ರಾಮನಗರ | ನಿಯಮ ಉಲ್ಲಂಘಿಸಿ ರಾಯಸಂದ್ರದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಕ್ರಮಕ್ಕೆ ಆಗ್ರಹ

Date:

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಸಬಾ ಹೋಬಳಿಯ ರಾಯಸಂದ್ರ ಗ್ರಾಮದಲ್ಲಿ ಭೂಪರಿವರ್ತನೆ ನಿಯಮ ಉಲ್ಲಂಘಿಸಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿರುವ ಆರೋಪ ಕೇಳಿಬಂದಿದೆ.

ರಾಯಸಂದ್ರ ಗ್ರಾಮದ ಸರ್ವೇ ನಂಬರ್ 47 ರಲ್ಲಿ ಆ ಖರಾಬು 12 ಗುಂಟೆ ಸೇರಿ 36 ಗುಂಟೆ ಮತ್ತು ಸರ್ವೇ ನಂಬರ್ 431 ರಲ್ಲಿ 30 ಗುಂಟೆ ಸೇರಿ ಒಟ್ಟು 1.26 ಗುಂಟೆ ಜಮೀನನ್ನು ಕೈಗಾರಿಕೆ ಅಂದರೆ ಮಣ್ಣಿನ ಇಟ್ಟಿಗೆ ಕಾರ್ಖಾನೆಗೆ ಭೂಪರಿವರ್ತನೆ ಮಾಡಿಸಿದ್ದು, ಸದ್ಯ ಆ ಜಾಗದಲ್ಲಿ ಮಣ್ಣಿನ ಇಟ್ಟಿಗೆ ಕಾರ್ಖಾನೆ ಬದಲಿಗೆ ಬೃಹತ್ ಐದು ಅಂತಸ್ಥಿನ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಇದು ಭೂಪರಿವರ್ತನ ಕಾರ್ಯ ನಿಯಮ ಉಲ್ಲಂಘನೆ ಆಗಿರುವುದಾಗಿ ಸ್ವಾಮಿ ಹೆಚ್ ಆರ್ ಎಂಬವರು ತಿಳಿಸಿದ್ದಾರೆ.

ತುಂಗಣಿ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದ್ದ ಉದ್ದೇಶವನ್ನು ಬಿಟ್ಟು ಬೇರೆ ಉದ್ದೇಶಕ್ಕೆ ಅನುಮತಿ ನೀಡಿರುವುದು ಕೂಡಾ ಕರ್ತವ್ಯ ಲೋಪ ಹಾಗೂ ನಿಯಮ ಬಾಹಿರವಾಗಿದೆ. ಸ್ವಾಮಿ ಹೆಚ್ ಆರ್ ಅವರು ಈ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ. ತಿಂಗಳುಗಳೇ ಕಳೆದರು ಯಾವುದೇ ರೀತಿಯ ಕ್ರಮವನ್ನು ತೆಗೆದುಕೊಳ್ಳದೇ ಅನೈತಿಕವಾಗಿ ಅಕ್ರಮ ಕಟ್ಟಡಕ್ಕೆ ಕಾನೂನು ಬಾಹಿರವಾಗಿ ಬೆಂಬಲ ನೀಡುತ್ತಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡಿರುವ ದಾಖಲೆಗಳ ಪ್ರಕಾರ ಕಟ್ಟಡ ಕಟ್ಟಿರುವಂತಹ ಸರ್ವೇ ನಂಬರ್ ಜಾಗ ಹಸಿರು ವಲಯಕ್ಕೆ ಸೇರಿದ್ದಾಗಿರುತ್ತದೆ. ಕಟ್ಟಡವನ್ನು ನಿರ್ಮಿಸಲು ರಾಯಸಂದ್ರ ಗ್ರಾಮದ ಖಾತೆ ನಂ: 353/34, 354/35, 355/36 ರಲ್ಲಿ ಕಟ್ಟಡ ನಿರ್ಮಿಸಲು ಗ್ರಾಮ ಪಂಚಾಯಿತಿ ಕೊಟ್ಟಿರುವ ಪರವಾನಿಗೆ ಪಂಚಾಯತ್ ರಾಜ್‌ನ ಅಧಿನಿಯಮಕ್ಕೆ ವಿರುದ್ಧವಾಗಿರುತ್ತದೆ ಎಂದು ತಿಳಿದುಬಂದಿದೆ.

