ರಾಮನಗರ | ಶಿವರಾತ್ರಿ ವಿಶೇಷ; ಶಿವನಿಗೆ ಬಾಡೂಟ ನೈವೇದ್ಯ

Date:

ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಲಘು ಉಪಹಾರ, ಸಿಹಿ ಖಾದ್ಯ ಸೇವನೆಗಳು ನೆನಪಾಗುತ್ತವೆ. ಆದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಾಡಹಳ್ಳಿಯಲ್ಲಿ ವಿಶೇಷ ಆಚರಣೆಯೊಂದು ರೂಢಿಯಲ್ಲಿದೆ.

ಇಲ್ಲಿನ ಚನ್ನಪ್ಪಾಜಿಸ್ವಾಮಿ ಮಠದ ಮಂಠೇಸ್ವಾಮಿಗೆ ಶಿವರಾತ್ರಿ ದಿನ ವಿಧ ವಿಧದ ಬಾಡೂಟ ಸಿದ್ಧಪಡಿಸಿ ನೈವೇದ್ಯ ಮಾಡುವುದರ ಜೊತೆಗೆ ಭಕ್ತರೆಲ್ಲರೂ ಪ್ರಸಾದ ರೂಪದಲ್ಲಿ ಬಾಡೂಟ ಸವಿಯುತ್ತಾರೆ ಎನ್ನುವ ವಿಚಾರ ಬಹುತೇಕರಿಗೆ ಗೊತ್ತಿಲ್ಲ.

ನಿನ್ನೆ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರಾಮಕ್ಕೆ ಸುಮಾರು 5 ರಿಂದ 6 ಸಾವಿರ ಶಿವ ಭಕ್ತರು ಸೇರಿ ಬಾಡೂಟ ಸಿದ್ದಪಡಿಸಿ ಶಿವರಾತ್ರಿ ಆಚರಿಸಿದ್ದಾರೆ. ʼಶಿವ ಸ್ಮಶಾನ ವಾಸಿ, ಭೂತಪ್ರೇತ ಗಣಗಳ ಅಧಿನಾಯಕ. ಆದ್ದರಿಂದ ಆತ ಮಾಂಸ ಸೇವಿಸುತ್ತಾನೆ. ಅದಕ್ಕಾಗಿಯೇ ಅವನಿಗಾಗಿ ಮಾಂಸದ ಭಕ್ಷ್ಯಗಳನ್ನು ಮಾಡಿ ನಮ್ಮಪ್ಪನಿಗೆ ಅರ್ಪಿಸುತ್ತೇವೆʼ ಎಂಬುದು ಅಲ್ಲಿನ ಶಿವ ಭಕ್ತರ ಮಾತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಮನಗರ | ತಾತನ ಪುಣ್ಯ ಕಾರ್ಯ; ನದಿಯಲ್ಲಿ ಮುಳುಗಿ ಮೊಮ್ಮಗಳು, ಸಂಬಂಧಿ ಮಹಿಳೆ ಸಾವು

ಚನ್ನಪ್ಪಾಜಿ ದೇವಾಲಯಕ್ಕೆ ಸುಮಾರು 600 ವರ್ಷಗಳ ಇತಿಹಾಸವಿದ್ದು, ಆಗಿನಿಂದಲೂ ಒಮ್ಮೆಯೂ ಈ ಆಚರಣೆ ನಿಂತಿರುವ ಉದಾಹರಣೆ ಇಲ್ಲ. ಒಂದೊಮ್ಮೆ ನಿಲ್ಲಿಸಿದರೆ, ಏನಾದರೂ ಕೆಡುಕಾಗಬಹುದು ಎನ್ನುವುದು ಗ್ರಾಮಸ್ಥರ ನಂಬಿಕೆ. ಮೊದಮೊದಲು ಚಿಕ್ಕದಾಗಿ ನಡೆಯುತ್ತಿದ್ದ ಈ ಆಚರಣೆ ಈಗ ದೊಡ್ಡ ಮಟ್ಟದಲ್ಲಿ ನಡೆಯುತ್ತದೆ. ಸುತ್ತಲಿನ ಮಂಗಾಡುಹಳ್ಳಿ, ವಿರುಪಾಕ್ಷಿಪುರ, ಬಲ್ಲಾಪಟ್ಟಣ, ಕೋಡಂಬಹಳ್ಳಿ, ಸೋಗಾಲ, ಅಕ್ಕೂರು, ಸಾದಾರಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಜನರು ಒಟ್ಟಿಗೆ ಸೇರಿ ಕುರಿ, ಕೋಳಿಗಳನ್ನು ಬಲಿಕೊಟ್ಟು ಸಾಮೂಹಿಕ ಹರಕೆ ತೀರಿಸುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...