

Date:

ದಲಿತ ಮುಖಂಡರಿಗೆ ಅಪಮಾನಿಸಿದ್ದ ವಕೀಲರ ವಿರುದ್ಧ ದೂರು ಕೊಟ್ಟರೂ, ಪೊಲೀಸರು ಪ್ರಕರಣ ದಾಖಲಿಸಿಲ್ಲ. ಪೊಲೀಸರು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ರಾಮನಗರದ ಐಜೂರು ಪೊಲೀಸ್‌ ಠಾಣೆಯ ಪಿಎಸ್‌ಐ ವಿರುದ್ಧ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿದೆ.

ರಾಮನಗರದ ಐಜೂರು ಸರ್ಕಲ್‌ನಲ್ಲಿ ಮಂಗಳವಾರ ಒಕ್ಕೂಟದ ಮುಖಂಡರು ಮತ್ತು ಕಾರ್ಯಕರ್ತರು ತಮಟೆ ಚಳುವಳಿ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಮತ್ತೊಂದೆಡೆ, ಜಿಲ್ಲಾಧಿಕಾರಿ ಕಚೇರಿಯ ಬಳಿಯೇ ವಕೀಲರ ಸಂಘದ ಸದಸ್ಯರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ವಕೀಲರ ಸಂಘದ 40 ಮಂದಿ ವಕೀಲರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ವಕೀಲರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮತ್ತು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಬೆಂಬಲ ನೀಡಿದ್ದಾರೆ. ಸೋಮವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕುಮ್ಮಿ

ಈ ವೇಳೆ ಮಾತನಾಡಿದ ಎಚ್‌.ಡಿ ಕುಮಾರಸ್ವಾಮಿ, “ಯಾರೋ ರಫೀಕ್ ಎಂಬಾತ ವಕೀಲರ ವಿರುದ್ಧ ದೂರು ನೀಡಿದ್ದಾನೆ. ಯಾರೋ ಪ್ರಗತಿಪರರು ವಕೀಲರ ಸಂಘಕ್ಕೆ ಹೋಗಿ ಗಲಾಟೆ ನಡೆದಿದೆ. ರಾಮನಗರದಲ್ಲಿ ಸ್ಥಳೀಯ ಶಾಸಕ, ಜಿಲ್ಲಾ ಮಂತ್ರಿ ಆಡಳಿತ ನಡೆಸುತ್ತಿದ್ದಾರಾ? ಅಥವಾ ಪ್ರಗತಿಪರರು ಆಡಳಿತ ಮಾಡ್ತಿದ್ದಾರಾ? ನ್ಯಾಯಾಲಯದ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದಿದ್ದದ್ದು ಒಬ್ಬ ಮುಸ್ಲಿಂ, ದೂರು ಕೊಟ್ಟಿದ್ದು ಮುಸ್ಲಿಂ, ಸ್ಥಳೀಯ ಶಾಸಕ ಮುಸ್ಲಿಂ, ಇಲ್ಲಿನ ಪಿಎಸ್‌ಐ ಸಹ ಮುಸ್ಲಿಂ- ಹೀಗಾಗಿ, ಅಲ್ಲಿ ಏನು ನಡೆಯುತ್ತಿದೆ ಅಂತ ಗೊತ್ತಾಗ್ತಿದೆ” ಎಂದು ವಿವಾದಕ್ಕೆ ಕೋಮು ಬಣ್ಣ ಬಳಿದಿದ್ದಾರೆ. ಅಲ್ಲದೆ, ಪಿಎಸ್ಐ‌ ಮತ್ತು ಎಸ್‌ಪಿಯನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಘಟನೆಯ ಹಿನ್ನೆಲೆ

ಗ್ಯಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯ ನೀಡಿದ್ದ ತೀರ್ಪು ಕುರಿತು ರಾಮನಗರದ ವಕೀಲ ಚಾನ್ ಪಾಷಾ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅದು ಹಿಂದು ಧರ್ಮೀಯರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪದ ಮೇಲೆ ವಕೀಲರ ಸಂಘದಿಂದ ಚಾನ್‌ ಪಾಷಾ ಅವರನ್ನು ಸಂಘದ ಜಿಲ್ಲಾಧ್ಯಕ್ಷ ಬಿ.ಎಂ ಶ್ರೀವತ್ಸ ಅವರು ಸಂಘದಿಂದ ವಜಾಗೊಳಿಸಿದ್ದಾರೆ. ಅಲ್ಲದೆ, ಐಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ಚಾನ್‌ ಪಾಷಾ ಅವರನ್ನು ವಜಾಗೊಳಿಸಿರುವ ಹಿನ್ನೆಲೆಯಲ್ಲಿ ದಲಿತ ಮುಖಂಡರು ವಕೀಲರ ಕಚೇರಿಗೆ ತೆರಳಿ, ಚಾನ್‌ ಪಾಷಾ ವಿರುದ್ಧದ ಆರೋಪ ಸುಳ್ಳಿನಿಂದ ಕೂಡಿದೆ. ಅವರನ್ನು ವಜಾಗೊಳಿಸಿರುವುದನ್ನು ಮತ್ತೊಮ್ಮೆ ಪುನರ್‌ ಪರಿಶೀಲಿಸಿ ಎಂದು ಕೇಳಿದ್ದಾರೆ. ಈ ವೇಳೆ, 11 ಮಂದಿ ವಕೀಲರು ದಲಿತ ಮುಖಂಡರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಜಾತಿ ನಿಂದನೆ ಕುರಿತು ದಲಿತ ಮುಖಂಡರು ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಹೋದಾಗ ಪೊಲೀಸರು ಕೇಸ್ ದಾಖಲಿಸಿಕೊಳ್ಳುವುದಿಲ್ಲವೆಂದು ಹೇಳಿದ್ದರು. ಅಲ್ಲದೇ ಯಾವುದೇ ತಪ್ಪು ಮಾಡದ ದಲಿತ ಮುಖಂಡರಿಗೆ ಪೊಲೀಸ್‌ ಠಾಣೆಯಿಂದ ನೋಟಿಸ್‌ ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...