ರಾಮನಗರ | ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ: ನ್ಯಾ. ಸವಿತಾ ಪಿ ಆರ್

Date:

ಮಕ್ಕಳು ಎದುರಿಸುವ ಮಾನಸಿಕ ಒತ್ತಡಗಳನ್ನು ಆರಂಭದಲ್ಲಿಯೇ ಗುರುತಿಸುವ ಮೂಲಕ, ತೊಡಕುಗಳಿಗೆ ಪರಿಹಾರಗಳು ಸಿಗುತ್ತವೆ ಎಂಬ ಆತ್ಮವಿಶ್ವಾಸವನ್ನು ತುಂಬಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ರಾಮನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಸವಿತಾ ಪಿ.ಆರ್. ಅವರು ಹೇಳಿದರು.

ಕಂದಾಯ ಭವನದಲ್ಲಿ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ‘ಮನೋಸಂಗಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಮಾತಾಡಲು ಪೋಷಕರು ಸೂಕ್ತ ವಾತಾವರಣ ಕಲ್ಪಿಸಬೇಕು. ಮಕ್ಕಳು ಹೇಳುವ ಮಾತುಗಳನ್ನು ಪೂರ್ವಾಗ್ರಹವಿಲ್ಲದೆ ಕೇಳಿ, ಅವರಿಗೆ ಬೆಂಬಲ ನೀಡುವುದರಿಂದ ಆಪತ್ತುಗಳನ್ನು ತಪ್ಪಿಸಬಹುದಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡದ ನಡುವೆ ಯೋಗ, ಧ್ಯಾನ, ಕ್ರೀಡೆ ಮತ್ತು ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಒತ್ತಡವನ್ನು ತಾಳಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಕಾನೂನಾತ್ಮಕ ನೆರವು ನೀಡುತ್ತದೆ. ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಜಾಗೃತಿಯನ್ನು ಹೆಚ್ಚಿಸಲು ಸಮಾಜದ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ರಾಮನಗರ

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಕುಮಾರ್ ಕೆ. ಮಾತನಾಡಿ, ಮಾನಸಿಕ ಅನಾರೋಗ್ಯಕ್ಕೆ ಚಿಕಿತ್ಸೆಯನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಪಡೆಯಬಹುದು ಎಂದು ವಿವರಿಸಿದರು.

ಮನೋವೈದ್ಯಕೀಯ ಕಾರ್ಯಕರ್ತೆ ಪದ್ಮರೇಖಾ ಮಾತನಾಡಿ, ಪರೀಕ್ಷಾ ಒತ್ತಡ, ಕೌಟುಂಬಿಕ ಸಮಸ್ಯೆ ಇಲ್ಲವೇ ಆತ್ಮಹತ್ಯೆಯ ಆಲೋಚನೆಯಲ್ಲಿರುವವರು 14416 ಟೇಲಿ ಮಾನಸ್ ಸೇವೆ ಬಳಸಿಕೊಂಡು 24/7 ಉಚಿತ ಸಹಾಯ ಪಡೆಯಬಹುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಗ್ರಂಥಪಾಲಕ ಅಧಿಕಾರಿ ಚನ್ನಕೇಶವ, ಮನೋವೈದ್ಯ ಡಾ. ಆದರ್ಶ್, ನಿಮ್ಹಾನ್ಸ್ ಪ್ರಾಂಶುಪಾಲರು ನರ್ಸಿಂಗ್ ಕಾಲೇಜು ಡಾ. ಕಾತ್ಯಾಯಿನಿ, ಬೆಂಗಳೂರು ನಿಮ್ಹಾನ್ಸ್ ಮನೋವೈದ್ಯಕೀಯ ಸಮಾಜಕಾರ್ಯ ಪ್ರಾಧ್ಯಾಪಕ ಡಾ. ಅನೀಶ್. ವಿ ಚೆರಿಯನ್, ಮನೋರೋಗ ತಜ್ಞ ಡಾ. ಶಿವಸ್ವಾಮಿ, ಮನೋರೋಗ ವಿಭಾಗದ ಮುಖ್ಯಸ್ಥರು ಡಾ.ಕೆ. ಜಾನ್ ವಿಜಯ್ ಸಾಗರ್, ನಿಮ್ಹಾನ್ಸ್ ಮನೋರೋಗ ವಿಭಾಗದ ಪ್ರಾಧ್ಯಾಪಕ ಡಾ.ರಾಜೇಂದ್ರ ಕೆ.ಎಂ ಹಾಗೂ ಆರೋಗ್ಯ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

WhatsApp Image 2024 09 11 at 8.44.07 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...