ಕಟ್ಟಡ

ಜಮೀನು ಮಾಲೀಕರು ಆರ್‌ಸಿಸಿ ಮನೆ ನಿರ್ಮಿಸಲು ಅನುಮತಿ ಪಡೆದು ಬೃಹತ್ ಗಾತ್ರದ ಕಟ್ಟಡ ನಿರ್ಮಿಸಿರುತ್ತಾರೆ. 2005 ನೇ ಸಾಲಿನಲ್ಲಿ ಪಿಡಿಓ ಈ ಸರ್ವೇ ನಂಬರ್ ಜಾಗದಲ್ಲಿ ಇಟ್ಟಿಗೆ ಕಾರ್ಖಾನೆಗೆ ಅನುಮತಿ ನೀಡಿದ್ದರು. ಆದರೆ ಅಲ್ಲಿ ಯಾವುದೇ ರೀತಿಯಾದಂತಹ ಕೈಗಾರಿಕೆಯನ್ನು ನಿರ್ಮಿಸಿರುವುದಿಲ್ಲ. ತದನಂತರ ಲೇಔಟ್‌ಗೂ ಅನುಮತಿಯನ್ನು ಕೂಡಾ ನೀಡಿರುತ್ತಾರೆ. ಇದು ಕೂಡಾ ಅಧಿಕಾರಿಗಳ ಕರ್ತವ್ಯ ಲೋಪವಾಗಿರುತ್ತದೆ.

ತುಂಗಣಿ ಗ್ರಾಮ ಪಂಚಾಯಿತಿ ಪಿಡಿಒ ಅವರು, ಮನೆ ಕಟ್ಟಡ ಲೈಸನ್ಸ್ ಪಡೆಯಲು ಜಾಗದ ಮಾಲೀಕರು ಸಲ್ಲಿಸಿರುವಂತಹ ಯಾವುದೇ ದಾಖಲಾತಿಗಳನ್ನು ಮಾಹಿತಿ ಹಕ್ಕಿನ ಅಡಿ ಕೊಡುತ್ತಿಲ್ಲ. ಇದು ಅಧಿಕಾರಿಯ ಕರ್ತವ್ಯ ಲೋಪದ ಜೊತೆಗೆ ಅಕ್ರಮ ಕಟ್ಟಡಕ್ಕೆ ಸಹಕಾರ ನೀಡುವಂತೆ ಇದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಅಕ್ರಮ ಕಟ್ಟಡ

ಅಲ್ಲದೇ, ಈ ಸಂಬಂಧ ಕನಕಪುರ ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿಗೆ ದೂರುದಾರ ಸ್ವಾಮಿ ಅವರು, ದಾಖಲೆಗಳ ಜೊತೆಗೆ ದೂರು ಸಲ್ಲಿಸಿದ್ದಾರೆ. ಆದರೂ, ಇಒ ಕೂಡ ಯಾವುದೇ ಕ್ರಮ ಜರುಗಿಸಿರುವುದಿಲ್ಲ. ಅವರ ಈ ನಡೆ ಅಕ್ರಮ ಕಟ್ಟಡಕ್ಕೆ ಬೆಂಬಲ ನೀಡುವಂತಹ ಅನುಮಾನ ಮೂಡಿಸುತ್ತಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.

ರಾಮನಗರ ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಒ, ತುಂಗಣಿ ಗ್ರಾಮ ಪಂಚಾಯಿತಿಯಲ್ಲಿ ಇರುವಂತಹ ದಾಖಲೆಗಳನ್ನು ಪರಿಶೀಲಿಸಿ ನೋಡಬೇಕು. ಎಲ್ಲವೂ ಕಾನೂನುಬದ್ಧವಾಗಿದ್ದರೆ ಕಟ್ಟಡಕ್ಕೆ ಅನುಮತಿ ನೀಡಿ, ಇಲ್ಲವಾದಲ್ಲಿ ಕಟ್ಟಡವನ್ನು ಈ ಕೂಡಲೇ ತೆರವುಗೊಳಿಸುವಂತೆ ನೋಟಿಸ್ ನೀಡಬೇಕು. ಅಕ್ರಮ ಕಟ್ಟಡಕ್ಕೆ ಬೆಂಬಲಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಹಾಗೂ ಅಕ್ರಮ ಮಾಡಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬೇಕು ಎಂಬುದು ದೂರುದಾರರ ಒತ್ತಾಯವಾಗಿದೆ.

Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...